<p><strong>ನವದೆಹಲಿ</strong>: ‘ಭಾರತದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡುವ ತಪ್ಪು ಮಾಹಿತಿಗಾಗಿ ಸಾಮಾಜಿಕ ಜಾಲತಾಣ ವೇದಿಕೆಗಳ ಮಾಲೀಕತ್ವದ ಸಂಸ್ಥೆ ‘ಮೆಟಾ’ ಕ್ಷಮೆ ಕೋರಬೇಕು’ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಒತ್ತಾಯಿಸಿದ್ದಾರೆ.</p>.<p>ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಕುರಿತ ಜಂಟಿ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷರೂ ಆಗಿರುವ ದುಬೆ, ‘ಲೋಕಸಭೆ ಚುನಾವಣೆ ಕುರಿತಂತೆ ಮೆಟಾ ಅಧ್ಯಕ್ಷರ ಹೇಳಿಕೆ ಹಿನ್ನೆಲೆಯಲ್ಲಿ ಸಮಿತಿಯು ಅವರಿಗೆ ಸಮನ್ಸ್ ಜಾರಿಗೊಳಿಸಲಿದೆ’ ಎಂದು ತಿಳಿಸಿದರು. </p>.<p>‘ಅಸಮರ್ಪಕ ಮಾಹಿತಿಗಾಗಿ ಸಮಿತಿ ಮೆಟಾಗೆ ಸಮನ್ಸ್ ನೀಡಲಿದೆ. ಪ್ರಜಾಪ್ರಭುತ್ವ ರಾಷ್ಟ್ರದ ವರ್ಚಸ್ಸಿಗೆ ಧಕ್ಕೆ ಆಗುವಂತಹ ತಪ್ಪು ಮಾಹಿತಿಗಳ ಹಂಚಿಕೆ ಸಲ್ಲದು. ಈ ತಪ್ಪಿಗಾಗಿ ಮೆಟಾ ಭಾರತದ ಸಂಸತ್ತು ಮತ್ತು ದೇಶದ ಜನರ ಕ್ಷಮೆ ಕೋರಬೇಕು’ ಎಂದು ಪ್ರತಿಪಾದಿಸಿದರು.</p>.<p>ಎಕ್ಸ್ನಲ್ಲಿ ಅವರು ಈ ಕುರಿತು ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಭವ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.</p>.<p>‘ಮೆಟಾ ಮುಖ್ಯಸ್ಥ ಜುಕರ್ಬರ್ಗ್ ಅವರಿಂದಲೇ ತಪ್ಪು ಮಾಹಿತಿ ರವಾನೆ ಆಗುವುದು ಸರಿಯಲ್ಲ. ಸತ್ಯ ಮತ್ತು ವಿಶ್ವಾಸಾರ್ಹತೆ ಎತ್ತಿಹಿಡಿಯೋಣ’ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಭಾರತದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡುವ ತಪ್ಪು ಮಾಹಿತಿಗಾಗಿ ಸಾಮಾಜಿಕ ಜಾಲತಾಣ ವೇದಿಕೆಗಳ ಮಾಲೀಕತ್ವದ ಸಂಸ್ಥೆ ‘ಮೆಟಾ’ ಕ್ಷಮೆ ಕೋರಬೇಕು’ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಒತ್ತಾಯಿಸಿದ್ದಾರೆ.</p>.<p>ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಕುರಿತ ಜಂಟಿ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷರೂ ಆಗಿರುವ ದುಬೆ, ‘ಲೋಕಸಭೆ ಚುನಾವಣೆ ಕುರಿತಂತೆ ಮೆಟಾ ಅಧ್ಯಕ್ಷರ ಹೇಳಿಕೆ ಹಿನ್ನೆಲೆಯಲ್ಲಿ ಸಮಿತಿಯು ಅವರಿಗೆ ಸಮನ್ಸ್ ಜಾರಿಗೊಳಿಸಲಿದೆ’ ಎಂದು ತಿಳಿಸಿದರು. </p>.<p>‘ಅಸಮರ್ಪಕ ಮಾಹಿತಿಗಾಗಿ ಸಮಿತಿ ಮೆಟಾಗೆ ಸಮನ್ಸ್ ನೀಡಲಿದೆ. ಪ್ರಜಾಪ್ರಭುತ್ವ ರಾಷ್ಟ್ರದ ವರ್ಚಸ್ಸಿಗೆ ಧಕ್ಕೆ ಆಗುವಂತಹ ತಪ್ಪು ಮಾಹಿತಿಗಳ ಹಂಚಿಕೆ ಸಲ್ಲದು. ಈ ತಪ್ಪಿಗಾಗಿ ಮೆಟಾ ಭಾರತದ ಸಂಸತ್ತು ಮತ್ತು ದೇಶದ ಜನರ ಕ್ಷಮೆ ಕೋರಬೇಕು’ ಎಂದು ಪ್ರತಿಪಾದಿಸಿದರು.</p>.<p>ಎಕ್ಸ್ನಲ್ಲಿ ಅವರು ಈ ಕುರಿತು ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಭವ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.</p>.<p>‘ಮೆಟಾ ಮುಖ್ಯಸ್ಥ ಜುಕರ್ಬರ್ಗ್ ಅವರಿಂದಲೇ ತಪ್ಪು ಮಾಹಿತಿ ರವಾನೆ ಆಗುವುದು ಸರಿಯಲ್ಲ. ಸತ್ಯ ಮತ್ತು ವಿಶ್ವಾಸಾರ್ಹತೆ ಎತ್ತಿಹಿಡಿಯೋಣ’ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>