<p><strong>ಶ್ರೀನಗರ</strong>: ಜಮ್ಮು ಸೇರಿದಂತೆ ವಿವಿಧ ನಗರಗಳಲ್ಲಿ ಗುರುವಾರ ರಾತ್ರಿ ನಡೆಸಿದ ಡ್ರೋನ್ ದಾಳಿಗೆ ಭಾರತ ತಕ್ಕ ಉತ್ತರ ನೀಡಿದೆ. ಈ ನಡುವೆ ಜಮ್ಮುವಿಗೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಶುಕ್ರವಾರ ಧಾವಿಸಿದ್ದಾರೆ.</p><p>ಈ ನಡುವೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಗುರುವಾರ ರಾತ್ರಿ ಪಾಕಿಸ್ತಾನ ಜಮ್ಮು , ಪಠಾಣ್ಕೋಟ್, ಉಧಂಪುರ ಸೇರಿದಂತೆ ಇತರೆ ಸ್ಥಳಗಳ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ಪ್ರಯತ್ನ ನಡೆಸಿತ್ತು. ಅಲ್ಲಿನ ಪರಿಸ್ಥಿತಿ ಅವಲೋಕಿಸಲು ಘಟನಾ ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು. </p><p>ಕಾಶ್ಮೀರದ ಎಲ್ಲಾ ಶಾಲೆಗಳಿಗೆ ಸೋಮವಾರದವರೆಗೆ ರಜೆ ಘೋಷಿಸಲಾಗಿದ್ದು, ಪರಿಸ್ಥಿತಿ ಅವಲೋಕಿಸಿ ರಜಾ ಅವಧಿಯನ್ನು ವಿಸ್ತರಿಸಬೇಕೇ? ಎಂಬುವುದರ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದು ಅಬ್ದುಲ್ಲಾ ಹೇಳಿದ್ದಾರೆ.</p>.India–Pak Tension |ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ: ಸರ್ಕಾರಿ ನೌಕರರ ರಜೆ ರದ್ದು.ಗಡಿ ರಾಜ್ಯಗಳಲ್ಲಿ ಬ್ಲಾಕ್ ಔಟ್: ಆತಂಕದಲ್ಲೇ ರಾತ್ರಿ ಕಳೆದ ಜನತೆ. <p>ಪರಿಸ್ಥಿತಿ ಹದಗೆಟ್ಟಿರುವ ಕಾರಣ ಸೋಮವಾರದವರೆಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಶಿಕ್ಷಣ ಸಚಿವೆ ಸಕಿನಾ ಇಟೂ ತಿಳಿಸಿದ್ದರು.</p><p>ಗುರುವಾರ ರಾತ್ರಿ ಅಖ್ನೂರ್, ಸಾಂಬಾ, ಬಾರಾಮುಲ್ಲಾ ಮತ್ತು ಕುಪ್ವಾರಾ ಸೇರಿದಂತೆ ಹಲವು ಸ್ಥಳಗಳಲ್ಲಿ ಸ್ಫೋಟಗಳು ಸಂಭವಿಸಿರುವುದಾಗಿ ವರದಿಯಾಗಿವೆ.</p><p>ಪಾಕಿಸ್ತಾನದ ಪ್ರಯತ್ನಗಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ. ಭಾರತದ ಸಾರ್ವಭೌಮತ್ವವನ್ನು ರಕ್ಷಿಸಲು ಮತ್ತು ಜನರ ಸುರಕ್ಷತೆಗಾಗಿ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.</p>.IPL 2025 | ಭದ್ರತಾ ಕಾರಣ; ಧರ್ಮಶಾಲಾದಲ್ಲಿ ಐಪಿಎಲ್ ಪಂದ್ಯ ರದ್ದು.ರೋಹಿತ್ ರೀತಿ ಆಡಿದವರು ವಿರಳ: ಬ್ಯಾಟಿಂಗ್ ದಿಗ್ಗಜನಿಗೆ ಕಪಿಲ್ ದೇವ್ ಮೆಚ್ಚುಗೆ.ಒಳ ಮೀಸಲಾತಿ | ಛಲವಾದಿ, ಹೊಲಯ ಎಂದೇ ಬರೆಯಿರಿ: ಛಲವಾದಿ ಮಹಾಸಭಾ ಮನವಿ.Gold Rate Today: ಚಿನ್ನದ ಬೆಲೆ ₹1,500 ಇಳಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಜಮ್ಮು ಸೇರಿದಂತೆ ವಿವಿಧ ನಗರಗಳಲ್ಲಿ ಗುರುವಾರ ರಾತ್ರಿ ನಡೆಸಿದ ಡ್ರೋನ್ ದಾಳಿಗೆ ಭಾರತ ತಕ್ಕ ಉತ್ತರ ನೀಡಿದೆ. ಈ ನಡುವೆ ಜಮ್ಮುವಿಗೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಶುಕ್ರವಾರ ಧಾವಿಸಿದ್ದಾರೆ.</p><p>ಈ ನಡುವೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಗುರುವಾರ ರಾತ್ರಿ ಪಾಕಿಸ್ತಾನ ಜಮ್ಮು , ಪಠಾಣ್ಕೋಟ್, ಉಧಂಪುರ ಸೇರಿದಂತೆ ಇತರೆ ಸ್ಥಳಗಳ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ಪ್ರಯತ್ನ ನಡೆಸಿತ್ತು. ಅಲ್ಲಿನ ಪರಿಸ್ಥಿತಿ ಅವಲೋಕಿಸಲು ಘಟನಾ ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು. </p><p>ಕಾಶ್ಮೀರದ ಎಲ್ಲಾ ಶಾಲೆಗಳಿಗೆ ಸೋಮವಾರದವರೆಗೆ ರಜೆ ಘೋಷಿಸಲಾಗಿದ್ದು, ಪರಿಸ್ಥಿತಿ ಅವಲೋಕಿಸಿ ರಜಾ ಅವಧಿಯನ್ನು ವಿಸ್ತರಿಸಬೇಕೇ? ಎಂಬುವುದರ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದು ಅಬ್ದುಲ್ಲಾ ಹೇಳಿದ್ದಾರೆ.</p>.India–Pak Tension |ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ: ಸರ್ಕಾರಿ ನೌಕರರ ರಜೆ ರದ್ದು.ಗಡಿ ರಾಜ್ಯಗಳಲ್ಲಿ ಬ್ಲಾಕ್ ಔಟ್: ಆತಂಕದಲ್ಲೇ ರಾತ್ರಿ ಕಳೆದ ಜನತೆ. <p>ಪರಿಸ್ಥಿತಿ ಹದಗೆಟ್ಟಿರುವ ಕಾರಣ ಸೋಮವಾರದವರೆಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಶಿಕ್ಷಣ ಸಚಿವೆ ಸಕಿನಾ ಇಟೂ ತಿಳಿಸಿದ್ದರು.</p><p>ಗುರುವಾರ ರಾತ್ರಿ ಅಖ್ನೂರ್, ಸಾಂಬಾ, ಬಾರಾಮುಲ್ಲಾ ಮತ್ತು ಕುಪ್ವಾರಾ ಸೇರಿದಂತೆ ಹಲವು ಸ್ಥಳಗಳಲ್ಲಿ ಸ್ಫೋಟಗಳು ಸಂಭವಿಸಿರುವುದಾಗಿ ವರದಿಯಾಗಿವೆ.</p><p>ಪಾಕಿಸ್ತಾನದ ಪ್ರಯತ್ನಗಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ. ಭಾರತದ ಸಾರ್ವಭೌಮತ್ವವನ್ನು ರಕ್ಷಿಸಲು ಮತ್ತು ಜನರ ಸುರಕ್ಷತೆಗಾಗಿ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.</p>.IPL 2025 | ಭದ್ರತಾ ಕಾರಣ; ಧರ್ಮಶಾಲಾದಲ್ಲಿ ಐಪಿಎಲ್ ಪಂದ್ಯ ರದ್ದು.ರೋಹಿತ್ ರೀತಿ ಆಡಿದವರು ವಿರಳ: ಬ್ಯಾಟಿಂಗ್ ದಿಗ್ಗಜನಿಗೆ ಕಪಿಲ್ ದೇವ್ ಮೆಚ್ಚುಗೆ.ಒಳ ಮೀಸಲಾತಿ | ಛಲವಾದಿ, ಹೊಲಯ ಎಂದೇ ಬರೆಯಿರಿ: ಛಲವಾದಿ ಮಹಾಸಭಾ ಮನವಿ.Gold Rate Today: ಚಿನ್ನದ ಬೆಲೆ ₹1,500 ಇಳಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>