<p><strong>ನವದೆಹಲಿ:</strong> 'ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷ ಅಲ್ಲ, ಭಾರತದ ಆತ್ಮ' ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. </p><p>ಕಾಂಗ್ರೆಸ್ನ 140ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಈ ಕುರಿತು ಮಾತನಾಡಿದ್ದಾರೆ. </p>.ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ: ದಿಗ್ವಿಜಯ್ಗೆ ತರೂರ್ ಬೆಂಬಲ.ಜನ ಸಾಮಾನ್ಯರ ಹಕ್ಕುಗಳನ್ನು ಕಸಿದುಕೊಳ್ಳುತ್ತಿರುವ ಬಿಜೆಪಿ: ಖರ್ಗೆ ವಾಗ್ದಾಳಿ.<p>'ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷವಲ್ಲ. ಬದಲಾಗಿ ದುರ್ಬಲ, ವಂಚಿತ ಮತ್ತು ಶ್ರಮಿಕರೊಂದಿಗೆ ನಿಂತಿರುವ ಭಾರತದ ಆತ್ಮದ ಧ್ವನಿಯಾಗಿದೆ' ಎಂದು ರಾಹುಲ್ ಹೇಳಿದ್ದಾರೆ. </p><p>ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲೂ ರಾಹುಲ್ ಪೋಸ್ಟ್ ಮಾಡಿದ್ದು, 'ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ, ಸಂವಿಧಾನಕ್ಕೆ ಅಡಿಪಾಯ ಹಾಕಿಕೊಟ್ಟ, ಪ್ರಜಾಪ್ರಭುತ್ವ, ಜಾತ್ಯತೀತತೆ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಮೌಲ್ಯಗಳನ್ನು ಬಲಪಡಿಸಿದ ಮಹಾನ್ ತ್ಯಾಗಿಗಳಿಗೆ ನಾವು ಗೌರವ ನಮನ ಸಲ್ಲಿಸುತ್ತೇವೆ' ಎಂದು ಬರೆದುಕೊಂಡಿದ್ದಾರೆ. </p><p>'ಸತ್ಯಕ್ಕಾಗಿ ಮತ್ತು ದ್ವೇಷ, ಅನ್ಯಾಯ, ಸರ್ವಾಧಿಕಾರದ ವಿರುದ್ಧ ಸಂವಿಧಾನವನ್ನು ರಕ್ಷಿಸಲು ಇನ್ನಷ್ಟು ಪ್ರಬಲವಾಗಿ ಹೋರಾಡುವ ಸಂಕಲ್ಪವನ್ನು ಹೊಂದಿದ್ದೇವೆ' ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷ ಅಲ್ಲ, ಭಾರತದ ಆತ್ಮ' ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. </p><p>ಕಾಂಗ್ರೆಸ್ನ 140ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಈ ಕುರಿತು ಮಾತನಾಡಿದ್ದಾರೆ. </p>.ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ: ದಿಗ್ವಿಜಯ್ಗೆ ತರೂರ್ ಬೆಂಬಲ.ಜನ ಸಾಮಾನ್ಯರ ಹಕ್ಕುಗಳನ್ನು ಕಸಿದುಕೊಳ್ಳುತ್ತಿರುವ ಬಿಜೆಪಿ: ಖರ್ಗೆ ವಾಗ್ದಾಳಿ.<p>'ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷವಲ್ಲ. ಬದಲಾಗಿ ದುರ್ಬಲ, ವಂಚಿತ ಮತ್ತು ಶ್ರಮಿಕರೊಂದಿಗೆ ನಿಂತಿರುವ ಭಾರತದ ಆತ್ಮದ ಧ್ವನಿಯಾಗಿದೆ' ಎಂದು ರಾಹುಲ್ ಹೇಳಿದ್ದಾರೆ. </p><p>ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲೂ ರಾಹುಲ್ ಪೋಸ್ಟ್ ಮಾಡಿದ್ದು, 'ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ, ಸಂವಿಧಾನಕ್ಕೆ ಅಡಿಪಾಯ ಹಾಕಿಕೊಟ್ಟ, ಪ್ರಜಾಪ್ರಭುತ್ವ, ಜಾತ್ಯತೀತತೆ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಮೌಲ್ಯಗಳನ್ನು ಬಲಪಡಿಸಿದ ಮಹಾನ್ ತ್ಯಾಗಿಗಳಿಗೆ ನಾವು ಗೌರವ ನಮನ ಸಲ್ಲಿಸುತ್ತೇವೆ' ಎಂದು ಬರೆದುಕೊಂಡಿದ್ದಾರೆ. </p><p>'ಸತ್ಯಕ್ಕಾಗಿ ಮತ್ತು ದ್ವೇಷ, ಅನ್ಯಾಯ, ಸರ್ವಾಧಿಕಾರದ ವಿರುದ್ಧ ಸಂವಿಧಾನವನ್ನು ರಕ್ಷಿಸಲು ಇನ್ನಷ್ಟು ಪ್ರಬಲವಾಗಿ ಹೋರಾಡುವ ಸಂಕಲ್ಪವನ್ನು ಹೊಂದಿದ್ದೇವೆ' ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>