<p><strong>ದರ್ಭಂಗಾ/ಪಟ್ನಾ:</strong> ಬಿಹಾರದ ದರ್ಭಂಗಾದಲ್ಲಿರುವ ಅಂಬೇಡ್ಕರ್ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ತಡೆದಿದ್ದಾರೆ. </p><p>ರಾಹುಲ್ ಗಾಂಧಿ ಅವರು ‘ಶಿಕ್ಷಾ ನ್ಯಾಯ ಸಂವಾದ' ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಬೇಕಿತ್ತು. ಆದರೆ, ರಾಹುಲ್ ಮತ್ತು ಅವರ ಬೆಂಗಾವಲು ಪಡೆ ಹಾಸ್ಟೆಲ್ ಆವರಣ ಪ್ರವೇಶಿಸುತ್ತಿದ್ದಂತೆ ಪೊಲೀಸರು ತಡೆದಿದ್ದಾರೆ.</p><p>ಅಂಬೇಡ್ಕರ್ ಹಾಸ್ಟೆಲ್ನಲ್ಲಿ ಸಂವಾದ ಕಾರ್ಯಕ್ರಮ ನಡೆಸಲು ಸ್ಥಳೀಯ ಆಡಳಿತ ಅನುಮತಿ ನಿರಾಕರಿಸಿದ್ದಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. </p><p>ಪಕ್ಷದ ನಾಯಕರು ಆಯ್ಕೆ ಮಾಡಿದ ಸ್ಥಳದಲ್ಲೇ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರು ಸಂವಾದ ನಡೆಸಲಿದ್ದಾರೆ. ಬದಲಾಗಿ ಸ್ಥಳೀಯ ಆಡಳಿತವು ಸೂಚಿಸಿದ ಸ್ಥಳದಲ್ಲಿ ಅಲ್ಲ ಎಂದು ಬಿಹಾರ ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಿದ್ದಾರೆ.</p><p>ದರ್ಭಂಗಾದಲ್ಲಿನ ಸ್ಥಳೀಯ ಆಡಳಿತವು ಜೆಡಿ(ಯು)-ಬಿಜೆಪಿ ಸರ್ಕಾರದ ಆಜ್ಞೆಯಂತೆ ಕಾರ್ಯನಿರ್ವಹಿಸುತ್ತಿದೆ. ಪಕ್ಕದ ಜಿಲ್ಲೆಗಳಾದ ಮಧುಬನಿ ಮತ್ತು ಸಮಷ್ಟಿಪುರದಿಂದ ಬರುವ ನೂರಾರು ವಿದ್ಯಾರ್ಥಿಗಳನ್ನು ದರ್ಭಂಗಾ ಪ್ರವೇಶಿಸದಂತೆ ತಡೆಯಲಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಅಭಯ್ ದುಬೆ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದರ್ಭಂಗಾ/ಪಟ್ನಾ:</strong> ಬಿಹಾರದ ದರ್ಭಂಗಾದಲ್ಲಿರುವ ಅಂಬೇಡ್ಕರ್ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ತಡೆದಿದ್ದಾರೆ. </p><p>ರಾಹುಲ್ ಗಾಂಧಿ ಅವರು ‘ಶಿಕ್ಷಾ ನ್ಯಾಯ ಸಂವಾದ' ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಬೇಕಿತ್ತು. ಆದರೆ, ರಾಹುಲ್ ಮತ್ತು ಅವರ ಬೆಂಗಾವಲು ಪಡೆ ಹಾಸ್ಟೆಲ್ ಆವರಣ ಪ್ರವೇಶಿಸುತ್ತಿದ್ದಂತೆ ಪೊಲೀಸರು ತಡೆದಿದ್ದಾರೆ.</p><p>ಅಂಬೇಡ್ಕರ್ ಹಾಸ್ಟೆಲ್ನಲ್ಲಿ ಸಂವಾದ ಕಾರ್ಯಕ್ರಮ ನಡೆಸಲು ಸ್ಥಳೀಯ ಆಡಳಿತ ಅನುಮತಿ ನಿರಾಕರಿಸಿದ್ದಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. </p><p>ಪಕ್ಷದ ನಾಯಕರು ಆಯ್ಕೆ ಮಾಡಿದ ಸ್ಥಳದಲ್ಲೇ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರು ಸಂವಾದ ನಡೆಸಲಿದ್ದಾರೆ. ಬದಲಾಗಿ ಸ್ಥಳೀಯ ಆಡಳಿತವು ಸೂಚಿಸಿದ ಸ್ಥಳದಲ್ಲಿ ಅಲ್ಲ ಎಂದು ಬಿಹಾರ ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಿದ್ದಾರೆ.</p><p>ದರ್ಭಂಗಾದಲ್ಲಿನ ಸ್ಥಳೀಯ ಆಡಳಿತವು ಜೆಡಿ(ಯು)-ಬಿಜೆಪಿ ಸರ್ಕಾರದ ಆಜ್ಞೆಯಂತೆ ಕಾರ್ಯನಿರ್ವಹಿಸುತ್ತಿದೆ. ಪಕ್ಕದ ಜಿಲ್ಲೆಗಳಾದ ಮಧುಬನಿ ಮತ್ತು ಸಮಷ್ಟಿಪುರದಿಂದ ಬರುವ ನೂರಾರು ವಿದ್ಯಾರ್ಥಿಗಳನ್ನು ದರ್ಭಂಗಾ ಪ್ರವೇಶಿಸದಂತೆ ತಡೆಯಲಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಅಭಯ್ ದುಬೆ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>