<p><strong>ನವದೆಹಲಿ:</strong> ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗುವ ರೋಗಿಗಳು ಮತ್ತು ಅವರ ಆರೈಕೆಗಾಗಿ ಜೊತೆಯಲ್ಲಿ ಇರುವವರು ಸುಲಿಗೆಗೆ ಗುರಿಯಾಗುವುದನ್ನು ತಡೆಯಲು ಸೂಕ್ತವಾದ ನೀತಿ ರೂಪಿಸುವ ಹೊಣೆಯು ರಾಜ್ಯ ಸರ್ಕಾರಗಳದ್ದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.</p>.<p>ಖಾಸಗಿ ಆಸ್ಪತ್ರೆಗಳಲ್ಲಿ ಇರುವ ಔಷಧ ಮಳಿಗೆಗಳಲ್ಲಿ ಹೆಚ್ಚಿನ ಬೆಲೆಗೆ ಔಷಧ ಮತ್ತು ವೈದ್ಯಕೀಯ ಉಪಕರಣ ಖರೀದಿಸಬೇಕಾದ ಸ್ಥಿತಿಯನ್ನು ರೋಗಿಗಳು, ಅವರನ್ನು ಆರೈಕೆ ಮಾಡುವವರು ಎದುರಿಸುತ್ತಿದ್ದಾರೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರಲ್ಲಿ ದೂರಲಾಗಿತ್ತು.</p>.<p>ಕಡ್ಡಾಯವಾಗಿ ಪಾಲಿಸಬೇಕಾದ ನಿರ್ದೇಶನಗಳನ್ನು ತಾನು ನೀಡಿದರೆ ಖಾಸಗಿ ಆಸ್ಪತ್ರೆಗಳ ಕಾರ್ಯನಿರ್ವಹಣೆಗೆ ಅಡ್ಡಿ ಉಂಟಾಗಬಹುದು ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರು ಇರುವ ವಿಭಾಗೀಯ ಪೀಠವು ಹೇಳಿದೆ.</p>.<p class="title">ಕಾನೂನು ವಿದ್ಯಾರ್ಥಿ ಸಿದ್ಧಾರ್ಥ ದಾಲ್ಮಿಯಾ ಮತ್ತು ಅವರ ತಂದೆ, ವಕೀಲ ವಿಜಯಪಾಲ್ ದಾಲ್ಮಿಯಾ ಅವರು ಈ ಅರ್ಜಿ ಸಲ್ಲಿಸಿದ್ದರು. ‘ಈ ಅರ್ಜಿಯಲ್ಲಿನ ವಿಷಯವನ್ನು ಪರಿಗಣಿಸಿ, ಸೂಕ್ತವೆನ್ನಿಸುವ ನೀತಿ ನಿರ್ಧಾರ ಕೈಗೊಳ್ಳಬೇಕು ಎಂದು ನಾವು ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚಿಸುತ್ತಿದ್ದೇವೆ’ ಎಂದು ಪೀಠ ಹೇಳಿದೆ. ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ.</p>.<p class="title">ನೀತಿ ನಿರೂಪಕರು ಈ ವಿಚಾರದಲ್ಲಿ ಸೂಕ್ತ ಮಾರ್ಗಸೂಚಿ ರೂಪಿಸಬೇಕು. ರೋಗಿಗಳು ಹಾಗೂ ಅವರ ಆರೈಕೆಗೆ ಇರುವವರು ಸುಲಿಗೆಗೆ ತುತ್ತಾಗದಂತೆ ನೋಡಿಕೊಳ್ಳಬೇಕು. ಇದೇ ಸಂದರ್ಭದಲ್ಲಿ ಖಾಸಗಿ ಸಂಸ್ಥೆಗಳು ಆರೋಗ್ಯಸೇವಾ ಕ್ಷೇತ್ರವನ್ನು ಪ್ರವೇಶಿಸುವುದರ ಮೇಲೆ ಅತಾರ್ಕಿಕವಾದ ನಿರ್ಬಂಧಗಳು ಕೂಡ ಇರಬಾರದು ಎಂದು ಪೀಠವು ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗುವ ರೋಗಿಗಳು ಮತ್ತು ಅವರ ಆರೈಕೆಗಾಗಿ ಜೊತೆಯಲ್ಲಿ ಇರುವವರು ಸುಲಿಗೆಗೆ ಗುರಿಯಾಗುವುದನ್ನು ತಡೆಯಲು ಸೂಕ್ತವಾದ ನೀತಿ ರೂಪಿಸುವ ಹೊಣೆಯು ರಾಜ್ಯ ಸರ್ಕಾರಗಳದ್ದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.</p>.<p>ಖಾಸಗಿ ಆಸ್ಪತ್ರೆಗಳಲ್ಲಿ ಇರುವ ಔಷಧ ಮಳಿಗೆಗಳಲ್ಲಿ ಹೆಚ್ಚಿನ ಬೆಲೆಗೆ ಔಷಧ ಮತ್ತು ವೈದ್ಯಕೀಯ ಉಪಕರಣ ಖರೀದಿಸಬೇಕಾದ ಸ್ಥಿತಿಯನ್ನು ರೋಗಿಗಳು, ಅವರನ್ನು ಆರೈಕೆ ಮಾಡುವವರು ಎದುರಿಸುತ್ತಿದ್ದಾರೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರಲ್ಲಿ ದೂರಲಾಗಿತ್ತು.</p>.<p>ಕಡ್ಡಾಯವಾಗಿ ಪಾಲಿಸಬೇಕಾದ ನಿರ್ದೇಶನಗಳನ್ನು ತಾನು ನೀಡಿದರೆ ಖಾಸಗಿ ಆಸ್ಪತ್ರೆಗಳ ಕಾರ್ಯನಿರ್ವಹಣೆಗೆ ಅಡ್ಡಿ ಉಂಟಾಗಬಹುದು ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರು ಇರುವ ವಿಭಾಗೀಯ ಪೀಠವು ಹೇಳಿದೆ.</p>.<p class="title">ಕಾನೂನು ವಿದ್ಯಾರ್ಥಿ ಸಿದ್ಧಾರ್ಥ ದಾಲ್ಮಿಯಾ ಮತ್ತು ಅವರ ತಂದೆ, ವಕೀಲ ವಿಜಯಪಾಲ್ ದಾಲ್ಮಿಯಾ ಅವರು ಈ ಅರ್ಜಿ ಸಲ್ಲಿಸಿದ್ದರು. ‘ಈ ಅರ್ಜಿಯಲ್ಲಿನ ವಿಷಯವನ್ನು ಪರಿಗಣಿಸಿ, ಸೂಕ್ತವೆನ್ನಿಸುವ ನೀತಿ ನಿರ್ಧಾರ ಕೈಗೊಳ್ಳಬೇಕು ಎಂದು ನಾವು ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚಿಸುತ್ತಿದ್ದೇವೆ’ ಎಂದು ಪೀಠ ಹೇಳಿದೆ. ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ.</p>.<p class="title">ನೀತಿ ನಿರೂಪಕರು ಈ ವಿಚಾರದಲ್ಲಿ ಸೂಕ್ತ ಮಾರ್ಗಸೂಚಿ ರೂಪಿಸಬೇಕು. ರೋಗಿಗಳು ಹಾಗೂ ಅವರ ಆರೈಕೆಗೆ ಇರುವವರು ಸುಲಿಗೆಗೆ ತುತ್ತಾಗದಂತೆ ನೋಡಿಕೊಳ್ಳಬೇಕು. ಇದೇ ಸಂದರ್ಭದಲ್ಲಿ ಖಾಸಗಿ ಸಂಸ್ಥೆಗಳು ಆರೋಗ್ಯಸೇವಾ ಕ್ಷೇತ್ರವನ್ನು ಪ್ರವೇಶಿಸುವುದರ ಮೇಲೆ ಅತಾರ್ಕಿಕವಾದ ನಿರ್ಬಂಧಗಳು ಕೂಡ ಇರಬಾರದು ಎಂದು ಪೀಠವು ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>