<p><strong>ಮುಂಬೈ</strong>: ನಾಗ್ಪುರ ಹಿಂಸಾಚಾರದಲ್ಲಿ ಭಾಗಿಯಾಗಿದವರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು 18 ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p><p>ಹಿಂಸಾಚಾರ ನಡೆದ ದಿನ ಸೋಮವಾರದಿಂದ ಇಲ್ಲಿಯವರೆಗೆ 69 ಜನರನ್ನು ಬಂಧಿಸಲಾಗಿದೆ. ನಾಲ್ಕನೇ ದಿನವಾದ ಗುರುವಾರವೂ ಕೆಲ ಪ್ರದೇಶಗಳಲ್ಲಿ ನಿಷೇಧಾಜ್ಞೆ ಮುಂದುವರಿದಿದೆ.</p><p>ಪೊಲೀಸರು ಇಲ್ಲಿಯವರೆಗೆ 200 ಆರೋಪಿಗಳನ್ನು ಗುರುತಿಸಿದ್ದು, ಸಿಸಿಟಿವಿ ದೃಶ್ಯಗಳ ಸಹಾಯದಿಂದ ಹಿಂಸಾಚಾರದಲ್ಲಿ ಭಾಗಿಯಾಗಿರುವ ಇತರರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ</p><p>ಸೋಮವಾರ, ಗಣೇಶಪೇಟೆ ಮತ್ತು ಕೊತ್ವಾಲಿ ಪೊಲೀಸ್ ಠಾಣೆಗಳಲ್ಲಿ ಐದು ಎಫ್ಐಆರ್ ದಾಖಲಾಗಿದ್ದು, ಇದರಲ್ಲಿ 200 ಆರೋಪಿಗಳನ್ನು ಹೆಸರಿಸಲಾಗಿದೆ.</p><p>ನಾಗ್ಪುರ ಪೊಲೀಸ್ ಆಯುಕ್ತ ಡಾ. ರವೀಂದರ್ ಕುಮಾರ್ ಸಿಂಘಾಲ್ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ವಿಶೇಷ ತಂಡಗಳಲ್ಲಿ ಗಣೇಶಪೇಟೆ, ಕೊತ್ವಾಲಿ ಮತ್ತು ತಹಸಿಲ್ ಪೊಲೀಸ್ ಠಾಣೆಗಳ ಸಿಬ್ಬಂದಿ ಮತ್ತು ಅಪರಾಧ ವಿಭಾಗದ ಸಿಬ್ಬಂದಿ ಸೇರಿದ್ದಾರೆ’ ಎಂದು ಹೇಳಿದ್ದರು.</p><p>ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಯನ್ನು ತೆಗೆದುಹಾಕುವಂತೆ ಕೋರಿ ವಿಎಚ್ಪಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ 'ಚಾದರ್' ಸುಟ್ಟು ಹಾಕಲಾಗಿದೆ ಎಂಬ ವದಂತಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿತ್ತು.</p>.ನಾಗ್ಪುರ ಗಲಭೆ: ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಎರಡನೇ ದಿನವೂ ಮುಂದುವರಿದ ಕರ್ಫ್ಯೂ.ನಾಗ್ಪುರ ಗಲಭೆ : ಸೂತ್ರಧಾರಿ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ನಾಗ್ಪುರ ಹಿಂಸಾಚಾರದಲ್ಲಿ ಭಾಗಿಯಾಗಿದವರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು 18 ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p><p>ಹಿಂಸಾಚಾರ ನಡೆದ ದಿನ ಸೋಮವಾರದಿಂದ ಇಲ್ಲಿಯವರೆಗೆ 69 ಜನರನ್ನು ಬಂಧಿಸಲಾಗಿದೆ. ನಾಲ್ಕನೇ ದಿನವಾದ ಗುರುವಾರವೂ ಕೆಲ ಪ್ರದೇಶಗಳಲ್ಲಿ ನಿಷೇಧಾಜ್ಞೆ ಮುಂದುವರಿದಿದೆ.</p><p>ಪೊಲೀಸರು ಇಲ್ಲಿಯವರೆಗೆ 200 ಆರೋಪಿಗಳನ್ನು ಗುರುತಿಸಿದ್ದು, ಸಿಸಿಟಿವಿ ದೃಶ್ಯಗಳ ಸಹಾಯದಿಂದ ಹಿಂಸಾಚಾರದಲ್ಲಿ ಭಾಗಿಯಾಗಿರುವ ಇತರರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ</p><p>ಸೋಮವಾರ, ಗಣೇಶಪೇಟೆ ಮತ್ತು ಕೊತ್ವಾಲಿ ಪೊಲೀಸ್ ಠಾಣೆಗಳಲ್ಲಿ ಐದು ಎಫ್ಐಆರ್ ದಾಖಲಾಗಿದ್ದು, ಇದರಲ್ಲಿ 200 ಆರೋಪಿಗಳನ್ನು ಹೆಸರಿಸಲಾಗಿದೆ.</p><p>ನಾಗ್ಪುರ ಪೊಲೀಸ್ ಆಯುಕ್ತ ಡಾ. ರವೀಂದರ್ ಕುಮಾರ್ ಸಿಂಘಾಲ್ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ವಿಶೇಷ ತಂಡಗಳಲ್ಲಿ ಗಣೇಶಪೇಟೆ, ಕೊತ್ವಾಲಿ ಮತ್ತು ತಹಸಿಲ್ ಪೊಲೀಸ್ ಠಾಣೆಗಳ ಸಿಬ್ಬಂದಿ ಮತ್ತು ಅಪರಾಧ ವಿಭಾಗದ ಸಿಬ್ಬಂದಿ ಸೇರಿದ್ದಾರೆ’ ಎಂದು ಹೇಳಿದ್ದರು.</p><p>ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಯನ್ನು ತೆಗೆದುಹಾಕುವಂತೆ ಕೋರಿ ವಿಎಚ್ಪಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ 'ಚಾದರ್' ಸುಟ್ಟು ಹಾಕಲಾಗಿದೆ ಎಂಬ ವದಂತಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿತ್ತು.</p>.ನಾಗ್ಪುರ ಗಲಭೆ: ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಎರಡನೇ ದಿನವೂ ಮುಂದುವರಿದ ಕರ್ಫ್ಯೂ.ನಾಗ್ಪುರ ಗಲಭೆ : ಸೂತ್ರಧಾರಿ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>