ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಥುರಾ: ಕೃಷ್ಣ ಜನ್ಮಭೂಮಿ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

Published 23 ನವೆಂಬರ್ 2023, 15:31 IST
Last Updated 23 ನವೆಂಬರ್ 2023, 15:31 IST
ಅಕ್ಷರ ಗಾತ್ರ

ಮಥುರಾ: ಪ್ರಧಾನಿ ನರೇಂದ್ರ ಮೋದಿ ಅವರು ಮಥುರಾದಲ್ಲಿನ ಶ್ರೀ ಕೃಷ್ಣ ಜನ್ಮಭೂಮಿ ದೇವಾಲಯಕ್ಕೆ ತೆರಳಿ ಗುರುವಾರ ಪ್ರಾರ್ಥನೆ ಸಲ್ಲಿಸಿದರು.

ಕೃಷ್ಣನ ಭಕ್ತೆಯಾದ ಮೀರಾಬಾಯಿ ಅವರ 525ನೇ ಜನ್ಮದಿನೋತ್ಸವದ ಹಿನ್ನೆಲೆ ಆಯೋಜಿಸಿರುವ ‘ಮೀರಾಬಾಯಿ ಜನ್ಮೋತ್ಸವ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೋದಿ ಮಥುರಾಕ್ಕೆ ಆಗಮಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮೀರಾಬಾಯಿ ಅವರ ನಾಣ್ಯ ಮತ್ತು ಅಂಚೆಚೀಟಿ ಬಿಡುಗಡೆ ಮಾಡಲಿದ್ದಾರೆ. ನಟಿ, ರಾಜಕಾರಣಿ ಹೇಮಾ ಮಾಲಿನಿ ಕೂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. 

ಮೀರಾ ಬಾಯಿ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದ ಮೋದಿ, ‘ಶುದ್ಧ ಭಕ್ತಿ ನಂಬಿಕೆಗೆ ಮೀರಾಬಾಯಿ ಉತ್ತಮ ಉದಾಹರಣೆಯಾಗಿದ್ದಾರೆ. ಭಗವಾನ್ ಶ್ರೀ ಕೃಷ್ಣನಿಗೆ ಸಮರ್ಪಿತವಾದ ಅವಳ ಸ್ತೋತ್ರಗಳು ಮತ್ತು ದ್ವಿಪದಿಗಳು ಇಂದಿಗೂ ನಮ್ಮೆಲ್ಲರ ಹೃದಯಗಳನ್ನು ಗೌರವದಿಂದ ತುಂಬುತ್ತವೆ’ ಎಂದು ಬರೆದುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT