ಗರ್ಭ ಸಂಸ್ಕಾರ ಕಾರ್ಯಕ್ರಮದಡಿ ಗರ್ಭಿಣಿಯರಿಗೆ ಧಾರ್ಮಿಕ ಗ್ರಂಥಗಳಾದ ಭಗವದ್ಗೀತೆ ಮತ್ತು ರಾಮಾಯಣ ಓದಲು ಪ್ರೋತ್ಸಾಹಿಸಲಾಗುತ್ತದೆ. ಸಂಸ್ಕೃತ ಮಂತ್ರಗಳ ಉಚ್ಚಾರ ಹಾಗೂ ಯೋಗಾಭ್ಯಾಸ ಸಹ ಮಾಡಿಸಲಾಗುತ್ತದೆ. ಇದರಿಂದ ಗರ್ಭಿಣಿಯರಿಗೆ ಸಹಜ ಹೆರಿಗೆ ಆಗಲಿದೆ ಮತ್ತು ಸಂಸ್ಕಾರವಂತ ಹಾಗೂ ದೇಶಭಕ್ತ ಮಕ್ಕಳು ಜನಿಸುತ್ತವೆ. ಗರ್ಭಾವಸ್ಥೆಯಿಂದ ಹೆರಿಗೆಯವರೆಗೆ ಮತ್ತು ಮಗುವಿಗೆ ಎರಡು ವರ್ಷ ತುಂಬುವವರೆಗೆ ಈ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಸಂವರ್ಧಿನಿ ನ್ಯಾಸ್ ಹೇಳಿದೆ