<p><strong>ಬಾಲೇಶ್ವರ (ಒಡಿಶಾ):</strong> ನೆರೆಯ ಜಾರ್ಖಂಡ್ನಲ್ಲಿ ಶನಿವಾರ ಸುರಿದ ಭಾರಿ ಮಳೆಯಿಂದಾಗಿ ಸುವರ್ಣರೇಖಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ಇದರಿಂದಾಗಿ ಒಡಿಶಾದ ಬಾಲೇಶ್ವರ ಜಿಲ್ಲೆಯ ಹಳ್ಳಿಗಳಿಗೆ ನೀರು ನುಗ್ಗಿದ್ದು, 50 ಸಾವಿರಕ್ಕೂ ಹೆಚ್ಚು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಭೋಗ್ರೈ, ಬಲಿಯಾಪಾಲ್, ಬಸ್ತಾ ಮತ್ತು ಜಲೇಶ್ವರ ಅಧಿಸೂಚಿತ ಪ್ರದೇಶ ಮಂಡಳಿಯ (ಎನ್ಎಸಿ) ಮೂರು ಬ್ಲಾಕ್ಗಳಲ್ಲಿರುವ 17 ಗ್ರಾಮ ಪಂಚಾಯತ್ ಪ್ರದೇಶಗಳು ಹಠಾತ್ ಪ್ರವಾಹಕ್ಕೆ ಒಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗೆ ಸಜ್ಜಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ತಗ್ಗು ಪ್ರದೇಶ ಹಾಗೂ ಪ್ರವಾಹ ಭೀತಿ ಎದುರಿಸುತ್ತಿರುವ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳಿಗೆ ಜಾಗರೂಕರಾಗಿರಲು ತಿಳಿಸಲಾಗಿದೆ. ಪರಿಸ್ಥಿತಿ ತೀರಾ ಹದಗೆಟ್ಟರೆ ಹತ್ತಿರದ ಆಶ್ರಯ ಶಿಬಿರಗಳಿಗೆ ಸ್ಥಳಾಂತರಗೊಳ್ಳಲು ಸಿದ್ಧರಾಗಿರುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.</p>. <p>ಅಗತ್ಯವಿದ್ದರೆ ಜನರನ್ನು ಸ್ಥಳಾಂತರಿಸಲು ಸಿದ್ಧರಾಗಿರುವಂತೆ ಬ್ಲಾಕ್ ಅಭಿವೃದ್ಧಿ ಅಧಿಕಾರಿಗಳು (ಬಿಡಿಒಗಳು) ಮತ್ತು ತಹಶೀಲ್ದಾರ್ಗೆ ಬಾಲೇಶ್ವರ ಜಿಲ್ಲಾಧಿಕಾರಿ ಸೂರ್ಯವಂಶಿ ಮಯೂರ್ ವಿಕಾಸ್ ಅವರು ಸೂಚನೆ ನೀಡಿದ್ದಾರೆ. ಅಲ್ಲದೇ ಅಗತ್ಯ ಔಷಧಿಗಳ ದಾಸ್ತಾನು ಇಟ್ಟುಕೊಳ್ಳಲು ಮುಖ್ಯ ಜಿಲ್ಲಾ ವೈದ್ಯಾಧಿಕಾರಿಗೆ (ಸಿಡಿಎಂಒ) ನಿರ್ದೇಶನ ನೀಡಿದ್ದಾರೆ.</p>.<p>ಜಾರ್ಖಂಡ್ನ ಚಾಂಡಿಲ್ ಅಣೆಕಟ್ಟಿನಿಂದ ಏಕಾಏಕಿ ನೀರು ಬಿಡುಗಡೆ ಮಾಡಿದ ಕಾರಣ ಬಾಲೇಶ್ವರ ಜಿಲ್ಲೆಯ ಕೆಲವು ಭಾಗಗಳಲ್ಲಿ ಹಠಾತ್ ಪ್ರವಾಹ ಉಂಟಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.</p>.ಒಡಿಶಾ ಪ್ರವಾಹ: ಪರಿಹಾರ ಕಾರ್ಯ ತೀವ್ರ ಚುರುಕು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಲೇಶ್ವರ (ಒಡಿಶಾ):</strong> ನೆರೆಯ ಜಾರ್ಖಂಡ್ನಲ್ಲಿ ಶನಿವಾರ ಸುರಿದ ಭಾರಿ ಮಳೆಯಿಂದಾಗಿ ಸುವರ್ಣರೇಖಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ಇದರಿಂದಾಗಿ ಒಡಿಶಾದ ಬಾಲೇಶ್ವರ ಜಿಲ್ಲೆಯ ಹಳ್ಳಿಗಳಿಗೆ ನೀರು ನುಗ್ಗಿದ್ದು, 50 ಸಾವಿರಕ್ಕೂ ಹೆಚ್ಚು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಭೋಗ್ರೈ, ಬಲಿಯಾಪಾಲ್, ಬಸ್ತಾ ಮತ್ತು ಜಲೇಶ್ವರ ಅಧಿಸೂಚಿತ ಪ್ರದೇಶ ಮಂಡಳಿಯ (ಎನ್ಎಸಿ) ಮೂರು ಬ್ಲಾಕ್ಗಳಲ್ಲಿರುವ 17 ಗ್ರಾಮ ಪಂಚಾಯತ್ ಪ್ರದೇಶಗಳು ಹಠಾತ್ ಪ್ರವಾಹಕ್ಕೆ ಒಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗೆ ಸಜ್ಜಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ತಗ್ಗು ಪ್ರದೇಶ ಹಾಗೂ ಪ್ರವಾಹ ಭೀತಿ ಎದುರಿಸುತ್ತಿರುವ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳಿಗೆ ಜಾಗರೂಕರಾಗಿರಲು ತಿಳಿಸಲಾಗಿದೆ. ಪರಿಸ್ಥಿತಿ ತೀರಾ ಹದಗೆಟ್ಟರೆ ಹತ್ತಿರದ ಆಶ್ರಯ ಶಿಬಿರಗಳಿಗೆ ಸ್ಥಳಾಂತರಗೊಳ್ಳಲು ಸಿದ್ಧರಾಗಿರುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.</p>. <p>ಅಗತ್ಯವಿದ್ದರೆ ಜನರನ್ನು ಸ್ಥಳಾಂತರಿಸಲು ಸಿದ್ಧರಾಗಿರುವಂತೆ ಬ್ಲಾಕ್ ಅಭಿವೃದ್ಧಿ ಅಧಿಕಾರಿಗಳು (ಬಿಡಿಒಗಳು) ಮತ್ತು ತಹಶೀಲ್ದಾರ್ಗೆ ಬಾಲೇಶ್ವರ ಜಿಲ್ಲಾಧಿಕಾರಿ ಸೂರ್ಯವಂಶಿ ಮಯೂರ್ ವಿಕಾಸ್ ಅವರು ಸೂಚನೆ ನೀಡಿದ್ದಾರೆ. ಅಲ್ಲದೇ ಅಗತ್ಯ ಔಷಧಿಗಳ ದಾಸ್ತಾನು ಇಟ್ಟುಕೊಳ್ಳಲು ಮುಖ್ಯ ಜಿಲ್ಲಾ ವೈದ್ಯಾಧಿಕಾರಿಗೆ (ಸಿಡಿಎಂಒ) ನಿರ್ದೇಶನ ನೀಡಿದ್ದಾರೆ.</p>.<p>ಜಾರ್ಖಂಡ್ನ ಚಾಂಡಿಲ್ ಅಣೆಕಟ್ಟಿನಿಂದ ಏಕಾಏಕಿ ನೀರು ಬಿಡುಗಡೆ ಮಾಡಿದ ಕಾರಣ ಬಾಲೇಶ್ವರ ಜಿಲ್ಲೆಯ ಕೆಲವು ಭಾಗಗಳಲ್ಲಿ ಹಠಾತ್ ಪ್ರವಾಹ ಉಂಟಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.</p>.ಒಡಿಶಾ ಪ್ರವಾಹ: ಪರಿಹಾರ ಕಾರ್ಯ ತೀವ್ರ ಚುರುಕು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>