<p><strong>ನವದೆಹಲಿ</strong>: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಕುಟುಂಬದ ಖಾಸಗೀತನವನ್ನು ಗೌರವಿಸುವ ಸಲುವಾಗಿ, ಸಿಂಗ್ ಅವರ ಚಿತಾಭಸ್ಮ ವಿಸರ್ಜನೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಭಾಗಿಯಾಗಿರಲಿಲ್ಲ ಎಂದು ಪಕ್ಷವು ಸೋಮವಾರ ತಿಳಿಸಿದೆ.</p><p>ಕಾಂಗ್ರೆಸ್ ವಿರುದ್ಧ ಅದರಲ್ಲೂ ಮುಖ್ಯವಾಗಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯು ಟೀಕೆ ಮಾಡಿದ ಬೆನ್ನಲ್ಲೇ ಈ ಸ್ಪಷ್ಟನೆ ನೀಡಿದೆ.</p><p>‘ಸಿಂಗ್ ಅವರ ಅಂತ್ಯಕ್ರಿಯೆಯ ಬಳಿಕ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮೃತರ ನಿವಾಸಕ್ಕೆ ತೆರಳಿ ಕುಟುಂಬದ ಸದಸ್ಯರನ್ನು ಭೇಟಿಯಾಗಿದ್ದರು’ ಎಂದು ಪಕ್ಷದ ನಾಯಕ ಪವನ್ ಖೇರಾ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p><p>‘ಅಂತ್ಯಸಂಸ್ಕಾರದ ಸಮಯದಲ್ಲಿ ಕುಟುಂಬಕ್ಕೆ ಗೋಪ್ಯತೆ ಸಿಗದ ಕಾರಣ ಮತ್ತು ಕುಟುಂಬದ ಕೆಲವು ಸದಸ್ಯರು ಚಿತಾಗಾರವನ್ನು ತಲುಪಲು ಸಾಧ್ಯವಾಗದ ಕಾರಣ ಅಸ್ಥಿ ವಿಸರ್ಜನೆ ಸಂದರ್ಭದಲ್ಲಾದರೂ ಕುಟುಂಬದ ಖಾಸಗೀತನವನ್ನು ಕಾಪಾಡಬೇಕೆಂದು ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು' ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಕುಟುಂಬದ ಖಾಸಗೀತನವನ್ನು ಗೌರವಿಸುವ ಸಲುವಾಗಿ, ಸಿಂಗ್ ಅವರ ಚಿತಾಭಸ್ಮ ವಿಸರ್ಜನೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಭಾಗಿಯಾಗಿರಲಿಲ್ಲ ಎಂದು ಪಕ್ಷವು ಸೋಮವಾರ ತಿಳಿಸಿದೆ.</p><p>ಕಾಂಗ್ರೆಸ್ ವಿರುದ್ಧ ಅದರಲ್ಲೂ ಮುಖ್ಯವಾಗಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯು ಟೀಕೆ ಮಾಡಿದ ಬೆನ್ನಲ್ಲೇ ಈ ಸ್ಪಷ್ಟನೆ ನೀಡಿದೆ.</p><p>‘ಸಿಂಗ್ ಅವರ ಅಂತ್ಯಕ್ರಿಯೆಯ ಬಳಿಕ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮೃತರ ನಿವಾಸಕ್ಕೆ ತೆರಳಿ ಕುಟುಂಬದ ಸದಸ್ಯರನ್ನು ಭೇಟಿಯಾಗಿದ್ದರು’ ಎಂದು ಪಕ್ಷದ ನಾಯಕ ಪವನ್ ಖೇರಾ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p><p>‘ಅಂತ್ಯಸಂಸ್ಕಾರದ ಸಮಯದಲ್ಲಿ ಕುಟುಂಬಕ್ಕೆ ಗೋಪ್ಯತೆ ಸಿಗದ ಕಾರಣ ಮತ್ತು ಕುಟುಂಬದ ಕೆಲವು ಸದಸ್ಯರು ಚಿತಾಗಾರವನ್ನು ತಲುಪಲು ಸಾಧ್ಯವಾಗದ ಕಾರಣ ಅಸ್ಥಿ ವಿಸರ್ಜನೆ ಸಂದರ್ಭದಲ್ಲಾದರೂ ಕುಟುಂಬದ ಖಾಸಗೀತನವನ್ನು ಕಾಪಾಡಬೇಕೆಂದು ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು' ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>