<p><strong>ನವದೆಹಲಿ</strong>: 8ನೇ ತರಗತಿಯ ಸಮಾಜವಿಜ್ಞಾನ ಪಠ್ಯಪುಸ್ತಕದಲ್ಲಿ, ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಕುರಿತು ಅಧ್ಯಾಯವೊಂದನ್ನು ಪ್ರಕಟಿಸಿದ್ದಕ್ಕಾಗಿ ಎನ್ಸಿಇಆರ್ಟಿ ಬುಧವಾರ ಕ್ಷಮೆ ಕೋರಿದೆ.</p><p>‘ಪಠ್ಯಪುಸ್ತಕಗಳ ಪರಿಶೀಲನಾ ಕಾರ್ಯ ನಿರಂತರವಾಗಿ ನಡೆಯುತ್ತಿರುತ್ತದೆ. ಈ ವಿಚಾರದಲ್ಲಿ ರಚನಾತ್ಮಕ ಪ್ರತಿಕ್ರಿಯೆಗಳನ್ನು ಎನ್ಸಿಇಆರ್ಟಿ ಮುಕ್ತವಾಗಿ ಸ್ವಾಗತಿಸುತ್ತದೆ. ವ್ಯಾಪಕ ಸಮಾಲೋಚನೆಗಳ ಬಳಿಕ ಪಠ್ಯಪುಸ್ತಕವನ್ನು ಮರುರಚಿಸಿ, 2026–27ನೇ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದೆ.</p><p>‘ಕಣ್ತಪ್ಪಿನಿಂದಾಗಿ, ಈ ಅಧ್ಯಾಯದಲ್ಲಿ ಕೆಲ ಅಸಮರ್ಪಕ ಸಂಗತಿಗಳು ಹಾಗೂ ದೋಷಗಳು ನುಸುಳಿರುವುದು ಕಂಡುಬಂದಿದೆ’ ಎಂದು ಪರಿಷತ್ತಿನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p>‘ಸಂವಿಧಾನ ಕುರಿತ ಅರಿವನ್ನು ಹೆಚ್ಚಿಸುವುದು, ಪ್ರಜಾತಾಂತ್ರಿಕ ಭಾಗೀದಾರಿಕೆ ಬಗ್ಗೆ ವಿದ್ಯಾರ್ಥಿಗಳಲ್ಲಿ ತಿಳಿವಳಿಕೆ ಮೂಡಿಸುವುದೇ ಹೊಸ ಪುಸ್ತಕಗಳ ಉದ್ದೇಶವಾಗಿದೆ. ನ್ಯಾಯಾಂಗ ಸೇರಿದಂತೆ ಯಾವುದೇ ಸಾಂವಿಧಾನಿಕ ಸಂಸ್ಥೆಯ ಅಧಿಕಾರವನ್ನು ಪ್ರಶ್ನಿಸುವುದಾಗಲಿ ಅಥವಾ ಅವಹೇಳನ ಮಾಡುವುದಾಗಲಿ ಪರಿಷತ್ತಿನ ಉದ್ದೇಶವಲ್ಲ’ ಎಂದೂ ಅಧಿಕಾರಿ ತಿಳಿಸಿದ್ದಾರೆ.</p>.ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಉಲ್ಲೇಖ: ಸುಪ್ರೀಂ ಕೋರ್ಟ್ ಹೇಳಿದ್ದೇನು?.ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಉಲ್ಲೇಖ: ಪಠ್ಯಪುಸ್ತಕ ನಿಷೇಧಿಸಿ ‘ಸುಪ್ರೀಂ‘ ಆದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 8ನೇ ತರಗತಿಯ ಸಮಾಜವಿಜ್ಞಾನ ಪಠ್ಯಪುಸ್ತಕದಲ್ಲಿ, ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಕುರಿತು ಅಧ್ಯಾಯವೊಂದನ್ನು ಪ್ರಕಟಿಸಿದ್ದಕ್ಕಾಗಿ ಎನ್ಸಿಇಆರ್ಟಿ ಬುಧವಾರ ಕ್ಷಮೆ ಕೋರಿದೆ.</p><p>‘ಪಠ್ಯಪುಸ್ತಕಗಳ ಪರಿಶೀಲನಾ ಕಾರ್ಯ ನಿರಂತರವಾಗಿ ನಡೆಯುತ್ತಿರುತ್ತದೆ. ಈ ವಿಚಾರದಲ್ಲಿ ರಚನಾತ್ಮಕ ಪ್ರತಿಕ್ರಿಯೆಗಳನ್ನು ಎನ್ಸಿಇಆರ್ಟಿ ಮುಕ್ತವಾಗಿ ಸ್ವಾಗತಿಸುತ್ತದೆ. ವ್ಯಾಪಕ ಸಮಾಲೋಚನೆಗಳ ಬಳಿಕ ಪಠ್ಯಪುಸ್ತಕವನ್ನು ಮರುರಚಿಸಿ, 2026–27ನೇ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದೆ.</p><p>‘ಕಣ್ತಪ್ಪಿನಿಂದಾಗಿ, ಈ ಅಧ್ಯಾಯದಲ್ಲಿ ಕೆಲ ಅಸಮರ್ಪಕ ಸಂಗತಿಗಳು ಹಾಗೂ ದೋಷಗಳು ನುಸುಳಿರುವುದು ಕಂಡುಬಂದಿದೆ’ ಎಂದು ಪರಿಷತ್ತಿನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p>‘ಸಂವಿಧಾನ ಕುರಿತ ಅರಿವನ್ನು ಹೆಚ್ಚಿಸುವುದು, ಪ್ರಜಾತಾಂತ್ರಿಕ ಭಾಗೀದಾರಿಕೆ ಬಗ್ಗೆ ವಿದ್ಯಾರ್ಥಿಗಳಲ್ಲಿ ತಿಳಿವಳಿಕೆ ಮೂಡಿಸುವುದೇ ಹೊಸ ಪುಸ್ತಕಗಳ ಉದ್ದೇಶವಾಗಿದೆ. ನ್ಯಾಯಾಂಗ ಸೇರಿದಂತೆ ಯಾವುದೇ ಸಾಂವಿಧಾನಿಕ ಸಂಸ್ಥೆಯ ಅಧಿಕಾರವನ್ನು ಪ್ರಶ್ನಿಸುವುದಾಗಲಿ ಅಥವಾ ಅವಹೇಳನ ಮಾಡುವುದಾಗಲಿ ಪರಿಷತ್ತಿನ ಉದ್ದೇಶವಲ್ಲ’ ಎಂದೂ ಅಧಿಕಾರಿ ತಿಳಿಸಿದ್ದಾರೆ.</p>.ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಉಲ್ಲೇಖ: ಸುಪ್ರೀಂ ಕೋರ್ಟ್ ಹೇಳಿದ್ದೇನು?.ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಉಲ್ಲೇಖ: ಪಠ್ಯಪುಸ್ತಕ ನಿಷೇಧಿಸಿ ‘ಸುಪ್ರೀಂ‘ ಆದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>