<p><strong>ನವದೆಹಲಿ</strong>: ‘ಚುನಾಯಿತ ರಾಜ್ಯ ಸರ್ಕಾರಗಳ ಧ್ವನಿ ಅಡಗಿಸಲು ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.</p><p>‘ಕೇಂದ್ರದ ಈ ನಿಲುವು, ಒಕ್ಕೂಟ ವ್ಯವಸ್ಥೆಯ ಮೇಲೆ ಅಪಾಯಕಾರಿ ಆಕ್ರಮಣವಾಗಿದೆ’ ಎಂದಿದ್ದಾರೆ.</p><p>‘ದೇಶದ ಪ್ರತಿಯೊಂದು ರಾಜ್ಯವು ತನ್ನದೇ ಆದ ಧ್ವನಿಯನ್ನು ಹೊಂದಿರುವುದರಿಂದ, ಕೇಂದ್ರದ ಈ ನಿಲುವನ್ನು ಎಲ್ಲ ರಾಜ್ಯಗಳು ವಿರೋಧಿಸಬೇಕು’ ಎಂದು ‘ಎಕ್ಸ್’ನಲ್ಲಿ ಉಲ್ಲೇಖಿಸಿದ್ದಾರೆ.</p><p>‘ಭಾರತದ ಶಕ್ತಿ ಅದರ ವೈವಿಧ್ಯದಲ್ಲಿದೆ. ಒಕ್ಕೂಟ ವ್ಯವಸ್ಥೆಯಲ್ಲಿದೆ. ಪ್ರತಿಯೊಂದು ರಾಜ್ಯವೂ ತನ್ನದೇ ಆದ ಧ್ವನಿಯನ್ನು ಹೊಂದಿದ್ದು, ಇದನ್ನು ಹತ್ತಿಕ್ಕಲು ಮತ್ತು ಚುನಾಯಿತ ರಾಜ್ಯ ಸರ್ಕಾರಕ್ಕೆ ಅಡ್ಡಿಯುಂಟು ಮಾಡಲು ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದಿದ್ದಾರೆ.</p><p>ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪೋಸ್ಟ್ನ್ನು ರಾಹುಲ್ ಗಾಂಧಿ ಟ್ಯಾಗ್ ಮಾಡಿದ್ದು, ಕೇಂದ್ರದ ನಡೆಯನ್ನು ಖಂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಚುನಾಯಿತ ರಾಜ್ಯ ಸರ್ಕಾರಗಳ ಧ್ವನಿ ಅಡಗಿಸಲು ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.</p><p>‘ಕೇಂದ್ರದ ಈ ನಿಲುವು, ಒಕ್ಕೂಟ ವ್ಯವಸ್ಥೆಯ ಮೇಲೆ ಅಪಾಯಕಾರಿ ಆಕ್ರಮಣವಾಗಿದೆ’ ಎಂದಿದ್ದಾರೆ.</p><p>‘ದೇಶದ ಪ್ರತಿಯೊಂದು ರಾಜ್ಯವು ತನ್ನದೇ ಆದ ಧ್ವನಿಯನ್ನು ಹೊಂದಿರುವುದರಿಂದ, ಕೇಂದ್ರದ ಈ ನಿಲುವನ್ನು ಎಲ್ಲ ರಾಜ್ಯಗಳು ವಿರೋಧಿಸಬೇಕು’ ಎಂದು ‘ಎಕ್ಸ್’ನಲ್ಲಿ ಉಲ್ಲೇಖಿಸಿದ್ದಾರೆ.</p><p>‘ಭಾರತದ ಶಕ್ತಿ ಅದರ ವೈವಿಧ್ಯದಲ್ಲಿದೆ. ಒಕ್ಕೂಟ ವ್ಯವಸ್ಥೆಯಲ್ಲಿದೆ. ಪ್ರತಿಯೊಂದು ರಾಜ್ಯವೂ ತನ್ನದೇ ಆದ ಧ್ವನಿಯನ್ನು ಹೊಂದಿದ್ದು, ಇದನ್ನು ಹತ್ತಿಕ್ಕಲು ಮತ್ತು ಚುನಾಯಿತ ರಾಜ್ಯ ಸರ್ಕಾರಕ್ಕೆ ಅಡ್ಡಿಯುಂಟು ಮಾಡಲು ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದಿದ್ದಾರೆ.</p><p>ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪೋಸ್ಟ್ನ್ನು ರಾಹುಲ್ ಗಾಂಧಿ ಟ್ಯಾಗ್ ಮಾಡಿದ್ದು, ಕೇಂದ್ರದ ನಡೆಯನ್ನು ಖಂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>