ನವದೆಹಲಿ: ಲೋಕಸಭೆಯ ಸಭಾಂಗಣದಲ್ಲಿ ಜಿಗಿದ ಪ್ರಕರಣದಲ್ಲಿ ಬಂಧಿತರಾಗಿರುವ ನೀಲಂ ಆಜಾದ್ ಸಲ್ಲಿಸಿರುವ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ನೀಲಂ ಪರ ವಕೀಲರು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ಕೋರ್ಟ್, ‘ಈ ವಿಚಾರದಲ್ಲಿ ಯಾವುದೇ ತುರ್ತು ಇಲ್ಲ, ಜನವರಿ 3ರಂದು ಪ್ರಕರಣದ ವಿಚಾರಣೆ ನಡೆಯಲಿದೆ’ ಎಂದು ತಿಳಿಸಿದೆ.
‘ನನ್ನ ಬಂಧನವು ಕಾನೂನು ಬಾಹಿರವಾಗಿದ್ದು, ನ್ಯಾಯಾಲಯದ ವಿಚಾರಣೆ ವೇಳೆ ನನ್ನ ಪರವಾಗಿ ವಾದ ಮಾಡಲು ವಕೀಲರನ್ನು ಸಂಪರ್ಕಿಸಲು ನನಗೆ ಅನುಮತಿ ನೀಡುತ್ತಿಲ್ಲ’ ಎಂದು ನೀಲಂ ಆರೋಪಿಸಿದ್ದಾರೆ.
ನೀಲಂ ಸೇರಿದಂತೆ ಆರು ಮಂದಿ ಆರೋಪಿಗಳು ಜನವರಿ 5ರವರೆಗೆ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.