<p><strong>ಅಮೇಠಿ:</strong> ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಅಮೇಠಿಗೆ ಭೇಟಿ ನೀಡುವ ಕೆಲವೇ ಗಂಟೆಗೂ ಮುನ್ನ ನಗರದ ಹಲವೆಡೆ ಕಾಂಗ್ರೆಸ್ ನಾಯಕನ ವಿರುದ್ಧ ಪೋಸ್ಟರ್ಗಳು ಪ್ರತ್ಯಕ್ಷಗೊಂಡಿವೆ. </p><p>'ಭಯೋತ್ಪಾದಕರ ಬೆಂಬಲಿಗ' ರಾಹುಲ್ ಗಾಂಧಿ ಎಂಬ ಪೋಸ್ಟರ್ ಹಲವು ಪ್ರದೇಶಗಳಲ್ಲಿ ಕಾಣಿಸಿಕೊಂಡಿವೆ. ಕಾಂಗ್ರೆಸ್ ಕಚೇರಿಯ ಸಮೀಪ ಹಾಗೂ ಸ್ಥಳೀಯ ಬಸ್ ನಿಲ್ದಾಣದಲ್ಲೂ ಪೋಸ್ಟರ್ ಅಂಟಿಸಲಾಗಿದೆ. </p><p>ಪೊಲೀಸರ ಬಿಗಿ ಭದ್ರತೆಯ ನಡುವೆಯೂ ಕಿಡಿಗೇಡಿಗಳ ಪೋಸ್ಟರ್ ರಾಜಕೀಯ ಸಂಘರ್ಷಕ್ಕೆ ಎಡೆಮಾಡಿಕೊಡುವ ಭೀತಿಯಿದೆ. </p><p>ರಾಹುಲ್ ಗಾಂಧಿ ಮಂಗಳವಾರದಂದು ತಮ್ಮ ಸ್ವಕ್ಷೇತ್ರವಾದ ರಾಯ್ಬರೇಲಿಗೆ ಭೇಟಿ ನೀಡಿದ್ದರು. ಇಂದು ಅಮೇಠಿಗೆ ಭೇಟಿ ನೀಡಲಿದ್ದು, ಬಳಿಕ ಕಾನ್ಪುರಕ್ಕೆ ತೆರಳಲಿದ್ದಾರೆ. </p><p>ಅಲ್ಲಿ ಅವರು ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟಿರುವ ಕಾನ್ಪುರದ ಉದ್ಯಮಿ ಶುಭಂ ದ್ವಿವೇದಿ ಅವರ ಕುಟುಂಬದವರನ್ನು ಭೇಟಿ ಮಾಡಲಿದ್ದಾರೆ. </p><p>ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಕೆಲವು ಕಾಂಗ್ರೆಸ್ ನಾಯಕರ ಹೇಳಿಕೆಯು ವಿವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಭಯೋತ್ಪಾದಕರ ಹಾಗೂ ಪಾಕಿಸ್ತಾನದ ಪರವಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. </p>.ಶ್ರೀನಗರದಲ್ಲಿ ರಾಹುಲ್ ಗಾಂಧಿ: ಪಹಲ್ಗಾಮ್ ದಾಳಿಯಲ್ಲಿ ಗಾಯಗೊಂಡವರ ಭೇಟಿ.ಪ್ರಜಾತಾಂತ್ರಿಕ ರಾಜಕಾರಣ ಎಲ್ಲೆಡೆ ಬದಲಾಗಿದೆ: ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮೇಠಿ:</strong> ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಅಮೇಠಿಗೆ ಭೇಟಿ ನೀಡುವ ಕೆಲವೇ ಗಂಟೆಗೂ ಮುನ್ನ ನಗರದ ಹಲವೆಡೆ ಕಾಂಗ್ರೆಸ್ ನಾಯಕನ ವಿರುದ್ಧ ಪೋಸ್ಟರ್ಗಳು ಪ್ರತ್ಯಕ್ಷಗೊಂಡಿವೆ. </p><p>'ಭಯೋತ್ಪಾದಕರ ಬೆಂಬಲಿಗ' ರಾಹುಲ್ ಗಾಂಧಿ ಎಂಬ ಪೋಸ್ಟರ್ ಹಲವು ಪ್ರದೇಶಗಳಲ್ಲಿ ಕಾಣಿಸಿಕೊಂಡಿವೆ. ಕಾಂಗ್ರೆಸ್ ಕಚೇರಿಯ ಸಮೀಪ ಹಾಗೂ ಸ್ಥಳೀಯ ಬಸ್ ನಿಲ್ದಾಣದಲ್ಲೂ ಪೋಸ್ಟರ್ ಅಂಟಿಸಲಾಗಿದೆ. </p><p>ಪೊಲೀಸರ ಬಿಗಿ ಭದ್ರತೆಯ ನಡುವೆಯೂ ಕಿಡಿಗೇಡಿಗಳ ಪೋಸ್ಟರ್ ರಾಜಕೀಯ ಸಂಘರ್ಷಕ್ಕೆ ಎಡೆಮಾಡಿಕೊಡುವ ಭೀತಿಯಿದೆ. </p><p>ರಾಹುಲ್ ಗಾಂಧಿ ಮಂಗಳವಾರದಂದು ತಮ್ಮ ಸ್ವಕ್ಷೇತ್ರವಾದ ರಾಯ್ಬರೇಲಿಗೆ ಭೇಟಿ ನೀಡಿದ್ದರು. ಇಂದು ಅಮೇಠಿಗೆ ಭೇಟಿ ನೀಡಲಿದ್ದು, ಬಳಿಕ ಕಾನ್ಪುರಕ್ಕೆ ತೆರಳಲಿದ್ದಾರೆ. </p><p>ಅಲ್ಲಿ ಅವರು ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟಿರುವ ಕಾನ್ಪುರದ ಉದ್ಯಮಿ ಶುಭಂ ದ್ವಿವೇದಿ ಅವರ ಕುಟುಂಬದವರನ್ನು ಭೇಟಿ ಮಾಡಲಿದ್ದಾರೆ. </p><p>ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಕೆಲವು ಕಾಂಗ್ರೆಸ್ ನಾಯಕರ ಹೇಳಿಕೆಯು ವಿವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಭಯೋತ್ಪಾದಕರ ಹಾಗೂ ಪಾಕಿಸ್ತಾನದ ಪರವಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. </p>.ಶ್ರೀನಗರದಲ್ಲಿ ರಾಹುಲ್ ಗಾಂಧಿ: ಪಹಲ್ಗಾಮ್ ದಾಳಿಯಲ್ಲಿ ಗಾಯಗೊಂಡವರ ಭೇಟಿ.ಪ್ರಜಾತಾಂತ್ರಿಕ ರಾಜಕಾರಣ ಎಲ್ಲೆಡೆ ಬದಲಾಗಿದೆ: ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>