ಮಹಾರಾಷ್ಟ್ರದಲ್ಲಿ ಸೋಮವಾರ ತಮ್ಮ ಮೊದಲ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ, ‘ದೇಶದ ಎಲ್ಲ ಸಮಸ್ಯೆಗಳಿಗೂ ಕಾಂಗ್ರೆಸ್ ಕಾರಣ. ಧರ್ಮದ ಆಧಾರದ ಮೇಲೆ ದೇಶ ವಿಭಜನೆಯಾಗಲು ಯಾರು ಕಾರಣ? ಕಾಶ್ಮೀರ, ನಕ್ಸಲಿಸಂ..? ರಾಮ ಮಂದಿರ ನಿರ್ಮಾಣವನ್ನು ವಿರೋಧಿಸಿದ್ದು ಮತ್ತು ರಾಮನ ಅಸ್ತಿತ್ವವನ್ನು ಪ್ರಶ್ನಿಸಿದ್ದು ಯಾರು? ರಾಮ ಮಂದಿರದ ಉದ್ಘಾಟನೆಯ ಆಹ್ವಾನವನ್ನು ತಿರಸ್ಕರಿಸಿದರು ಯಾರು?’ ಎಂದು ಅವರು ಚಂದ್ರಪುರದಲ್ಲಿ ನೆರೆದಿದ್ದ ಜನರನ್ನು ಪ್ರಶ್ನಿಸಿದರು.