<p><strong>ನವದೆಹಲಿ:</strong> ಗ್ರಾಮೀಣ ಪ್ರದೇಶಗಳ ಜನರು ಬಡತನ ಮತ್ತು ನಿರುದ್ಯೋಗದಿಂದ ಬೇಸತ್ತು ದೆಹಲಿ, ಮುಂಬೈ ಮತ್ತು ಬೆಂಗಳೂರಿನಂತಹ ಮೆಟ್ರೊ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.</p><p>ನಗರದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶದ ಜನರು ತಮ್ಮ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಗದ ಕಾರಣ ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ’ ಎಂದು ತಿಳಿಸಿದ್ದಾರೆ. </p><p>‘ಬಡತನ, ನಿರುದ್ಯೋಗದಿಂದಾಗಿ ಗ್ರಾಮೀಣ ಭಾಗದ ಜನರು ಇಂದು ದೆಹಲಿ, ಮುಂಬೈ, ಕೋಲ್ಕತ್ತ, ಚೆನ್ನೈ ಮತ್ತು ಬೆಂಗಳೂರಿನಂತಹ ಮೆಟ್ರೊ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಇದರಿಂದಾಗಿ ಮಹಾನಗರಗಳಲ್ಲಿ ಬಹಳಷ್ಟು ಸಮಸ್ಯೆಗಳನ್ನು ನೋಡುತ್ತಿದ್ದೇವೆ’ ಎಂದಿದ್ದಾರೆ. </p><p>ದೇಶದಲ್ಲಿ ಫ್ಲೆಕ್ಸ್ ಎಂಜಿನ್ ವಾಹನಗಳು ಬರುತ್ತಿವೆ. ಹಾಗೆಯೇ ಎಥೆನಾಲ್ ಪಂಪ್ಗಳನ್ನು ತೆರೆಯಲಾಗುತ್ತಿದೆ. ಈ ಕ್ರಮಗಳಿಂದ ರೈತರ ಆದಾಯ ದ್ವಿಗುಣಗೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. </p><p>ಕೃಷಿ ಎಲ್ಲರೂ ಬೆಂಬಲಿಸುವ ಕ್ಷೇತ್ರವಾಗಿದೆ. ಈ ಹಿಂದೆ ನಾವು ರೈತರನ್ನು ‘ಅನ್ನದಾತ’ ಎಂದು ಕರೆಯುತ್ತಿದ್ದೆವು. ಆದರೆ, ನಮ್ಮ ಸರ್ಕಾರವು ರೈತರನ್ನೂ ‘ಉರ್ಜಾ ದಾತ’ ಮಾಡಿದೆ ಎಂದು ಅವರು ಹೇಳಿದ್ದಾರೆ. </p><p>‘ಹೈಡ್ರೋಜನ್ ಭವಿಷ್ಯದ ಇಂಧನವಾಗಿದೆ. ಹೈಡ್ರೋಜನ್ ಇಂಧನ ರಫ್ತುದಾರರಾಗುವುದು ನಮ್ಮ ಸರ್ಕಾರದ ಕನಸ್ಸಾಗಿದೆ’ ಎಂದಿದ್ದಾರೆ. </p>.<h2><strong>ಏಕರೂಪದ ಟೋಲ್ ಜಾರಿಗೆ ಚಿಂತನೆ: ನಿತಿನ್ ಗಡ್ಕರಿ</strong> </h2><p>ರಾಷ್ಟ್ರೀಯ ಹೆದ್ದಾರಿ ಬಳಕೆದಾರರ ಅನುಕೂಲಕ್ಕಾಗಿ ಏಕರೂಪದ ಟೋಲ್ ನೀತಿ ಜಾರಿಗೆ ತರಲು ರಸ್ತೆ ಸಾರಿಗೆ ಸಚಿವಾಲಯ ಕಾರ್ಯನಿರತವಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.</p><p>‘ಪಿಟಿಐ’ ಸುದ್ದಿಸಂಸ್ಥೆ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ‘ಪ್ರಯಾಣಿಕರು ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆಯ ಸ್ಥಿತಿಗತಿ ಬಗ್ಗೆ ವ್ಯಕ್ತಪಡಿಸುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಆಯಾ ರಸ್ತೆಗಳ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಗ್ರಾಮೀಣ ಪ್ರದೇಶಗಳ ಜನರು ಬಡತನ ಮತ್ತು ನಿರುದ್ಯೋಗದಿಂದ ಬೇಸತ್ತು ದೆಹಲಿ, ಮುಂಬೈ ಮತ್ತು ಬೆಂಗಳೂರಿನಂತಹ ಮೆಟ್ರೊ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.</p><p>ನಗರದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶದ ಜನರು ತಮ್ಮ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಗದ ಕಾರಣ ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ’ ಎಂದು ತಿಳಿಸಿದ್ದಾರೆ. </p><p>‘ಬಡತನ, ನಿರುದ್ಯೋಗದಿಂದಾಗಿ ಗ್ರಾಮೀಣ ಭಾಗದ ಜನರು ಇಂದು ದೆಹಲಿ, ಮುಂಬೈ, ಕೋಲ್ಕತ್ತ, ಚೆನ್ನೈ ಮತ್ತು ಬೆಂಗಳೂರಿನಂತಹ ಮೆಟ್ರೊ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಇದರಿಂದಾಗಿ ಮಹಾನಗರಗಳಲ್ಲಿ ಬಹಳಷ್ಟು ಸಮಸ್ಯೆಗಳನ್ನು ನೋಡುತ್ತಿದ್ದೇವೆ’ ಎಂದಿದ್ದಾರೆ. </p><p>ದೇಶದಲ್ಲಿ ಫ್ಲೆಕ್ಸ್ ಎಂಜಿನ್ ವಾಹನಗಳು ಬರುತ್ತಿವೆ. ಹಾಗೆಯೇ ಎಥೆನಾಲ್ ಪಂಪ್ಗಳನ್ನು ತೆರೆಯಲಾಗುತ್ತಿದೆ. ಈ ಕ್ರಮಗಳಿಂದ ರೈತರ ಆದಾಯ ದ್ವಿಗುಣಗೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. </p><p>ಕೃಷಿ ಎಲ್ಲರೂ ಬೆಂಬಲಿಸುವ ಕ್ಷೇತ್ರವಾಗಿದೆ. ಈ ಹಿಂದೆ ನಾವು ರೈತರನ್ನು ‘ಅನ್ನದಾತ’ ಎಂದು ಕರೆಯುತ್ತಿದ್ದೆವು. ಆದರೆ, ನಮ್ಮ ಸರ್ಕಾರವು ರೈತರನ್ನೂ ‘ಉರ್ಜಾ ದಾತ’ ಮಾಡಿದೆ ಎಂದು ಅವರು ಹೇಳಿದ್ದಾರೆ. </p><p>‘ಹೈಡ್ರೋಜನ್ ಭವಿಷ್ಯದ ಇಂಧನವಾಗಿದೆ. ಹೈಡ್ರೋಜನ್ ಇಂಧನ ರಫ್ತುದಾರರಾಗುವುದು ನಮ್ಮ ಸರ್ಕಾರದ ಕನಸ್ಸಾಗಿದೆ’ ಎಂದಿದ್ದಾರೆ. </p>.<h2><strong>ಏಕರೂಪದ ಟೋಲ್ ಜಾರಿಗೆ ಚಿಂತನೆ: ನಿತಿನ್ ಗಡ್ಕರಿ</strong> </h2><p>ರಾಷ್ಟ್ರೀಯ ಹೆದ್ದಾರಿ ಬಳಕೆದಾರರ ಅನುಕೂಲಕ್ಕಾಗಿ ಏಕರೂಪದ ಟೋಲ್ ನೀತಿ ಜಾರಿಗೆ ತರಲು ರಸ್ತೆ ಸಾರಿಗೆ ಸಚಿವಾಲಯ ಕಾರ್ಯನಿರತವಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.</p><p>‘ಪಿಟಿಐ’ ಸುದ್ದಿಸಂಸ್ಥೆ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ‘ಪ್ರಯಾಣಿಕರು ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆಯ ಸ್ಥಿತಿಗತಿ ಬಗ್ಗೆ ವ್ಯಕ್ತಪಡಿಸುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಆಯಾ ರಸ್ತೆಗಳ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>