<p><strong>ನವದೆಹಲಿ</strong>: ಭಾರತ ಮತ್ತು ಚೀನಾ ನಡುವೆ 2020ರಲ್ಲಿ ಲಡಾಖ್ನಲ್ಲಿ ನಡೆದ ಸೇನಾ ತಿಕ್ಕಾಟದ ಬಗ್ಗೆ, ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದಲ್ಲಿನ ಅಂಶಗಳ ಕುರಿತು ನಿಯತಕಾಲಿಕವೊಂದರಲ್ಲಿ ಪ್ರಕಟವಾಗಿರುವ ಲೇಖನವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಸೋಮವಾರ ಪ್ರಸ್ತಾಪಿಸಿದ್ದು ಭಾರಿ ಗದ್ದಲ ಎಬ್ಬಿಸಿತು.</p><p>ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ತೀವ್ರ ವಾಕ್ಸಮರ ನಡೆದು, ಕೋಲಾಹಲಕ್ಕೆ ಕಾರಣವಾಯಿತು. ರಾಹುಲ್ ಅವರು ಅಪ್ರಕಟಿತ ಪುಸ್ತಕದ ಕುರಿತು ಪ್ರಸ್ತಾಪಿಸಿ ಸದನದ ದಾರಿ ತಪ್ಪಿಸುತ್ತಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಸೇರಿದಂತೆ ಬಿಜೆಪಿಯ ಹಲವು ಸದಸ್ಯರು ಆರೋಪಿಸಿದರು.</p><p>ರಾಷ್ಟ್ರಪತಿಯವರ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಲು ಮುಂದಾದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ‘ನನಗೂ ಮುನ್ನ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಕಾಂಗ್ರೆಸ್ನ ರಾಷ್ಟ್ರೀಯತೆ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ಕುರಿತು ಮೊದಲು ಪ್ರತಿಕ್ರಿಯಿಸಲು ಬಯಸುತ್ತೇನೆ’ ಎಂದು ಹೇಳಿ, ಜನರಲ್ ನರವಣೆ ಅವರ ಪುಸ್ತಕವನ್ನು ಉಲ್ಲೇಖಿಸಿದರು.</p><p>ಸೇನಾ ತಿಕ್ಕಾಟವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ನಿಭಾಯಿಸಿದ್ದ ರೀತಿಯ ಬಗ್ಗೆ ಈ ಅಪ್ರಕಟಿತ ಪುಸ್ತಕದಲ್ಲಿ ಪ್ರಶ್ನೆಗಳನ್ನು ಎತ್ತಲಾಗಿದೆ ಎಂದು ಗೊತ್ತಾಗಿದೆ. </p>.<p><strong>‘ಒಂದು ಉಲ್ಲೇಖಕ್ಕೇಕೆ ಹೆದರಿಕೆ?’</strong></p><p>‘ಬಿಜೆಪಿಯವರು ಭಯೋತ್ಪಾದನೆಯ ವಿರುದ್ಧ ಹೋರಾಡುತ್ತೇವೆ ಎನ್ನುತ್ತಾರೆ. ಆದರೆ ಈ ಪುಸ್ತಕದ ಕುರಿತು ಪ್ರಕಟವಾಗಿರುವ ಲೇಖನದ ಒಂದು ಉಲ್ಲೇಖಕ್ಕೆ ಏಕೆ ಹೆದರುತ್ತಿದ್ದಾರೆ? ಹೆದರಿಕೆ ಇಲ್ಲ ಎನ್ನುವುದಾದರೆ ಅದನ್ನು ಓದಲು ಬಿಡಿ’ ಎಂದು ರಾಹುಲ್ ಮತ್ತೆ ಕೇಳಿದರು.</p><p>ಆಗ ಮತ್ತೆ ಎರಡೂ ಕಡೆಯ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಗದ್ದಲ ತೀವ್ರವಾದ ಪರಿಣಾಮ ಕಲಾಪವನ್ನು ಸ್ಪೀಕರ್ ಎರಡು ಬಾರಿ ಮುಂದೂಡಿದರು. ಆ ಬಳಿಕವೂ ಗದ್ದಲ ಮುಂದುವರಿದಿದ್ದರಿಂದ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತ ಮತ್ತು ಚೀನಾ ನಡುವೆ 2020ರಲ್ಲಿ ಲಡಾಖ್ನಲ್ಲಿ ನಡೆದ ಸೇನಾ ತಿಕ್ಕಾಟದ ಬಗ್ಗೆ, ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದಲ್ಲಿನ ಅಂಶಗಳ ಕುರಿತು ನಿಯತಕಾಲಿಕವೊಂದರಲ್ಲಿ ಪ್ರಕಟವಾಗಿರುವ ಲೇಖನವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಸೋಮವಾರ ಪ್ರಸ್ತಾಪಿಸಿದ್ದು ಭಾರಿ ಗದ್ದಲ ಎಬ್ಬಿಸಿತು.</p><p>ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ತೀವ್ರ ವಾಕ್ಸಮರ ನಡೆದು, ಕೋಲಾಹಲಕ್ಕೆ ಕಾರಣವಾಯಿತು. ರಾಹುಲ್ ಅವರು ಅಪ್ರಕಟಿತ ಪುಸ್ತಕದ ಕುರಿತು ಪ್ರಸ್ತಾಪಿಸಿ ಸದನದ ದಾರಿ ತಪ್ಪಿಸುತ್ತಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಸೇರಿದಂತೆ ಬಿಜೆಪಿಯ ಹಲವು ಸದಸ್ಯರು ಆರೋಪಿಸಿದರು.</p><p>ರಾಷ್ಟ್ರಪತಿಯವರ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಲು ಮುಂದಾದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ‘ನನಗೂ ಮುನ್ನ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಕಾಂಗ್ರೆಸ್ನ ರಾಷ್ಟ್ರೀಯತೆ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ಕುರಿತು ಮೊದಲು ಪ್ರತಿಕ್ರಿಯಿಸಲು ಬಯಸುತ್ತೇನೆ’ ಎಂದು ಹೇಳಿ, ಜನರಲ್ ನರವಣೆ ಅವರ ಪುಸ್ತಕವನ್ನು ಉಲ್ಲೇಖಿಸಿದರು.</p><p>ಸೇನಾ ತಿಕ್ಕಾಟವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ನಿಭಾಯಿಸಿದ್ದ ರೀತಿಯ ಬಗ್ಗೆ ಈ ಅಪ್ರಕಟಿತ ಪುಸ್ತಕದಲ್ಲಿ ಪ್ರಶ್ನೆಗಳನ್ನು ಎತ್ತಲಾಗಿದೆ ಎಂದು ಗೊತ್ತಾಗಿದೆ. </p>.<p><strong>‘ಒಂದು ಉಲ್ಲೇಖಕ್ಕೇಕೆ ಹೆದರಿಕೆ?’</strong></p><p>‘ಬಿಜೆಪಿಯವರು ಭಯೋತ್ಪಾದನೆಯ ವಿರುದ್ಧ ಹೋರಾಡುತ್ತೇವೆ ಎನ್ನುತ್ತಾರೆ. ಆದರೆ ಈ ಪುಸ್ತಕದ ಕುರಿತು ಪ್ರಕಟವಾಗಿರುವ ಲೇಖನದ ಒಂದು ಉಲ್ಲೇಖಕ್ಕೆ ಏಕೆ ಹೆದರುತ್ತಿದ್ದಾರೆ? ಹೆದರಿಕೆ ಇಲ್ಲ ಎನ್ನುವುದಾದರೆ ಅದನ್ನು ಓದಲು ಬಿಡಿ’ ಎಂದು ರಾಹುಲ್ ಮತ್ತೆ ಕೇಳಿದರು.</p><p>ಆಗ ಮತ್ತೆ ಎರಡೂ ಕಡೆಯ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಗದ್ದಲ ತೀವ್ರವಾದ ಪರಿಣಾಮ ಕಲಾಪವನ್ನು ಸ್ಪೀಕರ್ ಎರಡು ಬಾರಿ ಮುಂದೂಡಿದರು. ಆ ಬಳಿಕವೂ ಗದ್ದಲ ಮುಂದುವರಿದಿದ್ದರಿಂದ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>