<p><strong>ತಿರುವನಂತಪುರ</strong>: ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಯೋಜನೆಯು ಸಾಂವಿಧಾನಿಕವಾಗಿ ಊರ್ಜಿತವಲ್ಲ. ಇದು ದೇಶದ ಒಕ್ಕೂಟ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. </p><p>ತಿರುವನಂತಪುರದಲ್ಲಿ ನಡೆದ ಮಾತೃಭೂಮಿ ಅಂತರರಾಷ್ಟ್ರೀಯ ಅಕ್ಷರಗಳ ಉತ್ಸವದ ಆರನೇ ಆವೃತ್ತಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಈ ಪ್ರಸ್ತಾವನೆಯು ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ’ ಎಂದು ತಿಳಿಸಿದ್ದಾರೆ.</p><p>ಒಂದು ರಾಷ್ಟ್ರ, ಒಂದು ಚುನಾವಣೆಯ ಮೂಲಕ ಚುನಾವಣೆ ನಡೆಸಿದಾಗ ಪಕ್ಷಾಂತರ ಅಥವಾ ಅವಿಶ್ವಾಸ ನಿರ್ಣಯದಿಂದಾಗಿ ರಾಜ್ಯ ಸರ್ಕಾರ ಪತನವಾದರೆ, ಮುಂದಿನ ಲೋಕಸಭೆ ಚುನಾವಣೆ ನಡೆಯುವವರೆಗೆ ಆ ನಿರ್ದಿಷ್ಟ ರಾಜ್ಯವು ಕಾಯಬೇಕಾಗುತ್ತದೆ. ಇದು 174ನೇ ವಿಧಿಯನ್ನು ದುರ್ಬಲಗೊಳಿಸುತ್ತದೆ ಮತ್ತು ಒಕ್ಕೂಟ ವ್ಯವಸ್ಥೆಯ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ ಎಂದು ಉದಯನಿಧಿ ಹೇಳಿದ್ದಾರೆ</p><p>ಕೇಂದ್ರ ಬಜೆಟ್ನಲ್ಲಿ ಕೇರಳ ಮತ್ತು ತಮಿಳುನಾಡು ರಾಜ್ಯಗಳನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಅವರು ಆರೋಪಿಸಿದ್ದಾರೆ.</p>.ಮತಗಟ್ಟೆ ಸಮೀಕ್ಷೆಗಳಲ್ಲಿ ನಂಬಿಕೆಯಿಲ್ಲ, ಜನಾದೇಶಕ್ಕಾಗಿ ಕಾಯೋಣ: ಡಿ.ಕೆ.ಶಿವಕುಮಾರ್.ಮೋದಿ-ಟ್ರಂಪ್ ಉತ್ತಮ ಸ್ನೇಹಿತರಾದರೇ ಭಾರತೀಯರ ಕೈಗಳಿಗೆ ಕೋಳವೇಕೆ?: ಪ್ರಿಯಾಂಕಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಯೋಜನೆಯು ಸಾಂವಿಧಾನಿಕವಾಗಿ ಊರ್ಜಿತವಲ್ಲ. ಇದು ದೇಶದ ಒಕ್ಕೂಟ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. </p><p>ತಿರುವನಂತಪುರದಲ್ಲಿ ನಡೆದ ಮಾತೃಭೂಮಿ ಅಂತರರಾಷ್ಟ್ರೀಯ ಅಕ್ಷರಗಳ ಉತ್ಸವದ ಆರನೇ ಆವೃತ್ತಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಈ ಪ್ರಸ್ತಾವನೆಯು ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ’ ಎಂದು ತಿಳಿಸಿದ್ದಾರೆ.</p><p>ಒಂದು ರಾಷ್ಟ್ರ, ಒಂದು ಚುನಾವಣೆಯ ಮೂಲಕ ಚುನಾವಣೆ ನಡೆಸಿದಾಗ ಪಕ್ಷಾಂತರ ಅಥವಾ ಅವಿಶ್ವಾಸ ನಿರ್ಣಯದಿಂದಾಗಿ ರಾಜ್ಯ ಸರ್ಕಾರ ಪತನವಾದರೆ, ಮುಂದಿನ ಲೋಕಸಭೆ ಚುನಾವಣೆ ನಡೆಯುವವರೆಗೆ ಆ ನಿರ್ದಿಷ್ಟ ರಾಜ್ಯವು ಕಾಯಬೇಕಾಗುತ್ತದೆ. ಇದು 174ನೇ ವಿಧಿಯನ್ನು ದುರ್ಬಲಗೊಳಿಸುತ್ತದೆ ಮತ್ತು ಒಕ್ಕೂಟ ವ್ಯವಸ್ಥೆಯ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ ಎಂದು ಉದಯನಿಧಿ ಹೇಳಿದ್ದಾರೆ</p><p>ಕೇಂದ್ರ ಬಜೆಟ್ನಲ್ಲಿ ಕೇರಳ ಮತ್ತು ತಮಿಳುನಾಡು ರಾಜ್ಯಗಳನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಅವರು ಆರೋಪಿಸಿದ್ದಾರೆ.</p>.ಮತಗಟ್ಟೆ ಸಮೀಕ್ಷೆಗಳಲ್ಲಿ ನಂಬಿಕೆಯಿಲ್ಲ, ಜನಾದೇಶಕ್ಕಾಗಿ ಕಾಯೋಣ: ಡಿ.ಕೆ.ಶಿವಕುಮಾರ್.ಮೋದಿ-ಟ್ರಂಪ್ ಉತ್ತಮ ಸ್ನೇಹಿತರಾದರೇ ಭಾರತೀಯರ ಕೈಗಳಿಗೆ ಕೋಳವೇಕೆ?: ಪ್ರಿಯಾಂಕಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>