<p><strong>ಜಮ್ಮು</strong>: ಸತತ ಮೂರನೇ ದಿನವೂ ಜಮ್ಮುವಿನ ಹಲವೆಡೆ ನಿರಂತರ ಮಳೆ ಸುರಿಯುತ್ತಿದ್ದು, ಮಳೆ ಸಂಬಂಧಿತ ಅವಘಡದಲ್ಲಿ ಮಹಿಳೆ ಮತ್ತು ಆಕೆಯ ಮಗ ಸಾವಿಗೀಡಾಗಿದ್ದಾರೆ. ಉಕ್ಕಿ ಹರಿಯುತ್ತಿರುವ ಜಲಮೂಲಗಳಿಂದ 12 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಎತ್ತರದ ಪ್ರದೇಶಗಳಲ್ಲಿ ಭಾರೀ ಹಿಮಪಾತವಾಗುತ್ತಿದ್ದು, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ರಸ್ತೆಗಳ ಸಂಚಾರ ಬಂದ್ ಆಗಿದೆ ಎಂದು ಅವರು ಹೇಳಿದ್ದಾರೆ.</p><p>ಶುಕ್ರವಾರ ಮುಂಜಾನೆ ಉಧಂಪುರ ಜಿಲ್ಲೆಯ ಮೌಂಗಾರಿ ಬಳಿ ಗುಡ್ಡದಿಂದ ಬಂಡೆಯೊಂದು ಉರುಳಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಶಾನೋ ದೇವಿ (50) ಮತ್ತು ಅವರ ಮಗ ರಘು (25) ಸಾವಿಗೀಡಾಗಿದ್ದಾರೆ.</p><p>ಶುಕ್ರವಾರ ಮುಂಜಾನೆ ಕಥುವಾ ಜಿಲ್ಲೆಯ ರಾಜ್ಬಾಗ್ ಪ್ರದೇಶದ ಉಜ್ ನದಿಯಲ್ಲಿ ಸಿಲುಕಿದ್ದ ಕನಿಷ್ಠ 11 ವಲಸೆ ಕಾರ್ಮಿಕರನ್ನು ಪೊಲೀಸ್ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಜಂಟಿ ತಂಡ ರಕ್ಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಕಾಮಗಾರಿ ನಡೆಯುವ ಸ್ಥಳಕ್ಕೆ ಹೊಂದಿಕೊಂಡಂತೆ ಶೆಡ್ನಲ್ಲಿ ಕೂಲಿಕಾರರು ವಾಸ ಮಾಡುತ್ತಿದ್ದು, ನಿರಂತರ ಮಳೆಯಿಂದ ನೀರಿನ ಮಟ್ಟ ಏರಿಕೆಯಾಗಿ ಅವರ ಜೀವಕ್ಕೆ ಅಪಾಯ ಎದುರಾಗಿತ್ತು ಎಂದು ಅವರು ಹೇಳಿದ್ದಾರೆ.</p><p>ಇಂದು ಬೆಳಗ್ಗೆ ಜಮ್ಮುವಿನ ನಿಕಿ ತಾವಿ ಪ್ರದೇಶದಲ್ಲಿ ಪೊಲೀಸರು ಮತ್ತು ಎಸ್ಡಿಆರ್ಎಫ್ ಸಿಬ್ಬಂದಿ ಜಂಟಿ ಕಾರ್ಯಾಚರಣೆಯಲ್ಲಿ ಡಂಪರ್ನ ಚಾಲಕನನ್ನು ರಕ್ಷಿಸಿದ್ದಾರೆ.</p><p>ಮುಂಜಾನೆ 5.40ರ ಸುಮಾರಿಗೆ ತಾವಿ ನದಿಯ ನೀರಲ್ಲಿ ಸಿಲುಕಿದ್ದ ಗೋಲೆ-ಗುಜ್ರಾಲ್ ನಿವಾಸಿ ಚಾಲಕ ಮೋಹನ್ ಲಾಲ್ ಅವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ರಾಮ್ಸೂ ಮತ್ತು ಖಾಜಿಗುಂಡ್ ನಡುವೆ ಹಿಮ ಆವರಿಸಿದ್ದು, ನಶ್ರಿ ಮತ್ತು ಬನಿಹಾಲ್ ನಡುವೆ ವಿವಿಧ ಸ್ಥಳಗಳಲ್ಲಿ ಕಲ್ಲುಗಳು ಉರುಳಿವೆ. ಭೂಕುಸಿತದ ಕಾರಣದಿಂದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆ ಹಾಕಲಾಗಿದೆ.</p><p>ಗುರುವಾರ ಸಂಜೆ 7ಗಂಟೆ ಸುಮಾರಿಗೆ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದ್ದು, ನೂರಾರು ವಾಹನಗಳು ಸಿಲುಕಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು</strong>: ಸತತ ಮೂರನೇ ದಿನವೂ ಜಮ್ಮುವಿನ ಹಲವೆಡೆ ನಿರಂತರ ಮಳೆ ಸುರಿಯುತ್ತಿದ್ದು, ಮಳೆ ಸಂಬಂಧಿತ ಅವಘಡದಲ್ಲಿ ಮಹಿಳೆ ಮತ್ತು ಆಕೆಯ ಮಗ ಸಾವಿಗೀಡಾಗಿದ್ದಾರೆ. ಉಕ್ಕಿ ಹರಿಯುತ್ತಿರುವ ಜಲಮೂಲಗಳಿಂದ 12 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಎತ್ತರದ ಪ್ರದೇಶಗಳಲ್ಲಿ ಭಾರೀ ಹಿಮಪಾತವಾಗುತ್ತಿದ್ದು, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ರಸ್ತೆಗಳ ಸಂಚಾರ ಬಂದ್ ಆಗಿದೆ ಎಂದು ಅವರು ಹೇಳಿದ್ದಾರೆ.</p><p>ಶುಕ್ರವಾರ ಮುಂಜಾನೆ ಉಧಂಪುರ ಜಿಲ್ಲೆಯ ಮೌಂಗಾರಿ ಬಳಿ ಗುಡ್ಡದಿಂದ ಬಂಡೆಯೊಂದು ಉರುಳಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಶಾನೋ ದೇವಿ (50) ಮತ್ತು ಅವರ ಮಗ ರಘು (25) ಸಾವಿಗೀಡಾಗಿದ್ದಾರೆ.</p><p>ಶುಕ್ರವಾರ ಮುಂಜಾನೆ ಕಥುವಾ ಜಿಲ್ಲೆಯ ರಾಜ್ಬಾಗ್ ಪ್ರದೇಶದ ಉಜ್ ನದಿಯಲ್ಲಿ ಸಿಲುಕಿದ್ದ ಕನಿಷ್ಠ 11 ವಲಸೆ ಕಾರ್ಮಿಕರನ್ನು ಪೊಲೀಸ್ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಜಂಟಿ ತಂಡ ರಕ್ಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಕಾಮಗಾರಿ ನಡೆಯುವ ಸ್ಥಳಕ್ಕೆ ಹೊಂದಿಕೊಂಡಂತೆ ಶೆಡ್ನಲ್ಲಿ ಕೂಲಿಕಾರರು ವಾಸ ಮಾಡುತ್ತಿದ್ದು, ನಿರಂತರ ಮಳೆಯಿಂದ ನೀರಿನ ಮಟ್ಟ ಏರಿಕೆಯಾಗಿ ಅವರ ಜೀವಕ್ಕೆ ಅಪಾಯ ಎದುರಾಗಿತ್ತು ಎಂದು ಅವರು ಹೇಳಿದ್ದಾರೆ.</p><p>ಇಂದು ಬೆಳಗ್ಗೆ ಜಮ್ಮುವಿನ ನಿಕಿ ತಾವಿ ಪ್ರದೇಶದಲ್ಲಿ ಪೊಲೀಸರು ಮತ್ತು ಎಸ್ಡಿಆರ್ಎಫ್ ಸಿಬ್ಬಂದಿ ಜಂಟಿ ಕಾರ್ಯಾಚರಣೆಯಲ್ಲಿ ಡಂಪರ್ನ ಚಾಲಕನನ್ನು ರಕ್ಷಿಸಿದ್ದಾರೆ.</p><p>ಮುಂಜಾನೆ 5.40ರ ಸುಮಾರಿಗೆ ತಾವಿ ನದಿಯ ನೀರಲ್ಲಿ ಸಿಲುಕಿದ್ದ ಗೋಲೆ-ಗುಜ್ರಾಲ್ ನಿವಾಸಿ ಚಾಲಕ ಮೋಹನ್ ಲಾಲ್ ಅವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ರಾಮ್ಸೂ ಮತ್ತು ಖಾಜಿಗುಂಡ್ ನಡುವೆ ಹಿಮ ಆವರಿಸಿದ್ದು, ನಶ್ರಿ ಮತ್ತು ಬನಿಹಾಲ್ ನಡುವೆ ವಿವಿಧ ಸ್ಥಳಗಳಲ್ಲಿ ಕಲ್ಲುಗಳು ಉರುಳಿವೆ. ಭೂಕುಸಿತದ ಕಾರಣದಿಂದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆ ಹಾಕಲಾಗಿದೆ.</p><p>ಗುರುವಾರ ಸಂಜೆ 7ಗಂಟೆ ಸುಮಾರಿಗೆ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದ್ದು, ನೂರಾರು ವಾಹನಗಳು ಸಿಲುಕಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>