<p><strong>ಪಟ್ನಾ:</strong> ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ವಿರುದ್ಧ ಬಿಹಾರ ಸಚಿವ ಹಾಗೂ ಜೆಡಿ(ಯು) ಹಿರಿಯ ನಾಯಕ ಅಶೋಕ್ ಚೌಧರಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.</p><p>ಅಶೋಕ್ ಚೌಧರಿ ತಮ್ಮ ಮಗಳಿಗೆ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಬೇಕು ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರಿಗೆ ಲಂಚ ನೀಡಿದ್ದರು ಎಂದು ಪ್ರಶಾಂತ್ ಕಿಶೋರ್ ಆರೋಪಿಸಿದ್ದರು.</p><p>ಚೌಧರಿ ಅವರ ಪುತ್ರಿ ಶಾಂಭವಿ ಸಮಷ್ಟಿಪುರ ಮೀಸಲು ಕ್ಷೇತ್ರದಲ್ಲಿ ಲೋಕ ಜನಶಕ್ತಿ ಪಕ್ಷದಿಂದ(ರಾಮ್ ವಿಲಾಸ್) ಸಂಸದರಾಗಿ ಆಯ್ಕೆಯಾಗಿದ್ದಾರೆ.</p><p>'ನನ್ನ ಮಗಳು ಹಾಗೂ ನನ್ನ ವಿರುದ್ಧ ಪ್ರಶಾಂತ್ ಕಿಶೋರ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ ನಂತರ ಅವರಿಗೆ ಕಾನೂನಿನ ಮೂಲಕವೇ ನೋಟಿಸ್ ಕಳುಹಿಸಿದ್ದೇನೆ. ಅದಕ್ಕೆ ಅವರು ನೀಡಿರುವ ಉತ್ತರ ತೃಪ್ತಿಕರವಾಗಿಲ್ಲ ಎಂದು ಚೌಧರಿ ಹೇಳಿದ್ದಾರೆ.</p><p>ಪ್ರಶಾಂತ್ ಕಿಶೋರ್ ಅವರು ತಮ್ಮ ಹೇಳಿಕೆಯನ್ನು ಸೂಕ್ತ ದಾಖಲೆಗಳ ಮೂಲಕ ಸಮರ್ಥಿಸಿಕೊಳ್ಳಲಿ ಅಥವಾ ತಪ್ಪಾಗಿದ್ದರೆ ಕ್ಷಮೆಯಾಚಿಸಲಿ. ಅವರು ಇವೆರಡನ್ನೂ ಮಾಡದಿದ್ದರೆ, ಪ್ರಕರಣವನ್ನು ಸುಪ್ರೀಂ ಕೋರ್ಟ್ಗೆ ತೆಗೆದುಕೊಂಡು ಹೋಗಲು ನಾನು ಸಿದ್ದ ಎಂದು ಹೇಳಿದರು.</p><p>ಹಣಕ್ಕಾಗಿ ಎಲ್ಲಾ ಪಕ್ಷಗಳಿಗೂ ಕೆಲಸ ಮಾಡಿರುವ ಪ್ರಶಾಂತ್ ಕಿಶೋರ್ ಅವರು ಒಬ್ಬ 'ರಾಜಕೀಯ ವ್ಯಾಪಾರಿ' ಎಂದು ಟೀಕಿಸಿದರು. ಪ್ರಕರಣದ ಇತ್ತೀಚಿನ ಬೆಳವಣಿಗೆ ಕುರಿತು ಇದುವರೆಗೂ ಪ್ರಶಾಂತ್ ಕಿಶೋರ್ ಯಾವುದೇ ಹೇಳಿಕೆ ನೀಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ವಿರುದ್ಧ ಬಿಹಾರ ಸಚಿವ ಹಾಗೂ ಜೆಡಿ(ಯು) ಹಿರಿಯ ನಾಯಕ ಅಶೋಕ್ ಚೌಧರಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.</p><p>ಅಶೋಕ್ ಚೌಧರಿ ತಮ್ಮ ಮಗಳಿಗೆ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಬೇಕು ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರಿಗೆ ಲಂಚ ನೀಡಿದ್ದರು ಎಂದು ಪ್ರಶಾಂತ್ ಕಿಶೋರ್ ಆರೋಪಿಸಿದ್ದರು.</p><p>ಚೌಧರಿ ಅವರ ಪುತ್ರಿ ಶಾಂಭವಿ ಸಮಷ್ಟಿಪುರ ಮೀಸಲು ಕ್ಷೇತ್ರದಲ್ಲಿ ಲೋಕ ಜನಶಕ್ತಿ ಪಕ್ಷದಿಂದ(ರಾಮ್ ವಿಲಾಸ್) ಸಂಸದರಾಗಿ ಆಯ್ಕೆಯಾಗಿದ್ದಾರೆ.</p><p>'ನನ್ನ ಮಗಳು ಹಾಗೂ ನನ್ನ ವಿರುದ್ಧ ಪ್ರಶಾಂತ್ ಕಿಶೋರ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ ನಂತರ ಅವರಿಗೆ ಕಾನೂನಿನ ಮೂಲಕವೇ ನೋಟಿಸ್ ಕಳುಹಿಸಿದ್ದೇನೆ. ಅದಕ್ಕೆ ಅವರು ನೀಡಿರುವ ಉತ್ತರ ತೃಪ್ತಿಕರವಾಗಿಲ್ಲ ಎಂದು ಚೌಧರಿ ಹೇಳಿದ್ದಾರೆ.</p><p>ಪ್ರಶಾಂತ್ ಕಿಶೋರ್ ಅವರು ತಮ್ಮ ಹೇಳಿಕೆಯನ್ನು ಸೂಕ್ತ ದಾಖಲೆಗಳ ಮೂಲಕ ಸಮರ್ಥಿಸಿಕೊಳ್ಳಲಿ ಅಥವಾ ತಪ್ಪಾಗಿದ್ದರೆ ಕ್ಷಮೆಯಾಚಿಸಲಿ. ಅವರು ಇವೆರಡನ್ನೂ ಮಾಡದಿದ್ದರೆ, ಪ್ರಕರಣವನ್ನು ಸುಪ್ರೀಂ ಕೋರ್ಟ್ಗೆ ತೆಗೆದುಕೊಂಡು ಹೋಗಲು ನಾನು ಸಿದ್ದ ಎಂದು ಹೇಳಿದರು.</p><p>ಹಣಕ್ಕಾಗಿ ಎಲ್ಲಾ ಪಕ್ಷಗಳಿಗೂ ಕೆಲಸ ಮಾಡಿರುವ ಪ್ರಶಾಂತ್ ಕಿಶೋರ್ ಅವರು ಒಬ್ಬ 'ರಾಜಕೀಯ ವ್ಯಾಪಾರಿ' ಎಂದು ಟೀಕಿಸಿದರು. ಪ್ರಕರಣದ ಇತ್ತೀಚಿನ ಬೆಳವಣಿಗೆ ಕುರಿತು ಇದುವರೆಗೂ ಪ್ರಶಾಂತ್ ಕಿಶೋರ್ ಯಾವುದೇ ಹೇಳಿಕೆ ನೀಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>