<p><strong>ತವಾಂಗ್:</strong> ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತದಾನವು ಮಾರ್ಚ್ 9 ರಂದು ನಡೆಯಲಿದೆ. ವಿರಾಮದ ಬಳಿಕ ಸಂಸತ್ತಿನ ಅಧಿವೇಶನ ಪುನರಾರಂಭಗೊಂಡ ದಿನವೇ (ಮಾರ್ಚ್ 9) ಇದನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ ತಿಳಿಸಿದ್ದಾರೆ.</p>.<p>ಮಾರ್ಚ್ 9 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಬಜೆಟ್ ಅಧಿವೇಶನದ ಎರಡನೇ ಹಂತವು ಅತ್ಯಂತ 'ಕುತೂಹಲಕಾರಿ' ಆಗಿರಲಿದೆ. ಏಕೆಂದರೆ ಹಲವಾರು ಪ್ರಮುಖ ಕಾನೂನುಗಳು ಮತ್ತು ನಿರ್ಣಾಯಕ ಮಸೂದೆಗಳನ್ನು ಚರ್ಚೆ ಮತ್ತು ಅಂಗೀಕಾರಕ್ಕಾಗಿ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಅವರು ಹೇಳಿದ್ದಾರೆ.</p>.ಲೋಕಸಭಾ ಸ್ಪೀಕರ್ ಪದಚ್ಯುತಿಗೆ ನೋಟಿಸ್: ಮಾಳ್ವಂಕರ್ ಅವರಿಂದ ಓಂ ಬಿರ್ಲಾವರೆಗೆ.<p>ವಿರೋಧ ಪಕ್ಷಗಳು ಅಧಿವೇಶನದ ಮೊದಲ ಹಂತದಲ್ಲಿ ಮಾಡಿದಂತೆ ಪ್ರತಿಭಟನೆಯನ್ನು ಮುಂದುವರಿಸಿದರೆ, ಅದು ಅಂತಿಮವಾಗಿ ಅವರಿಗೆ ನಷ್ಟ ಎಂದು ಅವರು ಎಚ್ಚರಿಸಿದ್ದಾರೆ.</p>.<p>ಮಾರ್ಚ್ 9 ರಂದು ಲೋಕಸಭೆಯಲ್ಲಿ ಸ್ಪೀಕರ್ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯದ ಬಗ್ಗೆ ನಾವು ಚರ್ಚೆ ನಡೆಸಲಿದ್ದೇವೆ. ನಿಯಮದ ಪ್ರಕಾರ ಅಧಿವೇಶನ ಪುನರಾರಂಭಗೊಂಡ ಮೊದಲ ದಿನವೇ ಇದನ್ನು ಕೈಗೆತ್ತಿಕೊಳ್ಳಬೇಕು. ಚರ್ಚೆಯ ನಂತರ ಮತದಾನ ನಡೆಯಲಿದೆ ಎಂದು ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.</p>.<p>ಜನವರಿ 28 ರಂದು ರಾಷ್ಟ್ರಪತಿಗಳ ಭಾಷಣದೊಂದಿಗೆ ಆರಂಭವಾಗಿದ್ದ ಬಜೆಟ್ ಅಧಿವೇಶನಕ್ಕೆ ಫೆಬ್ರವರಿ 12 ರಿಂದ ವಿರಾಮ ನೀಡಲಾಗಿದೆ. ಅಧಿವೇಶನವು ಮಾರ್ಚ್ 9 ರಂದು ಪುನರಾರಂಭಗೊಂಡು ಏಪ್ರಿಲ್ 2 ರಂದು ಮುಕ್ತಾಯಗೊಳ್ಳಲಿದೆ.</p>.ಸ್ಪೀಕರ್ ಹುದ್ದೆಯಿಂದ ಓಂ ಬಿರ್ಲಾ ಪದಚ್ಯುತಿಗೆ ವಿರೋಧ ಪಕ್ಷಗಳಿಂದ ನೋಟಿಸ್ ಸಲ್ಲಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತವಾಂಗ್:</strong> ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತದಾನವು ಮಾರ್ಚ್ 9 ರಂದು ನಡೆಯಲಿದೆ. ವಿರಾಮದ ಬಳಿಕ ಸಂಸತ್ತಿನ ಅಧಿವೇಶನ ಪುನರಾರಂಭಗೊಂಡ ದಿನವೇ (ಮಾರ್ಚ್ 9) ಇದನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ ತಿಳಿಸಿದ್ದಾರೆ.</p>.<p>ಮಾರ್ಚ್ 9 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಬಜೆಟ್ ಅಧಿವೇಶನದ ಎರಡನೇ ಹಂತವು ಅತ್ಯಂತ 'ಕುತೂಹಲಕಾರಿ' ಆಗಿರಲಿದೆ. ಏಕೆಂದರೆ ಹಲವಾರು ಪ್ರಮುಖ ಕಾನೂನುಗಳು ಮತ್ತು ನಿರ್ಣಾಯಕ ಮಸೂದೆಗಳನ್ನು ಚರ್ಚೆ ಮತ್ತು ಅಂಗೀಕಾರಕ್ಕಾಗಿ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಅವರು ಹೇಳಿದ್ದಾರೆ.</p>.ಲೋಕಸಭಾ ಸ್ಪೀಕರ್ ಪದಚ್ಯುತಿಗೆ ನೋಟಿಸ್: ಮಾಳ್ವಂಕರ್ ಅವರಿಂದ ಓಂ ಬಿರ್ಲಾವರೆಗೆ.<p>ವಿರೋಧ ಪಕ್ಷಗಳು ಅಧಿವೇಶನದ ಮೊದಲ ಹಂತದಲ್ಲಿ ಮಾಡಿದಂತೆ ಪ್ರತಿಭಟನೆಯನ್ನು ಮುಂದುವರಿಸಿದರೆ, ಅದು ಅಂತಿಮವಾಗಿ ಅವರಿಗೆ ನಷ್ಟ ಎಂದು ಅವರು ಎಚ್ಚರಿಸಿದ್ದಾರೆ.</p>.<p>ಮಾರ್ಚ್ 9 ರಂದು ಲೋಕಸಭೆಯಲ್ಲಿ ಸ್ಪೀಕರ್ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯದ ಬಗ್ಗೆ ನಾವು ಚರ್ಚೆ ನಡೆಸಲಿದ್ದೇವೆ. ನಿಯಮದ ಪ್ರಕಾರ ಅಧಿವೇಶನ ಪುನರಾರಂಭಗೊಂಡ ಮೊದಲ ದಿನವೇ ಇದನ್ನು ಕೈಗೆತ್ತಿಕೊಳ್ಳಬೇಕು. ಚರ್ಚೆಯ ನಂತರ ಮತದಾನ ನಡೆಯಲಿದೆ ಎಂದು ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.</p>.<p>ಜನವರಿ 28 ರಂದು ರಾಷ್ಟ್ರಪತಿಗಳ ಭಾಷಣದೊಂದಿಗೆ ಆರಂಭವಾಗಿದ್ದ ಬಜೆಟ್ ಅಧಿವೇಶನಕ್ಕೆ ಫೆಬ್ರವರಿ 12 ರಿಂದ ವಿರಾಮ ನೀಡಲಾಗಿದೆ. ಅಧಿವೇಶನವು ಮಾರ್ಚ್ 9 ರಂದು ಪುನರಾರಂಭಗೊಂಡು ಏಪ್ರಿಲ್ 2 ರಂದು ಮುಕ್ತಾಯಗೊಳ್ಳಲಿದೆ.</p>.ಸ್ಪೀಕರ್ ಹುದ್ದೆಯಿಂದ ಓಂ ಬಿರ್ಲಾ ಪದಚ್ಯುತಿಗೆ ವಿರೋಧ ಪಕ್ಷಗಳಿಂದ ನೋಟಿಸ್ ಸಲ್ಲಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>