<p><strong>ಚೆನ್ನೈ: </strong>ಎಐಎಡಿಎಂಕೆ ಜೊತೆಗಿನ ಮೈತ್ರಿಯನ್ನು ಮುಂದುವರಿಸಲು ಪಕ್ಷದ ಕೇಂದ್ರ ನಾಯಕರು ನಿರ್ಧರಿಸಿದ್ದೇ ಆದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕೆ.ಅಣ್ಣಾಮಲೈ ಹೇಳಿದ್ದಾರೆ ಎನ್ನಲಾಗಿತ್ತು.</p>.<p>ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ತಮಿಳುನಾಡು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ನೈನಾರ್ ನಾಗೇಂದ್ರನ್ ಅವರು, ಅಣ್ಣಾಮಲೈ ರಾಜೀನಾಮೆ ನೀಡುತ್ತಾರೆ ಎನ್ನುವ ವರದಿಯನ್ನು ಅಲ್ಲಗೆಳದಿದ್ದಾರೆ.</p>.<p>ಚೆನ್ನೈನಲ್ಲಿ ಶುಕ್ರವಾರ ನಡೆದ ಪಕ್ಷದ ರಾಜ್ಯ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮೈತ್ರಿ ಬಗ್ಗೆ ಚರ್ಚೆಯಾಗಿಲ್ಲ. ಮೈತ್ರಿ ಬೇಡ ಎನ್ನುವುದು ಅಣ್ಣಾಮಲೈ ಅವರ ವೈಯಕ್ತಿಕ ಅಭಿಪ್ರಾಯ ಆಗಿರಬಹುದು. ಆದರೆ, ಈ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದಿದ್ದಾರೆ.</p>.<p>ಈ ಕುರಿತು ಟೈಮ್ಸ್ ಆಫ್ ಇಂಡಿಯಾ ವೆಬ್ಸೈಟ್ ವರದಿ ಮಾಡಿದೆ. ಇನ್ನೊಂದೆಡೆ, ಶಾಸಕಿ ಮತ್ತು ಬಿಜೆಪಿ ಮಹಿಳಾ ಮೋರ್ಚಾ ಮುಖ್ಯಸ್ಥೆ ವನತಿ ಶ್ರೀನಿವಾಸನ್ ಅವರು ಮೈತ್ರಿ ಸಂಬಂಧ ಅಣ್ಣಾಮಲೈ ಜೊತೆ ವಾಗ್ವಾದ ಮಾಡಿದ್ದಾರೆ ಎನ್ನಲಾಗಿದೆ.</p>.<p><strong>ಅಣ್ಣಾಮಲೈ ವಿರೋಧ: ವರದಿ</strong></p>.<p>ಎಐಎಡಿಎಂಕೆ ಜೊತೆ ಬಿಜೆಪಿಯು ಮೈತ್ರಿ ಮುಂದುವರಿಸುವುದಕ್ಕೆ ಅಣ್ಣಾಮಲೈ ವಿರೋಧ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿತ್ತು.</p>.<p>‘ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗಳೂ ಸೇರಿದಂತೆ ಪಕ್ಷವು ಏಕಾಂಗಿಯಾಗಿಯೇ ಸ್ಪರ್ಧಿಸಬೇಕು. ರಾಜ್ಯದಲ್ಲಿರುವ ದ್ರಾವಿಡ ಪಕ್ಷಗಳಿಗೆ ಪರ್ಯಾಯ ಪಕ್ಷವಾಗಿ ಹೊರಹೊಮ್ಮಬೇಕು ಎಂಬ ಬಗ್ಗೆ ಬಿಜೆಪಿ ಗಂಭೀರವಾಗಿದ್ದಲ್ಲಿ ಇಂಥ ನಡೆ ಅಗತ್ಯ’ ಎಂಬುದಾಗಿ ಅಣ್ಣಾಮಲೈ ಸಭೆಯಲ್ಲಿ ಹೇಳಿದ್ದಾರೆ ಎನ್ನಲಾಗಿತ್ತು.</p>.<p>ಅಣ್ಣಾಮಲೈ ಅವರ ಈ ಮಾತುಗಳಿಗೆ ಕೆಲ ಮುಖಂಡರಿಂದ ತೀವ್ರ ವಿರೋಧ ವ್ಯಕ್ತ ವಾಯಿತು. ಸಭೆಯಲ್ಲಿದ್ದವರ ಪೈಕಿ ಕನಿಷ್ಠ ಇಬ್ಬರು ಮುಖಂಡರು, ‘ರಾಜ್ಯ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮೈತ್ರಿ ಕುರಿತು ಮಾತನಾಡುವ ಅಗತ್ಯವಿದೆಯೇ? ಇಂಥ ವಿಷಯಗಳ ಕುರಿತು ಬಿಜೆಪಿ ಸಂಸದೀಯ ಮಂಡಳಿ ನಿರ್ಧರಿಸುತ್ತದೆ ಎಂಬುದಾಗಿ ಹೇಳಿದರು’ ಎನ್ನಲಾಗಿದೆ.</p>.<p>ಸಭೆಯಲ್ಲಿದ್ದ ಕೆಲ ಪದಾಧಿಕಾರಿಗಳು ಅಣ್ಣಾಮಲೈ ಅವರ ನಿಲುವಿಗೆ ಬೆಂಬಲ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಬಿಜೆಪಿ ಏಕಾಂಗಿಯಾಗಿಯೇ ಸ್ಪರ್ಧಿಸಬೇಕು ಎಂದು ಹೇಳಿದ್ದಾಗಿ ಮೂಲಗಳು ಹೇಳಿವೆ.</p>.<p><a href="https://www.prajavani.net/district/kalaburagi/power-line-crashed-mother-and-2-sons-died-1024847.html" itemprop="url">ಮಳೆಯಲ್ಲಿ ವಿದ್ಯುತ್ ತಗುಲಿ ತಾಯಿ, ಇಬ್ಬರು ಮಕ್ಕಳು ಸಾವು– ಚಿಂಚೋಳಿಯಲ್ಲಿ ಘಟನೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ಎಐಎಡಿಎಂಕೆ ಜೊತೆಗಿನ ಮೈತ್ರಿಯನ್ನು ಮುಂದುವರಿಸಲು ಪಕ್ಷದ ಕೇಂದ್ರ ನಾಯಕರು ನಿರ್ಧರಿಸಿದ್ದೇ ಆದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕೆ.ಅಣ್ಣಾಮಲೈ ಹೇಳಿದ್ದಾರೆ ಎನ್ನಲಾಗಿತ್ತು.</p>.<p>ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ತಮಿಳುನಾಡು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ನೈನಾರ್ ನಾಗೇಂದ್ರನ್ ಅವರು, ಅಣ್ಣಾಮಲೈ ರಾಜೀನಾಮೆ ನೀಡುತ್ತಾರೆ ಎನ್ನುವ ವರದಿಯನ್ನು ಅಲ್ಲಗೆಳದಿದ್ದಾರೆ.</p>.<p>ಚೆನ್ನೈನಲ್ಲಿ ಶುಕ್ರವಾರ ನಡೆದ ಪಕ್ಷದ ರಾಜ್ಯ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮೈತ್ರಿ ಬಗ್ಗೆ ಚರ್ಚೆಯಾಗಿಲ್ಲ. ಮೈತ್ರಿ ಬೇಡ ಎನ್ನುವುದು ಅಣ್ಣಾಮಲೈ ಅವರ ವೈಯಕ್ತಿಕ ಅಭಿಪ್ರಾಯ ಆಗಿರಬಹುದು. ಆದರೆ, ಈ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದಿದ್ದಾರೆ.</p>.<p>ಈ ಕುರಿತು ಟೈಮ್ಸ್ ಆಫ್ ಇಂಡಿಯಾ ವೆಬ್ಸೈಟ್ ವರದಿ ಮಾಡಿದೆ. ಇನ್ನೊಂದೆಡೆ, ಶಾಸಕಿ ಮತ್ತು ಬಿಜೆಪಿ ಮಹಿಳಾ ಮೋರ್ಚಾ ಮುಖ್ಯಸ್ಥೆ ವನತಿ ಶ್ರೀನಿವಾಸನ್ ಅವರು ಮೈತ್ರಿ ಸಂಬಂಧ ಅಣ್ಣಾಮಲೈ ಜೊತೆ ವಾಗ್ವಾದ ಮಾಡಿದ್ದಾರೆ ಎನ್ನಲಾಗಿದೆ.</p>.<p><strong>ಅಣ್ಣಾಮಲೈ ವಿರೋಧ: ವರದಿ</strong></p>.<p>ಎಐಎಡಿಎಂಕೆ ಜೊತೆ ಬಿಜೆಪಿಯು ಮೈತ್ರಿ ಮುಂದುವರಿಸುವುದಕ್ಕೆ ಅಣ್ಣಾಮಲೈ ವಿರೋಧ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿತ್ತು.</p>.<p>‘ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗಳೂ ಸೇರಿದಂತೆ ಪಕ್ಷವು ಏಕಾಂಗಿಯಾಗಿಯೇ ಸ್ಪರ್ಧಿಸಬೇಕು. ರಾಜ್ಯದಲ್ಲಿರುವ ದ್ರಾವಿಡ ಪಕ್ಷಗಳಿಗೆ ಪರ್ಯಾಯ ಪಕ್ಷವಾಗಿ ಹೊರಹೊಮ್ಮಬೇಕು ಎಂಬ ಬಗ್ಗೆ ಬಿಜೆಪಿ ಗಂಭೀರವಾಗಿದ್ದಲ್ಲಿ ಇಂಥ ನಡೆ ಅಗತ್ಯ’ ಎಂಬುದಾಗಿ ಅಣ್ಣಾಮಲೈ ಸಭೆಯಲ್ಲಿ ಹೇಳಿದ್ದಾರೆ ಎನ್ನಲಾಗಿತ್ತು.</p>.<p>ಅಣ್ಣಾಮಲೈ ಅವರ ಈ ಮಾತುಗಳಿಗೆ ಕೆಲ ಮುಖಂಡರಿಂದ ತೀವ್ರ ವಿರೋಧ ವ್ಯಕ್ತ ವಾಯಿತು. ಸಭೆಯಲ್ಲಿದ್ದವರ ಪೈಕಿ ಕನಿಷ್ಠ ಇಬ್ಬರು ಮುಖಂಡರು, ‘ರಾಜ್ಯ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮೈತ್ರಿ ಕುರಿತು ಮಾತನಾಡುವ ಅಗತ್ಯವಿದೆಯೇ? ಇಂಥ ವಿಷಯಗಳ ಕುರಿತು ಬಿಜೆಪಿ ಸಂಸದೀಯ ಮಂಡಳಿ ನಿರ್ಧರಿಸುತ್ತದೆ ಎಂಬುದಾಗಿ ಹೇಳಿದರು’ ಎನ್ನಲಾಗಿದೆ.</p>.<p>ಸಭೆಯಲ್ಲಿದ್ದ ಕೆಲ ಪದಾಧಿಕಾರಿಗಳು ಅಣ್ಣಾಮಲೈ ಅವರ ನಿಲುವಿಗೆ ಬೆಂಬಲ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಬಿಜೆಪಿ ಏಕಾಂಗಿಯಾಗಿಯೇ ಸ್ಪರ್ಧಿಸಬೇಕು ಎಂದು ಹೇಳಿದ್ದಾಗಿ ಮೂಲಗಳು ಹೇಳಿವೆ.</p>.<p><a href="https://www.prajavani.net/district/kalaburagi/power-line-crashed-mother-and-2-sons-died-1024847.html" itemprop="url">ಮಳೆಯಲ್ಲಿ ವಿದ್ಯುತ್ ತಗುಲಿ ತಾಯಿ, ಇಬ್ಬರು ಮಕ್ಕಳು ಸಾವು– ಚಿಂಚೋಳಿಯಲ್ಲಿ ಘಟನೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>