<p><strong>ಹಜಾರಿಬಾದ್ (ಜಾರ್ಖಂಡ್): </strong> ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಭವಿಷ್ಯದಲ್ಲಿ ಯಾವುದೇ ಚುನಾವಣೆಗಳು ನಡೆಯುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.</p>.ಮುಸ್ಲಿಂ ಮಹಿಳೆಯರ Voter ID ಪರಿಶೀಲನೆ: ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕರಣ.Lok Sabha Elections Live |ಬಹುತೇಕ ಶಾಂತಿಯುತವಾಗಿ ಕೊನೆಗೊಂಡ 4ನೇ ಹಂತ; ಶೇ 62.8ರಷ್ಟು ಮತದಾನ. <p>ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಗೆಲುವು ಸಾಧಿಸಿದರೆ, ಭವಿಷ್ಯದಲ್ಲಿ ಯಾವುದೇ ಚುನಾವಣೆಗಳು ನಡೆಯುವುದಿಲ್ಲ. ನಿಮಗೆ ಮೂಲಭೂತ ಹಕ್ಕುಗಳಿಲ್ಲದಿದ್ದರೆ, ಗುಲಾಮರಾಗುತ್ತೀರಿ ಎಂದು ತಿಳಿಸಿದ್ದಾರೆ.</p><p>‘ನೀವು (ಮೋದಿ) ಅದಾನಿ ಹಾಗೂ ಅಂಬಾನಿಯನ್ನು ಏಕೆ ಬಂಧಿಸುತ್ತಿಲ್ಲ? ನಿಮಗೆ ಧೈರ್ಯವಿಲ್ಲ ಆದರೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ಬಂಧಿಸಿದ್ದೀರಿ’ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ. </p>.ನೇಪಾಳ | 100 ರೂ ನೋಟಲ್ಲಿ ಭಾರತಕ್ಕೆ ಸೇರಿದ ಭಾಗ; ವಿರೋಧಿಸಿದ ಆರ್ಥಿಕ ಸಲಹೆಗಾರ.LS Polls | ಮತದಾನದ ಮಾಹಿತಿ ಬಿಡುಗಡೆ ಕೋರಿದ್ದ ADR ಅರ್ಜಿ ವಿಚಾರಣೆ ಮೇ 17ರಂದು. <p>ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಅವರು ಇಬ್ಬರು ಉದ್ಯಮಿಗಳಿಂದ ಬಾರಿ ಪ್ರಮಾಣದಲ್ಲಿ ಹಣ ಪಡೆದಿದ್ದಾರೆ ಎಂದು ಮೋದಿ ಆರೋಪಕ್ಕೆ ಖರ್ಗೆ ತಿರುಗೇಟು ನೀಡಿದ್ದಾರೆ. </p><p>ಅಧಿಕಾರ ದುರುಪಯೋಗ ಪಡಿಸಿಕೊಂಡು ವಿರೋಧ ಪಕ್ಷಗಳ ನಾಯಕರನ್ನು ಬಂಧಿಸಲಾಗಿದೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಬಂಧನಮುಕ್ತಗೊಳಿಸಲಾಗವುದು ಎಂದು ಖರ್ಗೆ ಹೇಳಿದ್ದಾರೆ.</p>.VIDEO | ಪ್ರಜ್ವಲ್ ಪ್ರಕರಣ: ಸರ್ಕಾರಿ ನಿವಾಸಕ್ಕೆ ಎಫ್ಎಸ್ಎಲ್ ತಂಡ ಭೇಟಿ.<p>ಈ ಬಾರಿ ಮೋದಿ ಅಧಿಕಾರಕ್ಕೆ ಬರುವುದು ಅಸಾಧ್ಯ ಎಂದ ಖರ್ಗೆ, ಚುನಾವಣಾ ಬಾಂಡ್ ಮೂಲಕ ಬಿಜೆಪಿಗೆ ದೇಣಿಗೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಜಾರಿಬಾದ್ (ಜಾರ್ಖಂಡ್): </strong> ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಭವಿಷ್ಯದಲ್ಲಿ ಯಾವುದೇ ಚುನಾವಣೆಗಳು ನಡೆಯುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.</p>.ಮುಸ್ಲಿಂ ಮಹಿಳೆಯರ Voter ID ಪರಿಶೀಲನೆ: ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕರಣ.Lok Sabha Elections Live |ಬಹುತೇಕ ಶಾಂತಿಯುತವಾಗಿ ಕೊನೆಗೊಂಡ 4ನೇ ಹಂತ; ಶೇ 62.8ರಷ್ಟು ಮತದಾನ. <p>ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಗೆಲುವು ಸಾಧಿಸಿದರೆ, ಭವಿಷ್ಯದಲ್ಲಿ ಯಾವುದೇ ಚುನಾವಣೆಗಳು ನಡೆಯುವುದಿಲ್ಲ. ನಿಮಗೆ ಮೂಲಭೂತ ಹಕ್ಕುಗಳಿಲ್ಲದಿದ್ದರೆ, ಗುಲಾಮರಾಗುತ್ತೀರಿ ಎಂದು ತಿಳಿಸಿದ್ದಾರೆ.</p><p>‘ನೀವು (ಮೋದಿ) ಅದಾನಿ ಹಾಗೂ ಅಂಬಾನಿಯನ್ನು ಏಕೆ ಬಂಧಿಸುತ್ತಿಲ್ಲ? ನಿಮಗೆ ಧೈರ್ಯವಿಲ್ಲ ಆದರೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ಬಂಧಿಸಿದ್ದೀರಿ’ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ. </p>.ನೇಪಾಳ | 100 ರೂ ನೋಟಲ್ಲಿ ಭಾರತಕ್ಕೆ ಸೇರಿದ ಭಾಗ; ವಿರೋಧಿಸಿದ ಆರ್ಥಿಕ ಸಲಹೆಗಾರ.LS Polls | ಮತದಾನದ ಮಾಹಿತಿ ಬಿಡುಗಡೆ ಕೋರಿದ್ದ ADR ಅರ್ಜಿ ವಿಚಾರಣೆ ಮೇ 17ರಂದು. <p>ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಅವರು ಇಬ್ಬರು ಉದ್ಯಮಿಗಳಿಂದ ಬಾರಿ ಪ್ರಮಾಣದಲ್ಲಿ ಹಣ ಪಡೆದಿದ್ದಾರೆ ಎಂದು ಮೋದಿ ಆರೋಪಕ್ಕೆ ಖರ್ಗೆ ತಿರುಗೇಟು ನೀಡಿದ್ದಾರೆ. </p><p>ಅಧಿಕಾರ ದುರುಪಯೋಗ ಪಡಿಸಿಕೊಂಡು ವಿರೋಧ ಪಕ್ಷಗಳ ನಾಯಕರನ್ನು ಬಂಧಿಸಲಾಗಿದೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಬಂಧನಮುಕ್ತಗೊಳಿಸಲಾಗವುದು ಎಂದು ಖರ್ಗೆ ಹೇಳಿದ್ದಾರೆ.</p>.VIDEO | ಪ್ರಜ್ವಲ್ ಪ್ರಕರಣ: ಸರ್ಕಾರಿ ನಿವಾಸಕ್ಕೆ ಎಫ್ಎಸ್ಎಲ್ ತಂಡ ಭೇಟಿ.<p>ಈ ಬಾರಿ ಮೋದಿ ಅಧಿಕಾರಕ್ಕೆ ಬರುವುದು ಅಸಾಧ್ಯ ಎಂದ ಖರ್ಗೆ, ಚುನಾವಣಾ ಬಾಂಡ್ ಮೂಲಕ ಬಿಜೆಪಿಗೆ ದೇಣಿಗೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>