<p><strong>ಮುಂಬೈ</strong>: ವಾರಕ್ಕೆ 70 ಗಂಟೆ ಕೆಲಸದ ಕುರಿತಾದ ತಮ್ಮ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡಿರುವ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ, ಯಾರೋಬ್ಬರೂ ಒತ್ತಾಯಪೂರ್ವಕವಾಗಿ ಅದನ್ನು ಹೇರುವಂತಿಲ್ಲ ಎಂದು ಹೇಳಿದ್ದಾರೆ.</p><p>ಭಾರತೀಯ ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಕಳೆದ ವರ್ಷ ನಾರಾಯಣ ಮೂರ್ತಿ ನೀಡಿದ್ದ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಚರ್ಚೆಯನ್ನು ಹುಟ್ಟುಹಾಕಿತ್ತು. ಪರ–ವಿರೋಧ ಚರ್ಚೆಗಳು ನಡೆದಿದ್ದವು. ಈ ಬಗ್ಗೆ ಅವರು ಮುಂಬೈನ ಎಎಂಸಿಯ ಕಿಲಾಚಂದ್ ಸ್ಮಾರಕ ಉಪನ್ಯಾಸದಲ್ಲಿ ಮಾತನಾಡುವಾಗ ಸ್ಪಷ್ಟೀಕರಣವನ್ನು ನೀಡಿದ್ದಾರೆ.</p><p>‘ನೀವು ಇದನ್ನು ಮಾಡಬೇಕು, ನೀವು ಇದನ್ನು ಮಾಡಬಾರದು ಎಂದು ಹೇಳುವವರು ಯಾರೂ ಇಲ್ಲ. ನೀವೇ ಅದನ್ನು ನಿರ್ಧರಿಸಬೇಕು’ ಎಂದು ಹೇಳಿದ್ದಾರೆ.</p><p>ಇನ್ಫೋಸಿಸ್ ಅನ್ನು ಸ್ಥಾಪಿಸಿದ ಆರಂಭಿಕ ವರ್ಷಗಳಲ್ಲಿ ತಮ್ಮ ಕಚೇರಿಯಲ್ಲಿ ಕಳೆದ ಸಮಯವನ್ನು ಹಂಚಿಕೊಂಡಿರುವ ಅವರು, ‘ನಾನು ಬೆಳಿಗ್ಗೆ 6:20ಕ್ಕೆ ಕಚೇರಿಗೆ ಹೋಗುತ್ತಿದ್ದೆ. ರಾತ್ರಿ 8:30ಕ್ಕೆ ಹೊರಡುತ್ತಿದ್ದೆ. 40 ವರ್ಷಗಳ ಕಾಲ ನಾನು ಇದನ್ನು ಮಾಡಿದ್ದೇನೆ. ಹಾಗಾಗಿ, ಯಾರೂ ಇದನ್ನು ತಪ್ಪು ಎಂದು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.</p><p>ಈ ಆಯ್ಕೆಗಳು ವೈಯಕ್ತಿಕವಾಗಿವೆ. ಸಾರ್ವಜನಿಕ ಚರ್ಚೆಗೆ ನಿಜವಾಗಿಯೂ ಸೂಕ್ತವಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ.</p><p>‘ಇವೆಲ್ಲ ಚರ್ಚೆ ನಡೆಸಬೇಕಾದ ವಿಷಯಗಳಲ್ಲ. ಅಗತ್ಯತತೆಯನ್ನು ಅರಿತು ಆತ್ಮಾವಲೋಕನ ಮಾಡಿಕೊಂಡು ಏನನ್ನು ಮಾಡಬೇಕೆಂಬುದರ ಬಗ್ಗೆ ವೈಯಕ್ತಿಕ ನಿರ್ಧಾರ ಕೈಗೊಳ್ಳಬೇಕು’ ಎಂದು ಸ್ಪಷ್ಟಪಡಿಸಿದ್ದಾರೆ.</p><p>ನಮ್ಮ ಮತ್ತು ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ದೃಷ್ಟಿಯಿಂದ ಹೆಚ್ಚು ದುಡಿಮೆ, ಪ್ರಯತ್ನ ಅಗತ್ಯವಿರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ಮಹತ್ವಾಕಾಂಕ್ಷೆ, ಚಾಣಾಕ್ಷತನ, ಶಿಸ್ತು ಮತ್ತು ಉತ್ತಮ ಮೌಲ್ಯಗಳನ್ನು ಇಟ್ಟುಕೊಂಡು ಶ್ರಮಪಟ್ಟು ದುಡಿಯುವ ಜನರು ಎಲ್ಲ ತೊಡಕುಗಳನ್ನು ಮೀರಿ ಯಶಸ್ವಿ ದೇಶವನ್ನು ಕಟ್ಟುತ್ತಾರೆ ಎಂದು ಜರ್ಮನಿಯ ಸಮಾಜವಾದಿ ಮ್ಯಾಕ್ಸ್ ವೆಬ್ಬರ್ ಅವರ ಮಾತುಗಳನ್ನು ಮೂರ್ತಿ ಉಲ್ಲೇಖಿಸಿದ್ದಾರೆ.</p><p>ದೇಶದ ಶೇಕಡ 60ರಷ್ಟು ಜನರು ಈಗಲೂ ಉಚಿತ ಆಹಾರ ಧಾನ್ಯಗಳ ಮೇಲೆ ಅವಲಂಬಿತರಾಗಿದ್ದಾರೆ. ಅಂತಹ, ಬಡತನವು ಆರ್ಥಿಕವಾಗಿ ಬಲಿಷ್ಠ ದೇಶವನ್ನು ನಿರ್ಮಿಸುವುದಿಲ್ಲ ಎಂದಿದ್ದಾರೆ.</p><p>ಕಾರ್ಪೊರೇಟ್ ಸಂಸ್ಥೆಗಳ ದುರಾಸೆಯ ನಡವಳಿಕೆಯು ಜನರು ಬಂಡವಾಳಶಾಹಿಯಲ್ಲಿ ನಂಬಿಕೆಯನ್ನು ಕಳೆದುಕೊಳ್ಳುವಂತೆ ಮಾಡಿದೆ ಎಂದು ಮೂರ್ತಿ ಹೇಳಿದ್ದಾರೆ. </p> .ವಾರಕ್ಕೆ 70 ಗಂಟೆ ಕೆಲಸ | ಉಸಿರಿರುವವರೆಗೂ ಅದನ್ನೇ ಹೇಳೋದು: ನಾರಾಯಣ ಮೂರ್ತಿ.70 ಗಂಟೆ ಕೆಲಸ: ಇನ್ಫೊಸಿಸ್ ನಾರಾಯಣಮೂರ್ತಿ ಬೆಂಬಲಿಸಿದ ಕಾಂಗ್ರೆಸ್ನ ತಿವಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ವಾರಕ್ಕೆ 70 ಗಂಟೆ ಕೆಲಸದ ಕುರಿತಾದ ತಮ್ಮ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡಿರುವ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ, ಯಾರೋಬ್ಬರೂ ಒತ್ತಾಯಪೂರ್ವಕವಾಗಿ ಅದನ್ನು ಹೇರುವಂತಿಲ್ಲ ಎಂದು ಹೇಳಿದ್ದಾರೆ.</p><p>ಭಾರತೀಯ ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಕಳೆದ ವರ್ಷ ನಾರಾಯಣ ಮೂರ್ತಿ ನೀಡಿದ್ದ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಚರ್ಚೆಯನ್ನು ಹುಟ್ಟುಹಾಕಿತ್ತು. ಪರ–ವಿರೋಧ ಚರ್ಚೆಗಳು ನಡೆದಿದ್ದವು. ಈ ಬಗ್ಗೆ ಅವರು ಮುಂಬೈನ ಎಎಂಸಿಯ ಕಿಲಾಚಂದ್ ಸ್ಮಾರಕ ಉಪನ್ಯಾಸದಲ್ಲಿ ಮಾತನಾಡುವಾಗ ಸ್ಪಷ್ಟೀಕರಣವನ್ನು ನೀಡಿದ್ದಾರೆ.</p><p>‘ನೀವು ಇದನ್ನು ಮಾಡಬೇಕು, ನೀವು ಇದನ್ನು ಮಾಡಬಾರದು ಎಂದು ಹೇಳುವವರು ಯಾರೂ ಇಲ್ಲ. ನೀವೇ ಅದನ್ನು ನಿರ್ಧರಿಸಬೇಕು’ ಎಂದು ಹೇಳಿದ್ದಾರೆ.</p><p>ಇನ್ಫೋಸಿಸ್ ಅನ್ನು ಸ್ಥಾಪಿಸಿದ ಆರಂಭಿಕ ವರ್ಷಗಳಲ್ಲಿ ತಮ್ಮ ಕಚೇರಿಯಲ್ಲಿ ಕಳೆದ ಸಮಯವನ್ನು ಹಂಚಿಕೊಂಡಿರುವ ಅವರು, ‘ನಾನು ಬೆಳಿಗ್ಗೆ 6:20ಕ್ಕೆ ಕಚೇರಿಗೆ ಹೋಗುತ್ತಿದ್ದೆ. ರಾತ್ರಿ 8:30ಕ್ಕೆ ಹೊರಡುತ್ತಿದ್ದೆ. 40 ವರ್ಷಗಳ ಕಾಲ ನಾನು ಇದನ್ನು ಮಾಡಿದ್ದೇನೆ. ಹಾಗಾಗಿ, ಯಾರೂ ಇದನ್ನು ತಪ್ಪು ಎಂದು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.</p><p>ಈ ಆಯ್ಕೆಗಳು ವೈಯಕ್ತಿಕವಾಗಿವೆ. ಸಾರ್ವಜನಿಕ ಚರ್ಚೆಗೆ ನಿಜವಾಗಿಯೂ ಸೂಕ್ತವಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ.</p><p>‘ಇವೆಲ್ಲ ಚರ್ಚೆ ನಡೆಸಬೇಕಾದ ವಿಷಯಗಳಲ್ಲ. ಅಗತ್ಯತತೆಯನ್ನು ಅರಿತು ಆತ್ಮಾವಲೋಕನ ಮಾಡಿಕೊಂಡು ಏನನ್ನು ಮಾಡಬೇಕೆಂಬುದರ ಬಗ್ಗೆ ವೈಯಕ್ತಿಕ ನಿರ್ಧಾರ ಕೈಗೊಳ್ಳಬೇಕು’ ಎಂದು ಸ್ಪಷ್ಟಪಡಿಸಿದ್ದಾರೆ.</p><p>ನಮ್ಮ ಮತ್ತು ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ದೃಷ್ಟಿಯಿಂದ ಹೆಚ್ಚು ದುಡಿಮೆ, ಪ್ರಯತ್ನ ಅಗತ್ಯವಿರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ಮಹತ್ವಾಕಾಂಕ್ಷೆ, ಚಾಣಾಕ್ಷತನ, ಶಿಸ್ತು ಮತ್ತು ಉತ್ತಮ ಮೌಲ್ಯಗಳನ್ನು ಇಟ್ಟುಕೊಂಡು ಶ್ರಮಪಟ್ಟು ದುಡಿಯುವ ಜನರು ಎಲ್ಲ ತೊಡಕುಗಳನ್ನು ಮೀರಿ ಯಶಸ್ವಿ ದೇಶವನ್ನು ಕಟ್ಟುತ್ತಾರೆ ಎಂದು ಜರ್ಮನಿಯ ಸಮಾಜವಾದಿ ಮ್ಯಾಕ್ಸ್ ವೆಬ್ಬರ್ ಅವರ ಮಾತುಗಳನ್ನು ಮೂರ್ತಿ ಉಲ್ಲೇಖಿಸಿದ್ದಾರೆ.</p><p>ದೇಶದ ಶೇಕಡ 60ರಷ್ಟು ಜನರು ಈಗಲೂ ಉಚಿತ ಆಹಾರ ಧಾನ್ಯಗಳ ಮೇಲೆ ಅವಲಂಬಿತರಾಗಿದ್ದಾರೆ. ಅಂತಹ, ಬಡತನವು ಆರ್ಥಿಕವಾಗಿ ಬಲಿಷ್ಠ ದೇಶವನ್ನು ನಿರ್ಮಿಸುವುದಿಲ್ಲ ಎಂದಿದ್ದಾರೆ.</p><p>ಕಾರ್ಪೊರೇಟ್ ಸಂಸ್ಥೆಗಳ ದುರಾಸೆಯ ನಡವಳಿಕೆಯು ಜನರು ಬಂಡವಾಳಶಾಹಿಯಲ್ಲಿ ನಂಬಿಕೆಯನ್ನು ಕಳೆದುಕೊಳ್ಳುವಂತೆ ಮಾಡಿದೆ ಎಂದು ಮೂರ್ತಿ ಹೇಳಿದ್ದಾರೆ. </p> .ವಾರಕ್ಕೆ 70 ಗಂಟೆ ಕೆಲಸ | ಉಸಿರಿರುವವರೆಗೂ ಅದನ್ನೇ ಹೇಳೋದು: ನಾರಾಯಣ ಮೂರ್ತಿ.70 ಗಂಟೆ ಕೆಲಸ: ಇನ್ಫೊಸಿಸ್ ನಾರಾಯಣಮೂರ್ತಿ ಬೆಂಬಲಿಸಿದ ಕಾಂಗ್ರೆಸ್ನ ತಿವಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>