<p><strong>ಗುವಾಹಟಿ:</strong> ಅಸ್ಸಾಂನ ವಿಧಾನಸಭೆಯಲ್ಲಿ ಹಲವು ದಶಕಗಳಿಂದ ಪಾಲಿಸಿಕೊಂಡು ಬರಲಾಗುತ್ತಿದ್ದ ಶುಕ್ರವಾರದ ನಮಾಜ್ ಬಿಡುವನ್ನು ರದ್ದುಪಡಿಸಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರ ಆದೇಶಿಸಿದೆ. </p><p>ಸದ್ಯ ಬಜೆಟ್ ಅಧಿವೇಶನ ನಡೆಯುತ್ತಿದೆ. ಆಗಸ್ಟ್ನಲ್ಲಿ ನಡೆದಿದ್ದ ಅಧಿವೇಶನ ಅವಧಿಯಲ್ಲಿ ನಮಾಜ್ ಬಿಡುವು ನೀಡಲಾಗುತ್ತಿತ್ತು. </p><p>ಸರ್ಕಾರದ ಈ ಕ್ರಮಕ್ಕೆ ಎಐಯುಡಿಎಫ್ ಶಾಸಕ ರಫೀಖುಲ್ ಇಸ್ಲಾಮ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>‘ಬಹುತಮದ ಆಧಾರದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಧನದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ 30 ಶಾಸಕರಿದ್ದಾರೆ. ಸರ್ಕಾರದ ಈ ನಿರ್ಧಾರದ ವಿರುದ್ಧ ನಮ್ಮ ನಿಲುವನ್ನು ಪ್ರಕಟಿಸಿದ್ದೇವೆ. ಬಿಜೆಪಿ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದಿದ್ದಾರೆ.</p><p>ವಿರೋಧಪಕ್ಷವಾದ ಕಾಂಗ್ರೆಸ್ನ ನಾಯಕ ದೇಬಬ್ರತ ಶೈಖಿಯಾ ಪ್ರತಿಕ್ರಿಯಿಸಿ, ‘ಶುಕ್ರವಾರದಂದು ಮುಸ್ಲಿಂ ಶಾಸಕರಿಗೆ ಅನುಕೂಲವಾಗುವ ಉದ್ದೇಶದಿಂದ ಈ ಬಿಡುವು ನೀಡಲಾಗುತ್ತಿತ್ತು. ನಮಾಜ್ಗೆ ತೆರಳೇಬೇಕಾದ್ದರಿಂದ ನಮ್ಮ ಪಕ್ಷದ ಹಾಗೂ ಎಐಯುಡಿಎಫ್ನ ಕೆಲ ಶಾಸಕರು ಬಹುಮುಖ್ಯವಾದ ಚರ್ಚೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಶುಕ್ರವಾರದಂದು ವಿಶೇಷ ಪ್ರಾರ್ಥನೆ ಸಲ್ಲಿಸುವ ಪದ್ಧತಿಯನ್ನು ಮುಸ್ಲಿಮರು ಅನುಸರಿಸುತ್ತಿರುವುದರಿಂದ, ಅವರಿಗೆ ಬಿಡುವು ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.</p><p>‘ಸಂವಿಧಾನದ ಜಾತ್ಯತೀತ ಗುಣಕ್ಕೆ ಅನುಗುಣವಾಗಿ ಅಸ್ಸಾಂನ ವಿಧಾನಸಭೆಯು ಶುಕ್ರವಾರವೂ ವಾರದ ಇತರ ದಿನಗಳಂತೆಯೇ ಕಾರ್ಯ ನಿರ್ವಹಿಸಲಿದೆ. ಇದನ್ನೇ ನಿಯಮಾವಳಿ ಸಮಿತಿಯ ಮುಂದಿಟ್ಟು, ಬಹುಮತದ ಆಧಾರದಲ್ಲಿ ಅದು ಸ್ವೀಕಾರವಾಗಿದೆ’ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.</p><p>‘1937ರಲ್ಲಿ ಮುಸ್ಲೀಂ ಲೀಗ್ನ ಸೈಯದ್ ಸಾದುಲ್ಲಾ ಅವರು ಶುಕ್ರವಾರದ ನಮಾಜ್ಗೆ ಬಿಡುವು ನೀಡುವ ಪದ್ಧತಿ ಜಾರಿಗೆ ತಂದರು. ವಸಾಹತುಶಾಹಿ ವ್ಯವಸ್ಥೆಯ ಕುರುಹು ಆಗಿದ್ದ ಈ ಪದ್ಧತಿಯನ್ನು ಕೈಬಿಡಲು ನಿರ್ಧರಿಸಲಾಗಿದೆ’ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಅಸ್ಸಾಂನ ವಿಧಾನಸಭೆಯಲ್ಲಿ ಹಲವು ದಶಕಗಳಿಂದ ಪಾಲಿಸಿಕೊಂಡು ಬರಲಾಗುತ್ತಿದ್ದ ಶುಕ್ರವಾರದ ನಮಾಜ್ ಬಿಡುವನ್ನು ರದ್ದುಪಡಿಸಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರ ಆದೇಶಿಸಿದೆ. </p><p>ಸದ್ಯ ಬಜೆಟ್ ಅಧಿವೇಶನ ನಡೆಯುತ್ತಿದೆ. ಆಗಸ್ಟ್ನಲ್ಲಿ ನಡೆದಿದ್ದ ಅಧಿವೇಶನ ಅವಧಿಯಲ್ಲಿ ನಮಾಜ್ ಬಿಡುವು ನೀಡಲಾಗುತ್ತಿತ್ತು. </p><p>ಸರ್ಕಾರದ ಈ ಕ್ರಮಕ್ಕೆ ಎಐಯುಡಿಎಫ್ ಶಾಸಕ ರಫೀಖುಲ್ ಇಸ್ಲಾಮ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>‘ಬಹುತಮದ ಆಧಾರದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಧನದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ 30 ಶಾಸಕರಿದ್ದಾರೆ. ಸರ್ಕಾರದ ಈ ನಿರ್ಧಾರದ ವಿರುದ್ಧ ನಮ್ಮ ನಿಲುವನ್ನು ಪ್ರಕಟಿಸಿದ್ದೇವೆ. ಬಿಜೆಪಿ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದಿದ್ದಾರೆ.</p><p>ವಿರೋಧಪಕ್ಷವಾದ ಕಾಂಗ್ರೆಸ್ನ ನಾಯಕ ದೇಬಬ್ರತ ಶೈಖಿಯಾ ಪ್ರತಿಕ್ರಿಯಿಸಿ, ‘ಶುಕ್ರವಾರದಂದು ಮುಸ್ಲಿಂ ಶಾಸಕರಿಗೆ ಅನುಕೂಲವಾಗುವ ಉದ್ದೇಶದಿಂದ ಈ ಬಿಡುವು ನೀಡಲಾಗುತ್ತಿತ್ತು. ನಮಾಜ್ಗೆ ತೆರಳೇಬೇಕಾದ್ದರಿಂದ ನಮ್ಮ ಪಕ್ಷದ ಹಾಗೂ ಎಐಯುಡಿಎಫ್ನ ಕೆಲ ಶಾಸಕರು ಬಹುಮುಖ್ಯವಾದ ಚರ್ಚೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಶುಕ್ರವಾರದಂದು ವಿಶೇಷ ಪ್ರಾರ್ಥನೆ ಸಲ್ಲಿಸುವ ಪದ್ಧತಿಯನ್ನು ಮುಸ್ಲಿಮರು ಅನುಸರಿಸುತ್ತಿರುವುದರಿಂದ, ಅವರಿಗೆ ಬಿಡುವು ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.</p><p>‘ಸಂವಿಧಾನದ ಜಾತ್ಯತೀತ ಗುಣಕ್ಕೆ ಅನುಗುಣವಾಗಿ ಅಸ್ಸಾಂನ ವಿಧಾನಸಭೆಯು ಶುಕ್ರವಾರವೂ ವಾರದ ಇತರ ದಿನಗಳಂತೆಯೇ ಕಾರ್ಯ ನಿರ್ವಹಿಸಲಿದೆ. ಇದನ್ನೇ ನಿಯಮಾವಳಿ ಸಮಿತಿಯ ಮುಂದಿಟ್ಟು, ಬಹುಮತದ ಆಧಾರದಲ್ಲಿ ಅದು ಸ್ವೀಕಾರವಾಗಿದೆ’ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.</p><p>‘1937ರಲ್ಲಿ ಮುಸ್ಲೀಂ ಲೀಗ್ನ ಸೈಯದ್ ಸಾದುಲ್ಲಾ ಅವರು ಶುಕ್ರವಾರದ ನಮಾಜ್ಗೆ ಬಿಡುವು ನೀಡುವ ಪದ್ಧತಿ ಜಾರಿಗೆ ತಂದರು. ವಸಾಹತುಶಾಹಿ ವ್ಯವಸ್ಥೆಯ ಕುರುಹು ಆಗಿದ್ದ ಈ ಪದ್ಧತಿಯನ್ನು ಕೈಬಿಡಲು ನಿರ್ಧರಿಸಲಾಗಿದೆ’ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>