ಸಾಂಪ್ರದಾಯಿಕ ಕರಕುಶಲ ವಸ್ತುಗಳ ನಿರ್ಮಾಣವನ್ನು ಕಸುಬಾಗಿಸಿಕೊಂಡಿರುವವರಿಗೆ ಆರ್ಥಿಕ ಸಹಾಯ ನೀಡಲಾಗುವುದು. ಸ್ಥಳೀಯ ಉತ್ಪನ್ನಗಳು, ಕಲೆ ಮತ್ತು ಕರಕುಶಲ ವಸ್ತುಗಳ ತಯಾರಿಕೆಗೆ ಬೆಂಬಲ ನೀಡುವುದು ಮೋದಿಯವರ ಆದ್ಯತೆಯಾಗಿದೆ’ ಎಂದು ಪ್ರಕಟಣೆ ಹೇಳಿದೆ.
ಪಿ.ಎಂ ವಿಶ್ವಕರ್ಮ ಯೋಜನೆ ಪ್ರಾರಂಭಿಸುವುದಾಗಿ ಮೋದಿ ಅವರು ಕಳೆದ ಸ್ವಾತಂತ್ರ್ಯ ದಿನದಂದು ಘೋಷಿಸಿದ್ದರು. ಇದಕ್ಕಾಗಿ ₹ 13 ಸಾವಿರ ಕೋಟಿಯಷ್ಟು ನಿಧಿಯನ್ನು ಮೀಸಲಿಡಲಾಗಿದೆ.
₹ 15 ಸಾವಿರ ಮೌಲ್ಯದ ಟೂಲ್ಕಿಟ್, ಶೇಕಡಾ 5ರ ಬಡ್ಡಿ ದರದಲ್ಲಿ ₹ 2 ಲಕ್ಷದವರೆಗೆ ಆಧಾರ ರಹಿತ ಸಾಲ ನೀಡಲಾಗುವುದು ಎಂದೂ ಪ್ರಕಟಣೆ ತಿಳಿಸಿದೆ.