<p><strong>ಶ್ರೀನಗರ</strong>: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಕಾಶ್ಮೀರಕ್ಕೆ ಆಗಮಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.</p><p>ಏಪ್ರಿಲ್ 22ರಂದು ನಡೆದ ದಾಳಿಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ರಾಹುಲ್ ಗಾಂಧಿ ಬಾದಾಮಿಬಾಗ್ ಕಂಟೋನ್ಮೆಂಟ್ನಲ್ಲಿರುವ ಸೇನಾ ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಈ ದಾಳಿಯಲ್ಲಿ 28 ಜನರು ಸಾವಿಗೀಡಾಗಿದ್ದರು, ಅದರಲ್ಲಿ ಹೆಚ್ಚಿನವರು ಪ್ರವಾಸಿಗರು.</p><p> ಪಕ್ಷದ ನಾಯಕರು, ವ್ಯಾಪಾರ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳು ಸೇರಿದಂತೆ ವಿವಿಧ ವಲಯದ ಜನರನ್ನೂ ಭೇಟಿ ಮಾಡಲಿದ್ದಾರೆ ಎಂದು ನಾಯಕರು ಹೇಳಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ರಾಹುಲ್ ಸಭೆ ನಡೆಸುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.</p><p>ದಾಳಿಯ ನಂತರ ಗುರುವಾರ ಕರೆಯಲಾಗಿದ್ದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಅಮೆರಿಕ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ವಾಪಸ್ ಆಗಿದ್ದರು.</p><p>ಭೀಕರ ಭಯೋತ್ಪಾದಕ ದಾಳಿಯ ಕುರಿತು ಪಕ್ಷಗಳಿಗೆ ಮಾಹಿತಿ ನೀಡಲು ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿಯೂ ಅವರು ಭಾಗವಹಿಸಿದ್ದರು.</p> .Pahalgam Terror Attack: ಇಬ್ಬರು ಉಗ್ರರ ಮನೆ ಧ್ವಂಸ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಕಾಶ್ಮೀರಕ್ಕೆ ಆಗಮಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.</p><p>ಏಪ್ರಿಲ್ 22ರಂದು ನಡೆದ ದಾಳಿಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ರಾಹುಲ್ ಗಾಂಧಿ ಬಾದಾಮಿಬಾಗ್ ಕಂಟೋನ್ಮೆಂಟ್ನಲ್ಲಿರುವ ಸೇನಾ ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಈ ದಾಳಿಯಲ್ಲಿ 28 ಜನರು ಸಾವಿಗೀಡಾಗಿದ್ದರು, ಅದರಲ್ಲಿ ಹೆಚ್ಚಿನವರು ಪ್ರವಾಸಿಗರು.</p><p> ಪಕ್ಷದ ನಾಯಕರು, ವ್ಯಾಪಾರ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳು ಸೇರಿದಂತೆ ವಿವಿಧ ವಲಯದ ಜನರನ್ನೂ ಭೇಟಿ ಮಾಡಲಿದ್ದಾರೆ ಎಂದು ನಾಯಕರು ಹೇಳಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ರಾಹುಲ್ ಸಭೆ ನಡೆಸುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.</p><p>ದಾಳಿಯ ನಂತರ ಗುರುವಾರ ಕರೆಯಲಾಗಿದ್ದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಅಮೆರಿಕ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ವಾಪಸ್ ಆಗಿದ್ದರು.</p><p>ಭೀಕರ ಭಯೋತ್ಪಾದಕ ದಾಳಿಯ ಕುರಿತು ಪಕ್ಷಗಳಿಗೆ ಮಾಹಿತಿ ನೀಡಲು ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿಯೂ ಅವರು ಭಾಗವಹಿಸಿದ್ದರು.</p> .Pahalgam Terror Attack: ಇಬ್ಬರು ಉಗ್ರರ ಮನೆ ಧ್ವಂಸ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>