<p><strong>ಜಮ್ಮು:</strong> ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಸತತ ಏಳನೇ ದಿನವೂ ಪಾಕಿಸ್ತಾನ ಕದನ ವಿರಾಮ ನಿಯಮ ಉಲ್ಲಂಘಿಸಿದೆ ಎಂದು ಅಧಿಕಾರಿಗಳು ಇಂದು (ಗುರುವಾರ) ತಿಳಿಸಿದ್ದಾರೆ. </p><p>ಜಮ್ಮು ಮತ್ತು ಕಾಶ್ಮೀರದ ಮೂರು ಗಡಿ ಜಿಲ್ಲೆಗಳಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಸತತ ಏಳನೇ ದಿನದ ರಾತ್ರಿಯೂ ಕದನ ವಿರಾಮ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. </p><p>ಭಾರತ ಮತ್ತು ಪಾಕಿಸ್ತಾನ ಸೇನೆಗಳ ಕಾರ್ಯಾಚರಣೆ ಮಹಾನಿರ್ದೇಶಕರ (ಡಿಜಿಎಂಒ) ಮಧ್ಯೆ ನಡೆದ ಮಾತುಕತೆ ಬಳಿಕವೂ ಗುಂಡಿನ ಚಕಮಕಿ ಮುಂದುವರಿದಿದೆ. </p><p>ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಉಭಯ ರಾಷ್ಟ್ರಗಳ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. </p><p>ಕುಪ್ವಾರ, ಉರಿ ಹಾಗೂ ಅಖ್ನೂರ್ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. </p><p>ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯಂತ್ರಣ ರೇಖೆಯಲ್ಲಿ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿ ವಿಚಾರವಾಗಿ ಭಾರತದ ಮಿಲಿಟರಿ ಕಾರ್ಯಾಚರಣೆ ಮಹಾನಿರ್ದೇಶಕರು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದರು. </p>.ಗಡಿಯಲ್ಲಿ ಮತ್ತೆ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ; ಭಾರತ ಪ್ರತ್ಯುತ್ತರ .ಗಡಿಯಲ್ಲಿ ಸತತ 5ನೇ ದಿನವೂ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಸತತ ಏಳನೇ ದಿನವೂ ಪಾಕಿಸ್ತಾನ ಕದನ ವಿರಾಮ ನಿಯಮ ಉಲ್ಲಂಘಿಸಿದೆ ಎಂದು ಅಧಿಕಾರಿಗಳು ಇಂದು (ಗುರುವಾರ) ತಿಳಿಸಿದ್ದಾರೆ. </p><p>ಜಮ್ಮು ಮತ್ತು ಕಾಶ್ಮೀರದ ಮೂರು ಗಡಿ ಜಿಲ್ಲೆಗಳಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಸತತ ಏಳನೇ ದಿನದ ರಾತ್ರಿಯೂ ಕದನ ವಿರಾಮ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. </p><p>ಭಾರತ ಮತ್ತು ಪಾಕಿಸ್ತಾನ ಸೇನೆಗಳ ಕಾರ್ಯಾಚರಣೆ ಮಹಾನಿರ್ದೇಶಕರ (ಡಿಜಿಎಂಒ) ಮಧ್ಯೆ ನಡೆದ ಮಾತುಕತೆ ಬಳಿಕವೂ ಗುಂಡಿನ ಚಕಮಕಿ ಮುಂದುವರಿದಿದೆ. </p><p>ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಉಭಯ ರಾಷ್ಟ್ರಗಳ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. </p><p>ಕುಪ್ವಾರ, ಉರಿ ಹಾಗೂ ಅಖ್ನೂರ್ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. </p><p>ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯಂತ್ರಣ ರೇಖೆಯಲ್ಲಿ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿ ವಿಚಾರವಾಗಿ ಭಾರತದ ಮಿಲಿಟರಿ ಕಾರ್ಯಾಚರಣೆ ಮಹಾನಿರ್ದೇಶಕರು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದರು. </p>.ಗಡಿಯಲ್ಲಿ ಮತ್ತೆ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ; ಭಾರತ ಪ್ರತ್ಯುತ್ತರ .ಗಡಿಯಲ್ಲಿ ಸತತ 5ನೇ ದಿನವೂ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>