<p><strong>ಚಂಡೀಗಢ:</strong> ಪಂಜಾಬ್ನ ರೈತ ಮುಖಂಡ ಜಗಜೀತ್ ಸಿಂಗ್ ಡಲ್ಲೇವಾಲ್ ಅವರು 131 ದಿನಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಭಾನುವಾರ ಅಂತ್ಯಗೊಳಿಸಿದರು.</p>.<p>ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯ ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ ನವೆಂಬರ್ 26ರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.</p>.<p>ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ಅವರು ಆಮರಣಾಂತ ಉಪವಾಸ ಅಂತ್ಯಗೊಳಿಸುವಂತೆ ಮನವಿ ಮಾಡಿದ ಒಂದು ದಿನದ ನಂತರ ಈ ಘೋಷಣೆ ಹೊರಬಿದ್ದಿದೆ.</p>.<p>ಪಂಜಾಬ್ನ ಫತೇಘರ್ ಸಾಹಿಬ್ ಜಿಲ್ಲೆಯ ಸಿರ್ಹಿಂದ್ನಲ್ಲಿ ಆಯೋಜಿಸಲಾದ 'ಕಿಸಾನ್ ಮಹಾಪಂಚಾಯತ್'ನಲ್ಲಿ ತಮ್ಮ ಅನಿರ್ದಿಷ್ಟಾವಧಿ ಉಪವಾಸವನ್ನು ಕೊನೆಗೊಳಿಸುತ್ತಿರುವುದಾಗಿ ಡಲ್ಲೇವಾಲ್ ಘೋಷಿಸಿದ್ದಾರೆ.</p>.<p>‘ನೀವೆಲ್ಲರೂ ಉಪವಾಸ ಸತ್ಯಾಗ್ರಹ ನಿಲ್ಲಿಸುವಂತೆ ಹೇಳಿದ್ದೀರಿ. ನನ್ನ ಹೋರಾಟದ ಬಗ್ಗೆ ಕಾಳಜಿ ವಹಿಸಿದ್ದಕ್ಕೆ ನಿಮಗೆ ಋಣಿಯಾಗಿರುವೆ. ನಿಮ್ಮ ಭಾವನೆಯನ್ನು ಗೌರವಿಸುತ್ತೇನೆ. ನಿಮ್ಮ ಆದೇಶ ಸ್ವೀಕರಿಸುವೆ’ ಎಂದು ನೆರೆದಿದ್ದ ರೈತರನ್ನುದ್ದೇಶಿಸಿ ಡಲ್ಲೇವಾಲ್ ಹೇಳಿದ್ದಾರೆ.</p> .<p>ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಜಂಟಿ ವೇದಿಕೆಯ ಹಿರಿಯ ನಾಯಕ ಡಲ್ಲೇವಾಲ್, ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು 2024ರ ನವೆಂಬರ್ 26ರಂದು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.</p>.<p>2025ರ ಜನವರಿಯಲ್ಲಿ ಕೇಂದ್ರವು ಮಾತುಕತೆಗೆ ಆಹ್ವಾನಿಸಿದ ನಂತರ, ಡಲ್ಲೇವಾಲ್ ಖಾನೌರಿ ಪ್ರತಿಭಟನಾ ಸ್ಥಳದಲ್ಲಿ ವೈದ್ಯಕೀಯ ಚಿಕಿತ್ಸೆಗೆ ಪಡೆಯಲು ಪ್ರಾರಂಭಿಸಿದರು. ಆದರೆ ತಮ್ಮ ಉಪವಾಸವನ್ನು ಅಂತ್ಯಗೊಳಿಸಿರಲಿಲ್ಲ.</p>.<p>ಶನಿವಾರ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುವಂತೆ ಮನವಿ ಮಾಡಿದ್ದರು.</p>.<p>‘ರೈತ ನಾಯಕ ಡಲ್ಲೇವಾಲ್ ಈಗ ಆಸ್ಪತ್ರೆಯಿಂದ ಹಿಂತಿರುಗಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ. ಅವರು ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆಯೂ ನಾವು ವಿನಂತಿಸುತ್ತೇವೆ. ಈಗಾಗಲೇ ನಿರ್ಧರಿಸಿದ ದಿನಾಂಕದ ಪ್ರಕಾರ ಮೇ 4 ರಂದು ಬೆಳಿಗ್ಗೆ 11 ಗಂಟೆಗೆ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುತ್ತೇವೆ‘ ಎಂದು ಚೌಹಾಣ್ ಎಕ್ಸ್ ಪೋಸ್ಟ್ನಲ್ಲಿ ಹೇಳಿದ್ದರು.</p>.<p>‘ನಿಮ್ಮ ಆರೋಗ್ಯ ಮತ್ತು ನಿಮ್ಮ ಜೀವ ಪಂಜಾಬ್ ಜನರಿಗೆ ಅಮೂಲ್ಯವಾದುದು. ಏಕೆಂದರೆ ರೈತರು ಮತ್ತು ಕೃಷಿ ಕಾರ್ಮಿಕರ ಹೋರಾಟಕ್ಕೆ ನಿಮ್ಮ ನಾಯಕತ್ವ ಯಾವಾಗಲೂ ಅಗತ್ಯವಾಗಿರುತ್ತದೆ. ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿ‘ ಎಂದು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಕೂಡ ಮನವಿ ಮಾಡಿದ್ದರು.</p> .ಡಲ್ಲೇವಾಲ್ ನಿರಶನ ಅಂತ್ಯಗೊಳಿಸಿಲ್ಲ: ರೈತ ಮುಖಂಡರ ಸ್ಪಷ್ಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಪಂಜಾಬ್ನ ರೈತ ಮುಖಂಡ ಜಗಜೀತ್ ಸಿಂಗ್ ಡಲ್ಲೇವಾಲ್ ಅವರು 131 ದಿನಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಭಾನುವಾರ ಅಂತ್ಯಗೊಳಿಸಿದರು.</p>.<p>ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯ ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ ನವೆಂಬರ್ 26ರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.</p>.<p>ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ಅವರು ಆಮರಣಾಂತ ಉಪವಾಸ ಅಂತ್ಯಗೊಳಿಸುವಂತೆ ಮನವಿ ಮಾಡಿದ ಒಂದು ದಿನದ ನಂತರ ಈ ಘೋಷಣೆ ಹೊರಬಿದ್ದಿದೆ.</p>.<p>ಪಂಜಾಬ್ನ ಫತೇಘರ್ ಸಾಹಿಬ್ ಜಿಲ್ಲೆಯ ಸಿರ್ಹಿಂದ್ನಲ್ಲಿ ಆಯೋಜಿಸಲಾದ 'ಕಿಸಾನ್ ಮಹಾಪಂಚಾಯತ್'ನಲ್ಲಿ ತಮ್ಮ ಅನಿರ್ದಿಷ್ಟಾವಧಿ ಉಪವಾಸವನ್ನು ಕೊನೆಗೊಳಿಸುತ್ತಿರುವುದಾಗಿ ಡಲ್ಲೇವಾಲ್ ಘೋಷಿಸಿದ್ದಾರೆ.</p>.<p>‘ನೀವೆಲ್ಲರೂ ಉಪವಾಸ ಸತ್ಯಾಗ್ರಹ ನಿಲ್ಲಿಸುವಂತೆ ಹೇಳಿದ್ದೀರಿ. ನನ್ನ ಹೋರಾಟದ ಬಗ್ಗೆ ಕಾಳಜಿ ವಹಿಸಿದ್ದಕ್ಕೆ ನಿಮಗೆ ಋಣಿಯಾಗಿರುವೆ. ನಿಮ್ಮ ಭಾವನೆಯನ್ನು ಗೌರವಿಸುತ್ತೇನೆ. ನಿಮ್ಮ ಆದೇಶ ಸ್ವೀಕರಿಸುವೆ’ ಎಂದು ನೆರೆದಿದ್ದ ರೈತರನ್ನುದ್ದೇಶಿಸಿ ಡಲ್ಲೇವಾಲ್ ಹೇಳಿದ್ದಾರೆ.</p> .<p>ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಜಂಟಿ ವೇದಿಕೆಯ ಹಿರಿಯ ನಾಯಕ ಡಲ್ಲೇವಾಲ್, ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು 2024ರ ನವೆಂಬರ್ 26ರಂದು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.</p>.<p>2025ರ ಜನವರಿಯಲ್ಲಿ ಕೇಂದ್ರವು ಮಾತುಕತೆಗೆ ಆಹ್ವಾನಿಸಿದ ನಂತರ, ಡಲ್ಲೇವಾಲ್ ಖಾನೌರಿ ಪ್ರತಿಭಟನಾ ಸ್ಥಳದಲ್ಲಿ ವೈದ್ಯಕೀಯ ಚಿಕಿತ್ಸೆಗೆ ಪಡೆಯಲು ಪ್ರಾರಂಭಿಸಿದರು. ಆದರೆ ತಮ್ಮ ಉಪವಾಸವನ್ನು ಅಂತ್ಯಗೊಳಿಸಿರಲಿಲ್ಲ.</p>.<p>ಶನಿವಾರ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುವಂತೆ ಮನವಿ ಮಾಡಿದ್ದರು.</p>.<p>‘ರೈತ ನಾಯಕ ಡಲ್ಲೇವಾಲ್ ಈಗ ಆಸ್ಪತ್ರೆಯಿಂದ ಹಿಂತಿರುಗಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ. ಅವರು ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆಯೂ ನಾವು ವಿನಂತಿಸುತ್ತೇವೆ. ಈಗಾಗಲೇ ನಿರ್ಧರಿಸಿದ ದಿನಾಂಕದ ಪ್ರಕಾರ ಮೇ 4 ರಂದು ಬೆಳಿಗ್ಗೆ 11 ಗಂಟೆಗೆ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುತ್ತೇವೆ‘ ಎಂದು ಚೌಹಾಣ್ ಎಕ್ಸ್ ಪೋಸ್ಟ್ನಲ್ಲಿ ಹೇಳಿದ್ದರು.</p>.<p>‘ನಿಮ್ಮ ಆರೋಗ್ಯ ಮತ್ತು ನಿಮ್ಮ ಜೀವ ಪಂಜಾಬ್ ಜನರಿಗೆ ಅಮೂಲ್ಯವಾದುದು. ಏಕೆಂದರೆ ರೈತರು ಮತ್ತು ಕೃಷಿ ಕಾರ್ಮಿಕರ ಹೋರಾಟಕ್ಕೆ ನಿಮ್ಮ ನಾಯಕತ್ವ ಯಾವಾಗಲೂ ಅಗತ್ಯವಾಗಿರುತ್ತದೆ. ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿ‘ ಎಂದು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಕೂಡ ಮನವಿ ಮಾಡಿದ್ದರು.</p> .ಡಲ್ಲೇವಾಲ್ ನಿರಶನ ಅಂತ್ಯಗೊಳಿಸಿಲ್ಲ: ರೈತ ಮುಖಂಡರ ಸ್ಪಷ್ಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>