<p><strong>ನವದೆಹಲಿ:</strong> ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಇಡೀ ಜಗತ್ತಿಗೆ ಒಗ್ಗಟ್ಟಿನ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದು ನಿರ್ಣಯ ಅಂಗೀಕರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಇಂದು (ಶುಕ್ರವಾರ) ಒತ್ತಾಯಿಸಿದ್ದಾರೆ. </p><p>ಸರ್ಕಾರ ಹಾಗೂ ವಿಪಕ್ಷಗಳ ಸಂಸದರ ನಿಯೋಗಗಳನ್ನು ವಿವಿಧ ದೇಶಗಳಿಗೆ ರವಾನಿಸಿ ಪಾಕಿಸ್ತಾನದ ಮೇಲೆ ರಾಜತಾಂತ್ರಿಕ ಒತ್ತಡ ಹೇರುವಂತೆಯೂ ಸಿಬಲ್ ಒತ್ತಾಯಿಸಿದ್ದಾರೆ. </p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಅಮೆರಿಕ ನಿರ್ಬಂಧ ವಿಧಿಸುವಂತೆಯೇ ಪಾಕಿಸ್ತಾನದೊಂದಿಗೆ ವ್ಯಾಪಾರ ಹೊಂದಿರುವ ಎಲ್ಲ ಪ್ರಮುಖ ರಾಷ್ಟ್ರಗಳಿಗೂ ನಮ್ಮ ಮಾರುಕಟ್ಟೆಗೆ ಬರಲು ಸಾಧ್ಯವಿಲ್ಲ ಎಂಬ ಸಂದೇಶ ಸಾರಬೇಕು' ಎಂದು ಹೇಳಿದ್ದಾರೆ. </p><p>'ಭಾರತದ ಸಾರ್ವಭೌಮತ್ವದ ಮೇಲಿನ ದಾಳಿ ಆಗಿರುವುದರಿಂದ ಇಡೀ ದೇಶವು ನಿಮ್ಮೊಂದಿಗೆ ಇದೆ. ಈ ಕ್ಷಣದಲ್ಲಿ ಸಂಸತ್ತಿನ ವಿಶೇಷ ಅಧಿವೇಶನ ಕರೆದು ಈ ಕುರಿತು ಚರ್ಚೆ ನಡೆಸುವಂತೆ ಪ್ರಧಾನಿ ಅವರಿಗೆ ಸೂಚಿಸಲು ಬಯಸುತ್ತೇನೆ. ಇಡೀ ದೇಶವೇ ಒಗ್ಗಟ್ಟಾಗಿದ್ದು, ಇಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ದೇಶದ ಭಾವನೆಯನ್ನು ವಿಶ್ವದ ಮುಂದೆ ವ್ಯಕ್ತಪಡಿಸಲು ಸಂಸತ್ತಿನಲ್ಲಿ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಬೇಕು' ಎಂದು ಸಲಹೆ ನೀಡಿದ್ದಾರೆ. </p><p>'ಭಯೋತ್ಪಾದಕನಿಗೆ ಯಾವುದೇ ಧರ್ಮ ಇರುವುದಿಲ್ಲ. ಪಾಕಿಸ್ತಾನವು ಭಯೋತ್ಪಾದನೆಯ ಮೂಲಕ ತನ್ನ ಸಮಸ್ಯೆಗಳನ್ನು ಜಗತ್ತಿನ ಮುಂದಿಡಲು ಬಯಸುತ್ತದೆ' ಎಂದು ಅವರು ಹೇಳಿದ್ದಾರೆ. </p><p>ಆಫ್ರಿಕಾ, ಅಮೆರಿಕ, ಯುರೋಪ್, ಚೀನಾ, ಜಪಾನ್, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ರಷ್ಯಾ, ದಕ್ಷಿಣ ಅಮೆರಿಕ ಸೇರಿದಂತೆ ಪ್ರಮುಖ ರಾಷ್ಟ್ರಗಳಿಗೆ ಸರ್ಕಾರ ಹಾಗೂ ವಿಪಕ್ಷಗಳ ಸಂಸದರ ನಿಯೋಗವನ್ನು ಕಳುಹಿಸಿ ರಾಜತಾಂತ್ರಿಕ ಒತ್ತಡ ಹೇರುವಂತೆಯೂ ಸಿಬಲ್ ಒತ್ತಾಯಿಸಿದ್ದಾರೆ. </p>.<div><blockquote>ಗುರುವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಪಾಲ್ಗೊಳ್ಳಬೇಕಿತ್ತು. ಆದರೆ ಅವರಿಗೆ ಬಿಹಾರದಲ್ಲಿ ನಡೆದ ಸಭೆ ಮುಖ್ಯ ಎನಿಸಿತು</blockquote><span class="attribution">ಕಪಿಲ್ ಸಿಬಲ್ ರಾಜ್ಯಸಭಾ ಸದಸ್ಯ</span></div>.Pahalgam Terror Attack: ಪಾಕ್ ಆರ್ಥಿಕತೆಗೆ ಭಾರಿ ಪೆಟ್ಟು?.Explainer: 1960ರ ಸಿಂಧೂ ಜಲ ಒಪ್ಪಂದ ಅಮಾನತು; ಪಾಕ್ ಮೇಲೆ ಪರಿಣಾಮ ಏನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಇಡೀ ಜಗತ್ತಿಗೆ ಒಗ್ಗಟ್ಟಿನ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದು ನಿರ್ಣಯ ಅಂಗೀಕರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಇಂದು (ಶುಕ್ರವಾರ) ಒತ್ತಾಯಿಸಿದ್ದಾರೆ. </p><p>ಸರ್ಕಾರ ಹಾಗೂ ವಿಪಕ್ಷಗಳ ಸಂಸದರ ನಿಯೋಗಗಳನ್ನು ವಿವಿಧ ದೇಶಗಳಿಗೆ ರವಾನಿಸಿ ಪಾಕಿಸ್ತಾನದ ಮೇಲೆ ರಾಜತಾಂತ್ರಿಕ ಒತ್ತಡ ಹೇರುವಂತೆಯೂ ಸಿಬಲ್ ಒತ್ತಾಯಿಸಿದ್ದಾರೆ. </p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಅಮೆರಿಕ ನಿರ್ಬಂಧ ವಿಧಿಸುವಂತೆಯೇ ಪಾಕಿಸ್ತಾನದೊಂದಿಗೆ ವ್ಯಾಪಾರ ಹೊಂದಿರುವ ಎಲ್ಲ ಪ್ರಮುಖ ರಾಷ್ಟ್ರಗಳಿಗೂ ನಮ್ಮ ಮಾರುಕಟ್ಟೆಗೆ ಬರಲು ಸಾಧ್ಯವಿಲ್ಲ ಎಂಬ ಸಂದೇಶ ಸಾರಬೇಕು' ಎಂದು ಹೇಳಿದ್ದಾರೆ. </p><p>'ಭಾರತದ ಸಾರ್ವಭೌಮತ್ವದ ಮೇಲಿನ ದಾಳಿ ಆಗಿರುವುದರಿಂದ ಇಡೀ ದೇಶವು ನಿಮ್ಮೊಂದಿಗೆ ಇದೆ. ಈ ಕ್ಷಣದಲ್ಲಿ ಸಂಸತ್ತಿನ ವಿಶೇಷ ಅಧಿವೇಶನ ಕರೆದು ಈ ಕುರಿತು ಚರ್ಚೆ ನಡೆಸುವಂತೆ ಪ್ರಧಾನಿ ಅವರಿಗೆ ಸೂಚಿಸಲು ಬಯಸುತ್ತೇನೆ. ಇಡೀ ದೇಶವೇ ಒಗ್ಗಟ್ಟಾಗಿದ್ದು, ಇಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ದೇಶದ ಭಾವನೆಯನ್ನು ವಿಶ್ವದ ಮುಂದೆ ವ್ಯಕ್ತಪಡಿಸಲು ಸಂಸತ್ತಿನಲ್ಲಿ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಬೇಕು' ಎಂದು ಸಲಹೆ ನೀಡಿದ್ದಾರೆ. </p><p>'ಭಯೋತ್ಪಾದಕನಿಗೆ ಯಾವುದೇ ಧರ್ಮ ಇರುವುದಿಲ್ಲ. ಪಾಕಿಸ್ತಾನವು ಭಯೋತ್ಪಾದನೆಯ ಮೂಲಕ ತನ್ನ ಸಮಸ್ಯೆಗಳನ್ನು ಜಗತ್ತಿನ ಮುಂದಿಡಲು ಬಯಸುತ್ತದೆ' ಎಂದು ಅವರು ಹೇಳಿದ್ದಾರೆ. </p><p>ಆಫ್ರಿಕಾ, ಅಮೆರಿಕ, ಯುರೋಪ್, ಚೀನಾ, ಜಪಾನ್, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ರಷ್ಯಾ, ದಕ್ಷಿಣ ಅಮೆರಿಕ ಸೇರಿದಂತೆ ಪ್ರಮುಖ ರಾಷ್ಟ್ರಗಳಿಗೆ ಸರ್ಕಾರ ಹಾಗೂ ವಿಪಕ್ಷಗಳ ಸಂಸದರ ನಿಯೋಗವನ್ನು ಕಳುಹಿಸಿ ರಾಜತಾಂತ್ರಿಕ ಒತ್ತಡ ಹೇರುವಂತೆಯೂ ಸಿಬಲ್ ಒತ್ತಾಯಿಸಿದ್ದಾರೆ. </p>.<div><blockquote>ಗುರುವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಪಾಲ್ಗೊಳ್ಳಬೇಕಿತ್ತು. ಆದರೆ ಅವರಿಗೆ ಬಿಹಾರದಲ್ಲಿ ನಡೆದ ಸಭೆ ಮುಖ್ಯ ಎನಿಸಿತು</blockquote><span class="attribution">ಕಪಿಲ್ ಸಿಬಲ್ ರಾಜ್ಯಸಭಾ ಸದಸ್ಯ</span></div>.Pahalgam Terror Attack: ಪಾಕ್ ಆರ್ಥಿಕತೆಗೆ ಭಾರಿ ಪೆಟ್ಟು?.Explainer: 1960ರ ಸಿಂಧೂ ಜಲ ಒಪ್ಪಂದ ಅಮಾನತು; ಪಾಕ್ ಮೇಲೆ ಪರಿಣಾಮ ಏನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>