<p><strong>ನವದೆಹಲಿ:</strong> ದೆಹಲಿಯ ಮೋತಿ ನಗರದ ಬಿಜೆಪಿ ಶಾಸಕ ಹರೀಶ್ ಖುರಾನಾ ಅವರು ತಮ್ಮ ಎರಡು ತಿಂಗಳ ಸಂಬಳವನ್ನು ಪಂಜಾಬ್ನ ಪ್ರವಾಹದಲ್ಲಿ ಸಿಲುಕಿದ ಸಂತ್ರಸ್ತರ ನೆರವಿಗೆ ನೀಡುತ್ತಿರುವ ಬಗ್ಗೆ ಹೇಳಿದ್ದಾರೆ.</p><p>ದೆಹಲಿಯ ಮಾಜಿ ಮುಖ್ಯಮಂತ್ರಿ ಮದನ್ ಲಾಲ್ ಪುತ್ರ ಹರೀಶ್ ಖುರಾನಾ ಅವರು, ಪಂಜಾಬ್ನಲ್ಲಿ ಪ್ರವಾಹದ ಭೀತಿಯಲ್ಲಿ ಸಿಲುಕಿದವರಿಗೆ ₹2 ಲಕ್ಷ ರೂಪಾಯಿಗಳನ್ನು ದಾನ ಮಾಡಲು ಮುಂದಾಗಿದ್ದಾರೆ. </p>.ಪಂಜಾಬ್ನಲ್ಲಿ ಪ್ರವಾಹ: ವಿಶ್ವವಿದ್ಯಾಲಯಗಳಲ್ಲಿ ಸೆಪ್ಟೆಂಬರ್ 3ರವರೆಗೆ ರಜೆ ಘೋಷಣೆ.<p>ಪಂಜಾಬ್ನಲ್ಲಿ ಸುಮಾರು 1000 ಗ್ರಾಮಗಳು ಪ್ರವಾಹದಲ್ಲಿ ಮುಳುಗಿವೆ. ನನ್ನ ಪಂಜಾಬಿ ಸಹೋದರ ಸಹೋದರಿಯರಿಗೆ ಸಾಧ್ಯವಾದಷ್ಟು ನೆರವು ನೀಡುವುದು ನನ್ನ ಕರ್ತವ್ಯ ಎಂದು ಶಾಸಕ ಹರೀಶ್ ಖುರಾನಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.</p>.ಪ್ರವಾಹ ಸಂತ್ರಸ್ತರಿಗೆ ಬಿತ್ತನೆ ಬೀಜ ವಿತರಿಸಿದ ಪಂಜಾಬ್ ರೈತರು.<p>ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಮತ್ತು ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಪಂಜಾಬ್ನಲ್ಲಿ ಪ್ರವಾಹ ಭೀತಿ ಉಂಟಾಗಿದೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯ ಮೋತಿ ನಗರದ ಬಿಜೆಪಿ ಶಾಸಕ ಹರೀಶ್ ಖುರಾನಾ ಅವರು ತಮ್ಮ ಎರಡು ತಿಂಗಳ ಸಂಬಳವನ್ನು ಪಂಜಾಬ್ನ ಪ್ರವಾಹದಲ್ಲಿ ಸಿಲುಕಿದ ಸಂತ್ರಸ್ತರ ನೆರವಿಗೆ ನೀಡುತ್ತಿರುವ ಬಗ್ಗೆ ಹೇಳಿದ್ದಾರೆ.</p><p>ದೆಹಲಿಯ ಮಾಜಿ ಮುಖ್ಯಮಂತ್ರಿ ಮದನ್ ಲಾಲ್ ಪುತ್ರ ಹರೀಶ್ ಖುರಾನಾ ಅವರು, ಪಂಜಾಬ್ನಲ್ಲಿ ಪ್ರವಾಹದ ಭೀತಿಯಲ್ಲಿ ಸಿಲುಕಿದವರಿಗೆ ₹2 ಲಕ್ಷ ರೂಪಾಯಿಗಳನ್ನು ದಾನ ಮಾಡಲು ಮುಂದಾಗಿದ್ದಾರೆ. </p>.ಪಂಜಾಬ್ನಲ್ಲಿ ಪ್ರವಾಹ: ವಿಶ್ವವಿದ್ಯಾಲಯಗಳಲ್ಲಿ ಸೆಪ್ಟೆಂಬರ್ 3ರವರೆಗೆ ರಜೆ ಘೋಷಣೆ.<p>ಪಂಜಾಬ್ನಲ್ಲಿ ಸುಮಾರು 1000 ಗ್ರಾಮಗಳು ಪ್ರವಾಹದಲ್ಲಿ ಮುಳುಗಿವೆ. ನನ್ನ ಪಂಜಾಬಿ ಸಹೋದರ ಸಹೋದರಿಯರಿಗೆ ಸಾಧ್ಯವಾದಷ್ಟು ನೆರವು ನೀಡುವುದು ನನ್ನ ಕರ್ತವ್ಯ ಎಂದು ಶಾಸಕ ಹರೀಶ್ ಖುರಾನಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.</p>.ಪ್ರವಾಹ ಸಂತ್ರಸ್ತರಿಗೆ ಬಿತ್ತನೆ ಬೀಜ ವಿತರಿಸಿದ ಪಂಜಾಬ್ ರೈತರು.<p>ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಮತ್ತು ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಪಂಜಾಬ್ನಲ್ಲಿ ಪ್ರವಾಹ ಭೀತಿ ಉಂಟಾಗಿದೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>