<p><strong>ದಾಹೋದ್, ಗುಜರಾತ್:</strong> ‘ಭಾರತವನ್ನು ದ್ವೇಷಿಸುವುದೇ ಪಾಕಿಸ್ತಾನದ ಉದ್ದೇಶವಾಗಿದ್ದು, ಹಾನಿ ಮಾಡುವ ಮಾರ್ಗಗಳ ಕುರಿತೇ ಯೋಚಿಸುತ್ತದೆ. ಆದರೆ, ನಾವು ದೇಶದ ಬಡತನವನ್ನು ಹೋಗಲಾಡಿಸಿ, ಆರ್ಥಿಕ ಅಭಿವೃದ್ಧಿ ತರುವ ಗುರಿ ಹೊಂದಿದ್ದೇವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ತಿಳಿಸಿದರು.</p><p>ದಾಹೋದ್ನಲ್ಲಿ ಬೃಹತ್ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಪ್ರಶಂಸಿಸಿದರು. </p><p>‘ನಮ್ಮ ಸಹೋದರಿಯರ ಸಿಂಧೂರವನ್ನು ಅಳಿಸಿಹಾಕುವ ದುಸ್ಸಾಹಸ ಮಾಡಿದವರಿಗೆ ಅಂತ್ಯವು ಸನ್ನಿಹಿತವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು’ ಎಂದರು.</p><p>‘ಇಬ್ಭಾಗಗೊಂಡ ಬಳಿಕ ಹುಟ್ಟಿಕೊಂಡ ದೇಶವೊಂದು ಭಾರತವನ್ನು ದ್ವೇಷಿಸುವುದನ್ನೇ ವೃತ್ತಿಯಾಗಿಸಿಕೊಂಡಿದೆ. ಭಾರತಕ್ಕೆ ಹಾನಿ ಮಾಡುವುದನ್ನೇ ಬಯಸುತ್ತದೆ. ಆದರೆ, ಭಾರತವು ಆರ್ಥಿಕ ಅಭಿವೃದ್ಧಿ ಮೂಲಕ ಬಡತನವನ್ನು ಹೋಗಲಾಡಿಸುವ ಗುರಿ ಹೊಂದಿದೆ. ಆ ಮೂಲಕ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಬದಲಾಯಿಸುತ್ತಿದೆ. ಹಿಂದುಳಿದ ಪ್ರದೇಶಗಳಿಗೆ ಅಭಿವೃದ್ಧಿ ಕೊಂಡೊಯ್ಯುವುದೇ ಸರ್ಕಾರದ ನೀತಿಯಾಗಿದೆ’ ಎಂದು ಮೋದಿ ತಿಳಿಸಿದರು. </p><h2>ದೇಶಿ ವಸ್ತುಗಳನ್ನು ಬಳಸಿ: </h2><p>ಹೋಳಿ, ದೀಪಾವಳಿ, ಗಣೇಶ ಪೂಜೆ ವೇಳೆ ಭಾರತದಲ್ಲೇ ಉತ್ಪಾದಿಸಿದ ವಸ್ತುಗಳನ್ನು ಖರೀದಿಸಿ, ಬಳಸುವಂತೆ ಕರೆ ನೀಡಿದ ಅವರು, ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.</p><p>ಕಾರ್ಯಕ್ರಮದಲ್ಲಿ ಲೋಕೋ ಉತ್ಪಾದನಾ ಕಾರ್ಖಾನೆ ಸೇರಿದಂತೆ ₹24 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಅಹಮದಾಬಾದ್–ವೆರಾವಲ್ ನಡುವೆ ವಂದೇ ಭಾರತ್ ರೈಲು ಸೇವೆ, ವಲಸಾಡ್–ದಾಹೋದ್ ಎಕ್ಸ್ಪ್ರೆಸ್ ರೈಲು ಸೇವೆಗೂ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಹೋದ್, ಗುಜರಾತ್:</strong> ‘ಭಾರತವನ್ನು ದ್ವೇಷಿಸುವುದೇ ಪಾಕಿಸ್ತಾನದ ಉದ್ದೇಶವಾಗಿದ್ದು, ಹಾನಿ ಮಾಡುವ ಮಾರ್ಗಗಳ ಕುರಿತೇ ಯೋಚಿಸುತ್ತದೆ. ಆದರೆ, ನಾವು ದೇಶದ ಬಡತನವನ್ನು ಹೋಗಲಾಡಿಸಿ, ಆರ್ಥಿಕ ಅಭಿವೃದ್ಧಿ ತರುವ ಗುರಿ ಹೊಂದಿದ್ದೇವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ತಿಳಿಸಿದರು.</p><p>ದಾಹೋದ್ನಲ್ಲಿ ಬೃಹತ್ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಪ್ರಶಂಸಿಸಿದರು. </p><p>‘ನಮ್ಮ ಸಹೋದರಿಯರ ಸಿಂಧೂರವನ್ನು ಅಳಿಸಿಹಾಕುವ ದುಸ್ಸಾಹಸ ಮಾಡಿದವರಿಗೆ ಅಂತ್ಯವು ಸನ್ನಿಹಿತವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು’ ಎಂದರು.</p><p>‘ಇಬ್ಭಾಗಗೊಂಡ ಬಳಿಕ ಹುಟ್ಟಿಕೊಂಡ ದೇಶವೊಂದು ಭಾರತವನ್ನು ದ್ವೇಷಿಸುವುದನ್ನೇ ವೃತ್ತಿಯಾಗಿಸಿಕೊಂಡಿದೆ. ಭಾರತಕ್ಕೆ ಹಾನಿ ಮಾಡುವುದನ್ನೇ ಬಯಸುತ್ತದೆ. ಆದರೆ, ಭಾರತವು ಆರ್ಥಿಕ ಅಭಿವೃದ್ಧಿ ಮೂಲಕ ಬಡತನವನ್ನು ಹೋಗಲಾಡಿಸುವ ಗುರಿ ಹೊಂದಿದೆ. ಆ ಮೂಲಕ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಬದಲಾಯಿಸುತ್ತಿದೆ. ಹಿಂದುಳಿದ ಪ್ರದೇಶಗಳಿಗೆ ಅಭಿವೃದ್ಧಿ ಕೊಂಡೊಯ್ಯುವುದೇ ಸರ್ಕಾರದ ನೀತಿಯಾಗಿದೆ’ ಎಂದು ಮೋದಿ ತಿಳಿಸಿದರು. </p><h2>ದೇಶಿ ವಸ್ತುಗಳನ್ನು ಬಳಸಿ: </h2><p>ಹೋಳಿ, ದೀಪಾವಳಿ, ಗಣೇಶ ಪೂಜೆ ವೇಳೆ ಭಾರತದಲ್ಲೇ ಉತ್ಪಾದಿಸಿದ ವಸ್ತುಗಳನ್ನು ಖರೀದಿಸಿ, ಬಳಸುವಂತೆ ಕರೆ ನೀಡಿದ ಅವರು, ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.</p><p>ಕಾರ್ಯಕ್ರಮದಲ್ಲಿ ಲೋಕೋ ಉತ್ಪಾದನಾ ಕಾರ್ಖಾನೆ ಸೇರಿದಂತೆ ₹24 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಅಹಮದಾಬಾದ್–ವೆರಾವಲ್ ನಡುವೆ ವಂದೇ ಭಾರತ್ ರೈಲು ಸೇವೆ, ವಲಸಾಡ್–ದಾಹೋದ್ ಎಕ್ಸ್ಪ್ರೆಸ್ ರೈಲು ಸೇವೆಗೂ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>