ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ‌ ಶಾಂತಿ ಮರುಸ್ಥಾಪನೆಯಾಗುತ್ತದೆ: ಮಣಿಪುರ ಸಿಎಂ ಬಿರೇನ್ ಸಿಂಗ್

Published 24 ಅಕ್ಟೋಬರ್ 2023, 10:59 IST
Last Updated 24 ಅಕ್ಟೋಬರ್ 2023, 10:59 IST
ಅಕ್ಷರ ಗಾತ್ರ

ಇಂಫಾಲ: ಮಣಿಪುರ ರಾಜ್ಯ ಸಹಜ ಸ್ಥಿತಿಗೆ ಮರಳುತ್ತಿದೆ. ರಾಜ್ಯದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಹೇಳಿದ್ದಾರೆ.

ಇಂಫಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, "ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಯಾಗುತ್ತದೆ, ಜನರು ಸಂತೋಷವಾಗಿರುತ್ತಾರೆ" ಎಂದು ಹೇಳಿದರು. ಬಳಿಕ ಅವರು ಇಂಫಾಲ್‌ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಕಳೆದ ಮೇ ತಿಂಗಳಲ್ಲಿ ಪರಿಶಿಷ್ಟ ಪಂಗಡದ ಸ್ಥಾನಮಾನ ವಿಷಯವಾಗಿ ಮೈತೇಯಿ ಹಾಗೂ ಕುಕಿ ಸಮುದಾಯಗಳ ನಡುವೆ ಸಂಘರ್ಷ ಭುಗಿಲೆದ್ದಿತ್ತು. ಮೇ 3ರಂದು ಬಹುಸಂಖ್ಯಾತ ಮೈತೇಯಿ ಸಮುದಾಯದ ಬೇಡಿಕೆ ವಿರೋಧಿಸಿ ಕುಕಿ ಸಮುದಾಯ ಬುಡಕಟ್ಟು ಐಕ್ಯತಾ ಮೆರವಣಿಗೆ ನಡೆಸಿತ್ತು. ಈ ವೇಳೆ, ಎರಡೂ ಸಮುದಾಯಗಳ ನಡುವೆ ಹಿಂಸಾಚಾರ ಉಂಟಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT