<p><strong>ಪ್ರತಾಪಗಢ(ಉತ್ತರ ಪ್ರದೇಶ):</strong> ಹಿಂದೂ ಎಂದು ಸುಳ್ಳು ಹೇಳಿಕೊಂಡು ದೇವಾಲಯದಲ್ಲಿ ಹಿಂದೂ ಯುವತಿಯನ್ನು ವಿವಾಹವಾಗಿದ್ದ ಮುಸ್ಲಿಂ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.</p><p>ವ್ಯಕ್ತಿಯ ಬಗ್ಗೆ ಅನುಮಾನಗೊಂಡ ಬೆಲ್ಹಾ ಮಾಯಿ ದೇವಾಲಯದ ಮುಖ್ಯ ಅರ್ಚಕ ಮಂಗಳ ಪ್ರಸಾದ್ ಮಧ್ಯಪ್ರವೇಶದ ಬಳಿಕ ಕೃತ್ಯ ಬೆಳಕಿಗೆ ಬಂದಿದ್ದು, ಆರೋಪಿ ವಿರುದ್ಧ ಕ್ರಮ ಆರಂಭಿಸಲಾಗಿದೆ ಎಂದು ಪೂರ್ವ ವಿಭಾಗದ ಎಎಸ್ಪಿ ಶೈಲೇಂದ್ರ ಪ್ರಸಾದ್ ತಿಳಿಸಿದ್ದಾರೆ.</p><p>ದೇವಾಲಯದಲ್ಲಿ ಯುವತಿ ಮತ್ತು ವ್ಯಕ್ತಿ ಮದುವೆಯಾಗುತ್ತಿರುವುದನ್ನು ಗಮನಿಸಿದ ಅರ್ಚಕ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮದುಬೆಯಾದ ಜೋಡಿಯ ಹೆಸರನ್ನು ಕೇಳಿದಾಗ ನನಗೆ ಅನುಮಾನ ಹುಟ್ಟಿದೆ ಎಂದು ಅರ್ಚಕರು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.</p><p>ಯುವತಿಯು ಪ್ರಯಾಗ್ ರಾಜ್ನ ಮಲಾಕದ ಶಾಲಿನಿ ಪ್ರತಾಪ್ ಎಂದು ತನ್ನ ಹೆಸರು ಹೇಳಿದರೆ, ವ್ಯಕ್ತಿಯು ಮಲಾಕದ ರಾಜೀವ್ ಎಂದು ಹೇಳಿದ್ದಾಗಿ ಅರ್ಚಕರು ದೂರಿನಲ್ಲಿ ಉಲ್ಲೇಕಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.</p><p>ವಿಚಾರಣೆ ವೇಳೆ ವ್ಯಕ್ತಿ ಬಳಿ ಆಧಾರ್ ಕಾರ್ಡ್ ಕೇಳಿದಾಗ, ಆತ ತನ್ನ ಹೆಸರು ಮತ್ಲೂಬ್ ಅಲಂ ಎಂದು ಹೇಳಿದ್ದು, ಪ್ರಯಾಗ್ ರಾಜ್ನ ಚಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಎಂದು ತಪ್ಪೊಪ್ಪಿಕೊಂಡಿದ್ಧಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಯುವತಿಯನ್ನು ವಿಚಾರಣೆಗೆ ಒಳಪಡಿಸಿದಾಗ, ಒತ್ತಾಯಪೂರ್ವಕವಾಗಿ ಪ್ರೇಮದ ಬಲೆಗೆ ಬೀಳಿಸಿಕೊಂಡಿದ್ದ ವ್ಯಕ್ತಿ, ಮತಾಂತರಕ್ಕೆ ಒತ್ತಡವನ್ನೂ ಹಾಕಿದ್ದ ಎಂದು ತಿಳಿದುಬಂದಿದೆ.</p><p>ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ.</p><p>ಬಂಧಿತನ ವಿರುದ್ಧ ಕಾನೂನುಬಾಹಿರ ಮತಾಂತರ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರತಾಪಗಢ(ಉತ್ತರ ಪ್ರದೇಶ):</strong> ಹಿಂದೂ ಎಂದು ಸುಳ್ಳು ಹೇಳಿಕೊಂಡು ದೇವಾಲಯದಲ್ಲಿ ಹಿಂದೂ ಯುವತಿಯನ್ನು ವಿವಾಹವಾಗಿದ್ದ ಮುಸ್ಲಿಂ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.</p><p>ವ್ಯಕ್ತಿಯ ಬಗ್ಗೆ ಅನುಮಾನಗೊಂಡ ಬೆಲ್ಹಾ ಮಾಯಿ ದೇವಾಲಯದ ಮುಖ್ಯ ಅರ್ಚಕ ಮಂಗಳ ಪ್ರಸಾದ್ ಮಧ್ಯಪ್ರವೇಶದ ಬಳಿಕ ಕೃತ್ಯ ಬೆಳಕಿಗೆ ಬಂದಿದ್ದು, ಆರೋಪಿ ವಿರುದ್ಧ ಕ್ರಮ ಆರಂಭಿಸಲಾಗಿದೆ ಎಂದು ಪೂರ್ವ ವಿಭಾಗದ ಎಎಸ್ಪಿ ಶೈಲೇಂದ್ರ ಪ್ರಸಾದ್ ತಿಳಿಸಿದ್ದಾರೆ.</p><p>ದೇವಾಲಯದಲ್ಲಿ ಯುವತಿ ಮತ್ತು ವ್ಯಕ್ತಿ ಮದುವೆಯಾಗುತ್ತಿರುವುದನ್ನು ಗಮನಿಸಿದ ಅರ್ಚಕ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮದುಬೆಯಾದ ಜೋಡಿಯ ಹೆಸರನ್ನು ಕೇಳಿದಾಗ ನನಗೆ ಅನುಮಾನ ಹುಟ್ಟಿದೆ ಎಂದು ಅರ್ಚಕರು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.</p><p>ಯುವತಿಯು ಪ್ರಯಾಗ್ ರಾಜ್ನ ಮಲಾಕದ ಶಾಲಿನಿ ಪ್ರತಾಪ್ ಎಂದು ತನ್ನ ಹೆಸರು ಹೇಳಿದರೆ, ವ್ಯಕ್ತಿಯು ಮಲಾಕದ ರಾಜೀವ್ ಎಂದು ಹೇಳಿದ್ದಾಗಿ ಅರ್ಚಕರು ದೂರಿನಲ್ಲಿ ಉಲ್ಲೇಕಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.</p><p>ವಿಚಾರಣೆ ವೇಳೆ ವ್ಯಕ್ತಿ ಬಳಿ ಆಧಾರ್ ಕಾರ್ಡ್ ಕೇಳಿದಾಗ, ಆತ ತನ್ನ ಹೆಸರು ಮತ್ಲೂಬ್ ಅಲಂ ಎಂದು ಹೇಳಿದ್ದು, ಪ್ರಯಾಗ್ ರಾಜ್ನ ಚಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಎಂದು ತಪ್ಪೊಪ್ಪಿಕೊಂಡಿದ್ಧಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಯುವತಿಯನ್ನು ವಿಚಾರಣೆಗೆ ಒಳಪಡಿಸಿದಾಗ, ಒತ್ತಾಯಪೂರ್ವಕವಾಗಿ ಪ್ರೇಮದ ಬಲೆಗೆ ಬೀಳಿಸಿಕೊಂಡಿದ್ದ ವ್ಯಕ್ತಿ, ಮತಾಂತರಕ್ಕೆ ಒತ್ತಡವನ್ನೂ ಹಾಕಿದ್ದ ಎಂದು ತಿಳಿದುಬಂದಿದೆ.</p><p>ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ.</p><p>ಬಂಧಿತನ ವಿರುದ್ಧ ಕಾನೂನುಬಾಹಿರ ಮತಾಂತರ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>