<p><strong>ನವದೆಹಲಿ:</strong> ಪುಣೆಯಲ್ಲಿ ನಡೆದಿದ್ದ ಪೋಶೆ ಕಾರು ಅಪಘಾತ ಪ್ರಕರಣದ ಮೂವರು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ನೀಡಿದೆ. </p><p>ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು, ಆರೋಪಿಗಳಾದ ಅಮರ್ ಸತೀಶ್ ಗಾಯಕ್ವಾಡ್, ಆದಿತ್ಯ ಅವಿನಾಶ ಸೂದ್ ಮತ್ತು ಆಶಿಶ್ ಸತೀಶ್ ಮಿತ್ತಲ್ ಅವರಿಗೆ ಜಾಮೀನು ಮಂಜೂರು ಮಾಡಿದೆ.</p><p>‘ಬಾಲಕ ಮದ್ಯ ಸೇವಿಸಿರುವುದು ಬೇರೆ ವಿಚಾರ. ಆದರೆ, ಸಂಭ್ರಮದ ಸಂದರ್ಭದಲ್ಲಿ ಮಕ್ಕಳಿಗೆ ಕಾರ್ ಕೀ ಮತ್ತು ಹಣ ನೀಡುವುದು ಸ್ವೀಕಾರಾರ್ಹ ವಿಚಾರವಲ್ಲ. ಮಕ್ಕಳು ಎಸಗುವ ಇಂಥ ಕೃತ್ಯಗಳಿಗೆ ಪೋಷಕರೇ ಹೊಣೆ’ ಎಂದು ನ್ಯಾಯಪೀಠ ಹೇಳಿದೆ. </p><p>ಜಾಮೀನು ಕೋರಿ ಆರೋಪಿ ಅಮರ್ ಸತೀಶ್ ಗಾಯಕ್ವಾಡ್ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಜನವರಿ 23ರಂದು ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿತ್ತು.</p><p>2024 ಮೇ 19ರಂದು ಪುಣೆಯ ಕಲ್ಯಾಣಿ ನಗರದಲ್ಲಿ ಪಾನಮತ್ತ ಬಾಲಕ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಇಬ್ಬರು ಟೆಕ್ಕಿಗಳು ಮೃತಪಟ್ಟಿದ್ದರು. </p>.ಪೋಶೆ ಕಾರು ಅಪಘಾತ ಪ್ರಕರಣ: ಮತ್ತೆ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!.ಪೋಶೆ ಕಾರು ಅಪಘಾತ: ಪೊಲೀಸರ ಮನವಿ ತಿರಸ್ಕರಿಸಿದ ಜೆಜೆಬಿ.ಪೋಶೆ ಕಾರು ಅಪಘಾತ: ಹಾಸ್ಯ ಕಲಾವಿದ ಉತ್ಸವ್ ದೀಕ್ಷಿತ್ ಬಂಧನ.ಪೋಶೆ ಕಾರು ಅಪಘಾತ ಪ್ರಕರಣ: ಆರೋಪಿ ಬಾಲಕನ ತಾಯಿ ಜೈಲಿನಿಂದ ಬಿಡುಗಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪುಣೆಯಲ್ಲಿ ನಡೆದಿದ್ದ ಪೋಶೆ ಕಾರು ಅಪಘಾತ ಪ್ರಕರಣದ ಮೂವರು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ನೀಡಿದೆ. </p><p>ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು, ಆರೋಪಿಗಳಾದ ಅಮರ್ ಸತೀಶ್ ಗಾಯಕ್ವಾಡ್, ಆದಿತ್ಯ ಅವಿನಾಶ ಸೂದ್ ಮತ್ತು ಆಶಿಶ್ ಸತೀಶ್ ಮಿತ್ತಲ್ ಅವರಿಗೆ ಜಾಮೀನು ಮಂಜೂರು ಮಾಡಿದೆ.</p><p>‘ಬಾಲಕ ಮದ್ಯ ಸೇವಿಸಿರುವುದು ಬೇರೆ ವಿಚಾರ. ಆದರೆ, ಸಂಭ್ರಮದ ಸಂದರ್ಭದಲ್ಲಿ ಮಕ್ಕಳಿಗೆ ಕಾರ್ ಕೀ ಮತ್ತು ಹಣ ನೀಡುವುದು ಸ್ವೀಕಾರಾರ್ಹ ವಿಚಾರವಲ್ಲ. ಮಕ್ಕಳು ಎಸಗುವ ಇಂಥ ಕೃತ್ಯಗಳಿಗೆ ಪೋಷಕರೇ ಹೊಣೆ’ ಎಂದು ನ್ಯಾಯಪೀಠ ಹೇಳಿದೆ. </p><p>ಜಾಮೀನು ಕೋರಿ ಆರೋಪಿ ಅಮರ್ ಸತೀಶ್ ಗಾಯಕ್ವಾಡ್ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಜನವರಿ 23ರಂದು ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿತ್ತು.</p><p>2024 ಮೇ 19ರಂದು ಪುಣೆಯ ಕಲ್ಯಾಣಿ ನಗರದಲ್ಲಿ ಪಾನಮತ್ತ ಬಾಲಕ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಇಬ್ಬರು ಟೆಕ್ಕಿಗಳು ಮೃತಪಟ್ಟಿದ್ದರು. </p>.ಪೋಶೆ ಕಾರು ಅಪಘಾತ ಪ್ರಕರಣ: ಮತ್ತೆ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!.ಪೋಶೆ ಕಾರು ಅಪಘಾತ: ಪೊಲೀಸರ ಮನವಿ ತಿರಸ್ಕರಿಸಿದ ಜೆಜೆಬಿ.ಪೋಶೆ ಕಾರು ಅಪಘಾತ: ಹಾಸ್ಯ ಕಲಾವಿದ ಉತ್ಸವ್ ದೀಕ್ಷಿತ್ ಬಂಧನ.ಪೋಶೆ ಕಾರು ಅಪಘಾತ ಪ್ರಕರಣ: ಆರೋಪಿ ಬಾಲಕನ ತಾಯಿ ಜೈಲಿನಿಂದ ಬಿಡುಗಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>