<p><strong>ಹೈದರಾಬಾದ್:</strong> ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ನಡೆಸಲಾದ 'ಆಪರೇಷನ್ ಸಿಂಧೂರ' ಭಾರತೀಯ ವಾಯುಪಡೆಯ ಅಪ್ರತಿಮ ಪರಾಕ್ರಮಕ್ಕೆ ಒಂದು ಉಜ್ವಲ ಸಾಕ್ಷಿಯಾಗಿದೆ ಎಂದು ಭಾರತೀಯ ವಾಯುಪಡೆಯ ( ಐಎಎಫ್) ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ ಸಿಂಗ್ ಶನಿವಾರ ಹೇಳಿದ್ದಾರೆ.</p>.ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಯೋಧ ರಾಜಪ್ಪಗೆ ಅದ್ದೂರಿ ಸನ್ಮಾನ.<p>ಈ ಕಾರ್ಯಾಚರಣೆಯು ಶತ್ರುಗಳ ಮೇಲೆ ತ್ವರಿತ, ನಿಖರ ಮತ್ತು ನಿರ್ಣಾಯಕ ದಾಳಿ ಮಾಡುವ ನೀಡುವ ಐಎಎಫ್ನ ಸಾಮರ್ಥ್ಯವನ್ನು ತೋರ್ಪಡಿಸಿದೆ ಎಂದಿದ್ದಾರೆ.</p><p>ಹೈದರಾಬಾದ್ ಸಮೀಪದ ದುಂಡಿಗಲ್ನ ವಾಯುಪಡೆ ಅಕಾಡೆಮಿಯಲ್ಲಿ ನಡೆದ ಸಂಯೋಜಿತ ಪದವಿ ಪರೇಡ್ನಲ್ಲಿ (ಸಿಜಿಪಿ) ಮಾತನಾಡಿದ ಸಿಂಗ್, ಆಪರೇಷನ್ ಸಿಂಧೂರ ಸಶಸ್ತ್ರ ಪಡೆಗಳೊಳಗಿನ ಅಸಾಧಾರಣ ಸಮನ್ವಯ, ಶಕ್ತಿ ಮತ್ತು ಏಕೀಕರಣವನ್ನು ಪ್ರದರ್ಶಿಸಿದೆ ಎಂದು ಹೇಳಿದ್ದಾರೆ.</p>.ಆಪರೇಷನ್ ಸಿಂಧೂರ | ಸರ್ವಪಕ್ಷಗಳ ನಿಯೋಗ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ.<p>‘ಭಾರತದ ಪ್ರತಿಯೊಬ್ಬ ನಾಗರಿಕರು ಭಾರತೀಯ ವಾಯುಪಡೆಯ ಮೇಲೆ ಇಟ್ಟಿರುವ ನಂಬಿಕೆಗೆ ತಕ್ಕಂತೆ ಬದುಕುವುದು ನಮ್ಮ ಸಾಮೂಹಿಕ ಜವಾಬ್ದಾರಿಯಾಗಿದೆ ಮತ್ತು ನಾವು ಇದಕ್ಕೆ ಸಿದ್ಧರಾಗಿರಬೇಕು ಮತ್ತು ಬದ್ಧರಾಗಿರಬೇಕು’ ಎಂದು ಅವರು ಹೇಳಿದ್ದಾರೆ.</p><p>ಯುದ್ಧಭೂಮಿ ಹೆಚ್ಚು ಹೆಚ್ಚು ಸಂಕೀರ್ಣವಾಗಲಿದೆ ಎಂದ ಅವರು, ಭವಿಷ್ಯದ ಸಂಘರ್ಷಗಳಲ್ಲಿ ಯಶಸ್ವಿಯಾಗಲು ಯುವ ಅಧಿಕಾರಿಗಳು ನಿರಂತರವಾಗಿ ತರಬೇತಿ ಪಡೆಯಬೇಕಾಗುತ್ತದೆ ಎಂದು ನುಡಿದಿದ್ದಾರೆ.</p><p>ಆರೋಗ್ಯಕರ ಜೀವನಶೈಲಿಯ ಮೂಲಕ ದೈಹಿಕ ಮತ್ತು ಮಾನಸಿಕ ಸದೃಢತೆ ಮತ್ತು ವ್ಯಕ್ತಿತ್ವ ವಿಕಸನದತ್ತ ಗಮನಹರಿಸಿ ಎಂದು ಅವರು ಇದೇ ವೇಳೆ ಕರೆ ನೀಡಿದ್ದಾರೆ.</p> .ಆಪರೇಷನ್ ಸಿಂಧೂರ ವಿರೋಧಿಸಿ ಇಂಗ್ಲೆಂಡ್ನಲ್ಲಿ ಪಾಕಿಸ್ತಾನ ನಿಯೋಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ನಡೆಸಲಾದ 'ಆಪರೇಷನ್ ಸಿಂಧೂರ' ಭಾರತೀಯ ವಾಯುಪಡೆಯ ಅಪ್ರತಿಮ ಪರಾಕ್ರಮಕ್ಕೆ ಒಂದು ಉಜ್ವಲ ಸಾಕ್ಷಿಯಾಗಿದೆ ಎಂದು ಭಾರತೀಯ ವಾಯುಪಡೆಯ ( ಐಎಎಫ್) ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ ಸಿಂಗ್ ಶನಿವಾರ ಹೇಳಿದ್ದಾರೆ.</p>.ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಯೋಧ ರಾಜಪ್ಪಗೆ ಅದ್ದೂರಿ ಸನ್ಮಾನ.<p>ಈ ಕಾರ್ಯಾಚರಣೆಯು ಶತ್ರುಗಳ ಮೇಲೆ ತ್ವರಿತ, ನಿಖರ ಮತ್ತು ನಿರ್ಣಾಯಕ ದಾಳಿ ಮಾಡುವ ನೀಡುವ ಐಎಎಫ್ನ ಸಾಮರ್ಥ್ಯವನ್ನು ತೋರ್ಪಡಿಸಿದೆ ಎಂದಿದ್ದಾರೆ.</p><p>ಹೈದರಾಬಾದ್ ಸಮೀಪದ ದುಂಡಿಗಲ್ನ ವಾಯುಪಡೆ ಅಕಾಡೆಮಿಯಲ್ಲಿ ನಡೆದ ಸಂಯೋಜಿತ ಪದವಿ ಪರೇಡ್ನಲ್ಲಿ (ಸಿಜಿಪಿ) ಮಾತನಾಡಿದ ಸಿಂಗ್, ಆಪರೇಷನ್ ಸಿಂಧೂರ ಸಶಸ್ತ್ರ ಪಡೆಗಳೊಳಗಿನ ಅಸಾಧಾರಣ ಸಮನ್ವಯ, ಶಕ್ತಿ ಮತ್ತು ಏಕೀಕರಣವನ್ನು ಪ್ರದರ್ಶಿಸಿದೆ ಎಂದು ಹೇಳಿದ್ದಾರೆ.</p>.ಆಪರೇಷನ್ ಸಿಂಧೂರ | ಸರ್ವಪಕ್ಷಗಳ ನಿಯೋಗ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ.<p>‘ಭಾರತದ ಪ್ರತಿಯೊಬ್ಬ ನಾಗರಿಕರು ಭಾರತೀಯ ವಾಯುಪಡೆಯ ಮೇಲೆ ಇಟ್ಟಿರುವ ನಂಬಿಕೆಗೆ ತಕ್ಕಂತೆ ಬದುಕುವುದು ನಮ್ಮ ಸಾಮೂಹಿಕ ಜವಾಬ್ದಾರಿಯಾಗಿದೆ ಮತ್ತು ನಾವು ಇದಕ್ಕೆ ಸಿದ್ಧರಾಗಿರಬೇಕು ಮತ್ತು ಬದ್ಧರಾಗಿರಬೇಕು’ ಎಂದು ಅವರು ಹೇಳಿದ್ದಾರೆ.</p><p>ಯುದ್ಧಭೂಮಿ ಹೆಚ್ಚು ಹೆಚ್ಚು ಸಂಕೀರ್ಣವಾಗಲಿದೆ ಎಂದ ಅವರು, ಭವಿಷ್ಯದ ಸಂಘರ್ಷಗಳಲ್ಲಿ ಯಶಸ್ವಿಯಾಗಲು ಯುವ ಅಧಿಕಾರಿಗಳು ನಿರಂತರವಾಗಿ ತರಬೇತಿ ಪಡೆಯಬೇಕಾಗುತ್ತದೆ ಎಂದು ನುಡಿದಿದ್ದಾರೆ.</p><p>ಆರೋಗ್ಯಕರ ಜೀವನಶೈಲಿಯ ಮೂಲಕ ದೈಹಿಕ ಮತ್ತು ಮಾನಸಿಕ ಸದೃಢತೆ ಮತ್ತು ವ್ಯಕ್ತಿತ್ವ ವಿಕಸನದತ್ತ ಗಮನಹರಿಸಿ ಎಂದು ಅವರು ಇದೇ ವೇಳೆ ಕರೆ ನೀಡಿದ್ದಾರೆ.</p> .ಆಪರೇಷನ್ ಸಿಂಧೂರ ವಿರೋಧಿಸಿ ಇಂಗ್ಲೆಂಡ್ನಲ್ಲಿ ಪಾಕಿಸ್ತಾನ ನಿಯೋಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>