<p><strong>ಚಂಡೀಗಢ:</strong> ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ)ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಕೈಜೋಡಿಸುವಂತೆ ಪಂಜಾಬ್ನ ರೈತ ನಾಯಕ ಸರವಣ ಸಿಂಗ್ ಪಂಢೇರ್ ಅವರು ಸಂಯುಕ್ತ ಕಿಸಾನ್ ಮೋರ್ಚಾಗೆ (ಎಸ್ಕೆಎಂ) ಭಾನುವಾರ ಪತ್ರ ಬರೆದಿದ್ದಾರೆ. </p>.<p>ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ರೈತರ ಜಂಟಿ ಹೋರಾಟಕ್ಕೆ ಎಸ್ಕೆಎಂ ನಾಯಕ ರಾಕೇಶ್ ಟಿಕಾಯತ್ ಕರೆ ನೀಡಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.</p>.‘ದೆಹಲಿ ಚಲೋ’ಗೆ ಪೊಲೀಸರಿಂದ ಮತ್ತೆ ಅಡ್ಡಿ.<p>ದೆಹಲಿ ಚಲೋಗೆ ಭದ್ರತಾ ಸಿಬ್ಬಂದಿ ತಡೆಯೊಡ್ಡಿರುವುದರಿಂದ ಕಳೆದ ಫೆ. 13ರಿಂದಲೂ ರೈತರು, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಬ್ಯಾನರ್ನಡಿ ಶಂಭು ಹಾಗೂ ಖನೌರಿ ಗಡಿಯಲ್ಲಿ ಬೀಡುಬಿಟ್ಟಿದ್ದಾರೆ.</p>.<p>ಡಿಸೆಂಬರ್ 6 ಮತ್ತು 8ರಂದು 101 ರೈತರ ಗುಂಪು ಕಾಲ್ನಡಿಗೆಯಲ್ಲಿ ದೆಹಲಿ ಪ್ರವೇಶಿಸಲು 2 ಬಾರಿ ಪ್ರಯತ್ನಿಸಿವೆ. ಆದರೆ ಹರಿಯಾಣದಲ್ಲಿ ಭದ್ರತಾ ಸಿಬ್ಬಂದಿ ಅವರನ್ನು ತಡೆದಿದ್ದಾರೆ. </p>.ದೆಹಲಿ ಚಲೋ: ನೊಯ್ಡಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದ 160ಕ್ಕೂ ಹೆಚ್ಚು ರೈತರ ಬಂಧನ.<p>ಇನ್ನು ಕೃಷಿ ಕಾನೂನುಗಳ ವಿರುದ್ಧ 2020ರಲ್ಲಿ ನಡೆದ ರೈತರ ಚಳವಳಿಯನ್ನು ಮುನ್ನಡೆಸಿದ್ದ ಎಸ್ಕೆಎಂ 'ದೆಹಲಿ ಚಲೋ' ಪಾದಯಾತ್ರೆಯಲ್ಲಿ ಭಾಗಿಯಾಗಿರಲಿಲ್ಲ.</p>.<p></p><p>ಶಂಭು ಗಡಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಪಂಢೇರ್, ದೆಹಲಿ ಚಲೋ ಮೆರವಣಿಗೆಯಲ್ಲಿ ಭಾಗವಹಿಸುವಂತೆ ನಾವು ನಮ್ಮ ಸಹೋದರರಿಗೆ (SKM) ಪತ್ರ ಬರೆದಿದ್ದೇವೆ. ಅವರಿಂದ ಸಕಾರಾತ್ಮಕ ಉತ್ತರವನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಹೇಳಿದ್ದಾರೆ.</p>.ದೆಹಲಿ ಚಲೋ ಮೆರವಣಿಗೆಗೆ ತಡೆ: ರೈತರನ್ನು ಚದುರಿಸಲು ಅಶ್ರುವಾಯು ಶೆಲ್ ಪ್ರಯೋಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ)ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಕೈಜೋಡಿಸುವಂತೆ ಪಂಜಾಬ್ನ ರೈತ ನಾಯಕ ಸರವಣ ಸಿಂಗ್ ಪಂಢೇರ್ ಅವರು ಸಂಯುಕ್ತ ಕಿಸಾನ್ ಮೋರ್ಚಾಗೆ (ಎಸ್ಕೆಎಂ) ಭಾನುವಾರ ಪತ್ರ ಬರೆದಿದ್ದಾರೆ. </p>.<p>ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ರೈತರ ಜಂಟಿ ಹೋರಾಟಕ್ಕೆ ಎಸ್ಕೆಎಂ ನಾಯಕ ರಾಕೇಶ್ ಟಿಕಾಯತ್ ಕರೆ ನೀಡಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.</p>.‘ದೆಹಲಿ ಚಲೋ’ಗೆ ಪೊಲೀಸರಿಂದ ಮತ್ತೆ ಅಡ್ಡಿ.<p>ದೆಹಲಿ ಚಲೋಗೆ ಭದ್ರತಾ ಸಿಬ್ಬಂದಿ ತಡೆಯೊಡ್ಡಿರುವುದರಿಂದ ಕಳೆದ ಫೆ. 13ರಿಂದಲೂ ರೈತರು, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಬ್ಯಾನರ್ನಡಿ ಶಂಭು ಹಾಗೂ ಖನೌರಿ ಗಡಿಯಲ್ಲಿ ಬೀಡುಬಿಟ್ಟಿದ್ದಾರೆ.</p>.<p>ಡಿಸೆಂಬರ್ 6 ಮತ್ತು 8ರಂದು 101 ರೈತರ ಗುಂಪು ಕಾಲ್ನಡಿಗೆಯಲ್ಲಿ ದೆಹಲಿ ಪ್ರವೇಶಿಸಲು 2 ಬಾರಿ ಪ್ರಯತ್ನಿಸಿವೆ. ಆದರೆ ಹರಿಯಾಣದಲ್ಲಿ ಭದ್ರತಾ ಸಿಬ್ಬಂದಿ ಅವರನ್ನು ತಡೆದಿದ್ದಾರೆ. </p>.ದೆಹಲಿ ಚಲೋ: ನೊಯ್ಡಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದ 160ಕ್ಕೂ ಹೆಚ್ಚು ರೈತರ ಬಂಧನ.<p>ಇನ್ನು ಕೃಷಿ ಕಾನೂನುಗಳ ವಿರುದ್ಧ 2020ರಲ್ಲಿ ನಡೆದ ರೈತರ ಚಳವಳಿಯನ್ನು ಮುನ್ನಡೆಸಿದ್ದ ಎಸ್ಕೆಎಂ 'ದೆಹಲಿ ಚಲೋ' ಪಾದಯಾತ್ರೆಯಲ್ಲಿ ಭಾಗಿಯಾಗಿರಲಿಲ್ಲ.</p>.<p></p><p>ಶಂಭು ಗಡಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಪಂಢೇರ್, ದೆಹಲಿ ಚಲೋ ಮೆರವಣಿಗೆಯಲ್ಲಿ ಭಾಗವಹಿಸುವಂತೆ ನಾವು ನಮ್ಮ ಸಹೋದರರಿಗೆ (SKM) ಪತ್ರ ಬರೆದಿದ್ದೇವೆ. ಅವರಿಂದ ಸಕಾರಾತ್ಮಕ ಉತ್ತರವನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಹೇಳಿದ್ದಾರೆ.</p>.ದೆಹಲಿ ಚಲೋ ಮೆರವಣಿಗೆಗೆ ತಡೆ: ರೈತರನ್ನು ಚದುರಿಸಲು ಅಶ್ರುವಾಯು ಶೆಲ್ ಪ್ರಯೋಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>