<p><strong>ನವದೆಹಲಿ</strong>: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ‘ನಗದು ರಹಿತ ಚಿಕಿತ್ಸೆ’ಯೋಜನೆಯನ್ನು ಕೇಂದ್ರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ. </p><p>ಇದರಡಿ, ಅಪಘಾತದಲ್ಲಿ ಗಾಯಗೊಂಡವರಿಗೆ 7 ದಿನಗಳ ಕಾಲ ₹1.5 ಲಕ್ಷದವರೆಗೆ ನಗದು ರಹಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಅಪಘಾತ ಸಂಭವಿಸಿದ 24 ಗಂಟೆಗಳೊಳಗಾಗಿ ಪೊಲೀಸರು ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳಿಗೆ ತಿಳಿಸಬೇಕು ಎಂದಿದ್ದಾರೆ.</p><p>ಅಲ್ಲದೆ, ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಮೃತಪಟ್ಟವರ ಕುಟುಂಬಕ್ಕೂ ₹2 ಲಕ್ಷ ಪರಿಹಾರ ನೀಡುವುದಾಗಿ ಗಡ್ಕರಿ ಘೋಷಿಸಿದ್ದಾರೆ.</p><p>‘ಅಪಘಾತ ಸಂಭವಿಸಿದ 24 ಗಂಟೆಗಳೊಳಗೆ ಗಾಯಾಳುಗಳ ಚಿಕಿತ್ಸೆಗೆ ನಾವು ನಗದು ರಹಿತ ಚಿಕಿತ್ಸೆಯ ಹೊಸ ಯೋಜನೆ ಆರಂಭಿಸಿದ್ದೇವೆ. ಪೊಲೀಸರಿಂದ ಮಾಹಿತಿ ಬಂದ ಕೂಡಲೇ ₹1.6 ಲಕ್ಷದವರೆಗೆ ನಾವು 7 ದಿನಗಳ ಚಿಕಿತ್ಸೆಗೆ ಹಣ ಒದಗಿಸಲಿದ್ದೇವೆ. ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಮೃತಪಟ್ಟವರ ಕುಟುಂಬಕ್ಕೂ ತಲಾ ₹2 ಲಕ್ಷ ಪರಿಹಾರ ನೀಡುತ್ತೇವೆ’ಎಂದು ಗಡ್ಕರಿ ಹೇಳಿದ್ದಾರೆ.</p><p>‘ರಸ್ತೆ ಸುರಕ್ಷತೆಯು ಸರ್ಕಾರದ ಅತ್ಯುನ್ನತ ಆದ್ಯತೆಯಾಗಿದೆ. 2024ರಲ್ಲಿ 1.84 ಲಕ್ಷ ಮಂದಿ ಜೀವ ಕಳೆದುಕೊಂಡಿದ್ದಾರೆ ಎಂಬ ಆಘಾತಕಾರಿ ಅಂಕಿ ಅಂಶ ಉಲ್ಲೇಖಿಸಿದ ಅವರು, 30,000 ಮಂದಿ ಹೆಲ್ಮೆಟ್ ಧರಿಸದೇ ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾಗಿವವರಲ್ಲಿ ಶೇ 66ರಷ್ಟು ಮಂದಿ 18ರಿಂದ 34 ವರ್ಷ ವಯಸ್ಸಿನವರು’ಎಂದರು.</p><p> ಶಾಲೆ ಮತ್ತು ಕಾಲೇಜುಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಸೂಕ್ತ ವ್ಯವಸ್ಥೆ ಇಲ್ಲದೆ 10,000 ಮಕ್ಕಳು ಮೃತಪಟ್ಟಿದ್ದಾರೆ ಎಂದು ಗಡ್ಕರಿ ಹೇಳಿದರು. ಶಾಲಾ ಬಸ್ ಮತ್ತು ಆಟೋಗಳಿಗೂ ನಿಯಮ ರೂಪಿಸಲಾಗಿದೆ ಎಂದು ಹೇಳಿದರು.</p><p>ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಾರಿಗೆ ಸಚಿವರ ಜೊತೆಗಿನ ಸಭೆ ಬಳಿಕ ಗಡ್ಕರಿ ಈ ಘೋಷಣೆಗಳನ್ನು ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ‘ನಗದು ರಹಿತ ಚಿಕಿತ್ಸೆ’ಯೋಜನೆಯನ್ನು ಕೇಂದ್ರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ. </p><p>ಇದರಡಿ, ಅಪಘಾತದಲ್ಲಿ ಗಾಯಗೊಂಡವರಿಗೆ 7 ದಿನಗಳ ಕಾಲ ₹1.5 ಲಕ್ಷದವರೆಗೆ ನಗದು ರಹಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಅಪಘಾತ ಸಂಭವಿಸಿದ 24 ಗಂಟೆಗಳೊಳಗಾಗಿ ಪೊಲೀಸರು ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳಿಗೆ ತಿಳಿಸಬೇಕು ಎಂದಿದ್ದಾರೆ.</p><p>ಅಲ್ಲದೆ, ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಮೃತಪಟ್ಟವರ ಕುಟುಂಬಕ್ಕೂ ₹2 ಲಕ್ಷ ಪರಿಹಾರ ನೀಡುವುದಾಗಿ ಗಡ್ಕರಿ ಘೋಷಿಸಿದ್ದಾರೆ.</p><p>‘ಅಪಘಾತ ಸಂಭವಿಸಿದ 24 ಗಂಟೆಗಳೊಳಗೆ ಗಾಯಾಳುಗಳ ಚಿಕಿತ್ಸೆಗೆ ನಾವು ನಗದು ರಹಿತ ಚಿಕಿತ್ಸೆಯ ಹೊಸ ಯೋಜನೆ ಆರಂಭಿಸಿದ್ದೇವೆ. ಪೊಲೀಸರಿಂದ ಮಾಹಿತಿ ಬಂದ ಕೂಡಲೇ ₹1.6 ಲಕ್ಷದವರೆಗೆ ನಾವು 7 ದಿನಗಳ ಚಿಕಿತ್ಸೆಗೆ ಹಣ ಒದಗಿಸಲಿದ್ದೇವೆ. ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಮೃತಪಟ್ಟವರ ಕುಟುಂಬಕ್ಕೂ ತಲಾ ₹2 ಲಕ್ಷ ಪರಿಹಾರ ನೀಡುತ್ತೇವೆ’ಎಂದು ಗಡ್ಕರಿ ಹೇಳಿದ್ದಾರೆ.</p><p>‘ರಸ್ತೆ ಸುರಕ್ಷತೆಯು ಸರ್ಕಾರದ ಅತ್ಯುನ್ನತ ಆದ್ಯತೆಯಾಗಿದೆ. 2024ರಲ್ಲಿ 1.84 ಲಕ್ಷ ಮಂದಿ ಜೀವ ಕಳೆದುಕೊಂಡಿದ್ದಾರೆ ಎಂಬ ಆಘಾತಕಾರಿ ಅಂಕಿ ಅಂಶ ಉಲ್ಲೇಖಿಸಿದ ಅವರು, 30,000 ಮಂದಿ ಹೆಲ್ಮೆಟ್ ಧರಿಸದೇ ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾಗಿವವರಲ್ಲಿ ಶೇ 66ರಷ್ಟು ಮಂದಿ 18ರಿಂದ 34 ವರ್ಷ ವಯಸ್ಸಿನವರು’ಎಂದರು.</p><p> ಶಾಲೆ ಮತ್ತು ಕಾಲೇಜುಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಸೂಕ್ತ ವ್ಯವಸ್ಥೆ ಇಲ್ಲದೆ 10,000 ಮಕ್ಕಳು ಮೃತಪಟ್ಟಿದ್ದಾರೆ ಎಂದು ಗಡ್ಕರಿ ಹೇಳಿದರು. ಶಾಲಾ ಬಸ್ ಮತ್ತು ಆಟೋಗಳಿಗೂ ನಿಯಮ ರೂಪಿಸಲಾಗಿದೆ ಎಂದು ಹೇಳಿದರು.</p><p>ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಾರಿಗೆ ಸಚಿವರ ಜೊತೆಗಿನ ಸಭೆ ಬಳಿಕ ಗಡ್ಕರಿ ಈ ಘೋಷಣೆಗಳನ್ನು ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>