<p><strong>ಕತಿಹಾರ್:</strong> ‘ಕಟ್ಟಾ (ದೇಸಿ ಬಂದೂಕು) ಪದ ಬಳಕೆಯು ಪ್ರಧಾನಿ ಹುದ್ದೆಯ ಘನತೆಗೆ ತಕ್ಕುದಲ್ಲ. ಮೋದಿ ಅವರು ಇಂಥ ಮಾತುಗಳಿಂದ ಪ್ರಧಾನಮಂತ್ರಿ ಸ್ಥಾನದ ಮಾನವನ್ನು ಕಳೆದಿದ್ದಾರೆ’ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಬಿಹಾರ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನಕ್ಕೂ ಪೂರ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೀತಾಮರ್ಹಿ ಎಂಬಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಶನಿವಾರ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ‘ಕಟ್ಟಾ ಸರ್ಕಾರ್’ ಎಂದು ಆರ್ಜೆಡಿ, ಕಾಂಗ್ರೆಸ್ ಒಳಗೊಂಡ ಮಹಾ ಘಟಬಂದನ್ ಅನ್ನು ಟೀಕಿಸಿದ್ದರು. ಇದಕ್ಕೆ ಪ್ರಿಯಾಂಕಾ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.</p>.ಮಹಾಘಟಬಂಧನ ಅಧಿಕಾರಕ್ಕೆ ಬಂದರೆ ಜನರ ತಲೆಗೆ ಬಂದೂಕು ಗ್ಯಾರಂಟಿ: PM ಮೋದಿ ವಾಗ್ದಾಳಿ.<p>ಕತಿಹಾರ್ನಲ್ಲಿ ಮಾತನಾಡಿರುವ ಪ್ರಿಯಾಂಕಾ, ‘ಒಂದು ಕಾಲದಲ್ಲಿ ಬ್ರಿಟಿಷರ ವಿರುದ್ಧ ಮಹಾತ್ಮ ಗಾಂಧಿ ಅವರು ನಡೆಸಿದ ಹೋರಾಟವನ್ನೇ ಕಾಂಗ್ರೆಸ್ ಇಂದು ಅನುಸರಿಸುತ್ತಿದೆ. ಒಂದೆಡೆ ಅಹಿಂಸೆ, ಎಲ್ಲರನ್ನೂ ಒಳಗೊಳ್ಳುವ ‘ವಂದೇ ಮಾತರಂ’ ಘೋಷಣೆಯನ್ನು ಮೋದಿ ಅವರು ಮೊಳಗಿಸುತ್ತಾರೆ. ಮತ್ತೊಂದೆಡೆ ‘ಕಟ್ಟಾ’ ಪದವನ್ನು ಬಳಸುತ್ತಾರೆ’ ಎಂದಿದ್ದಾರೆ.</p><p>‘ಬಿಹಾರದಲ್ಲಿರುವ ಎನ್ಡಿಎ ಸರ್ಕಾರವು ಯುವಕರಿಗೆ ಉದ್ಯೋಗ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರ್ಕಾರಿ ಸ್ವಾಮ್ಯ ಸಂಸ್ಥೆಗಳನ್ನು ತನ್ನ ಮಿತ್ರರಾದ ಎರಡು ಕಾರ್ಪೊರೇಟ್ ಕಂಪನಿಗಳಿಗೆ ನೀಡಿದೆ’ ಎಂದು ಆರೋಪಿಸಿದರು.</p><p>‘₹10 ಸಾವಿರ ಲಂಚ ನೀಡಿ ಮಹಿಳೆಯರ ಮತಗಳನ್ನು ಪಡೆಯಬಹುದು ಎಂದು ಬಿಜೆಪಿ ಆಲೋಚಿಸಿದೆ’ ಎಂದು ಪ್ರಿಯಾಂಕಾ ವಾಗ್ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕತಿಹಾರ್:</strong> ‘ಕಟ್ಟಾ (ದೇಸಿ ಬಂದೂಕು) ಪದ ಬಳಕೆಯು ಪ್ರಧಾನಿ ಹುದ್ದೆಯ ಘನತೆಗೆ ತಕ್ಕುದಲ್ಲ. ಮೋದಿ ಅವರು ಇಂಥ ಮಾತುಗಳಿಂದ ಪ್ರಧಾನಮಂತ್ರಿ ಸ್ಥಾನದ ಮಾನವನ್ನು ಕಳೆದಿದ್ದಾರೆ’ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಬಿಹಾರ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನಕ್ಕೂ ಪೂರ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೀತಾಮರ್ಹಿ ಎಂಬಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಶನಿವಾರ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ‘ಕಟ್ಟಾ ಸರ್ಕಾರ್’ ಎಂದು ಆರ್ಜೆಡಿ, ಕಾಂಗ್ರೆಸ್ ಒಳಗೊಂಡ ಮಹಾ ಘಟಬಂದನ್ ಅನ್ನು ಟೀಕಿಸಿದ್ದರು. ಇದಕ್ಕೆ ಪ್ರಿಯಾಂಕಾ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.</p>.ಮಹಾಘಟಬಂಧನ ಅಧಿಕಾರಕ್ಕೆ ಬಂದರೆ ಜನರ ತಲೆಗೆ ಬಂದೂಕು ಗ್ಯಾರಂಟಿ: PM ಮೋದಿ ವಾಗ್ದಾಳಿ.<p>ಕತಿಹಾರ್ನಲ್ಲಿ ಮಾತನಾಡಿರುವ ಪ್ರಿಯಾಂಕಾ, ‘ಒಂದು ಕಾಲದಲ್ಲಿ ಬ್ರಿಟಿಷರ ವಿರುದ್ಧ ಮಹಾತ್ಮ ಗಾಂಧಿ ಅವರು ನಡೆಸಿದ ಹೋರಾಟವನ್ನೇ ಕಾಂಗ್ರೆಸ್ ಇಂದು ಅನುಸರಿಸುತ್ತಿದೆ. ಒಂದೆಡೆ ಅಹಿಂಸೆ, ಎಲ್ಲರನ್ನೂ ಒಳಗೊಳ್ಳುವ ‘ವಂದೇ ಮಾತರಂ’ ಘೋಷಣೆಯನ್ನು ಮೋದಿ ಅವರು ಮೊಳಗಿಸುತ್ತಾರೆ. ಮತ್ತೊಂದೆಡೆ ‘ಕಟ್ಟಾ’ ಪದವನ್ನು ಬಳಸುತ್ತಾರೆ’ ಎಂದಿದ್ದಾರೆ.</p><p>‘ಬಿಹಾರದಲ್ಲಿರುವ ಎನ್ಡಿಎ ಸರ್ಕಾರವು ಯುವಕರಿಗೆ ಉದ್ಯೋಗ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರ್ಕಾರಿ ಸ್ವಾಮ್ಯ ಸಂಸ್ಥೆಗಳನ್ನು ತನ್ನ ಮಿತ್ರರಾದ ಎರಡು ಕಾರ್ಪೊರೇಟ್ ಕಂಪನಿಗಳಿಗೆ ನೀಡಿದೆ’ ಎಂದು ಆರೋಪಿಸಿದರು.</p><p>‘₹10 ಸಾವಿರ ಲಂಚ ನೀಡಿ ಮಹಿಳೆಯರ ಮತಗಳನ್ನು ಪಡೆಯಬಹುದು ಎಂದು ಬಿಜೆಪಿ ಆಲೋಚಿಸಿದೆ’ ಎಂದು ಪ್ರಿಯಾಂಕಾ ವಾಗ್ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>