ಶಿಕ್ಷಕ ವೃತ್ತಿಯಿಂದ ರಾಜ್ಯಸಭೆಗೆ
ಶಿಕ್ಷಕರಾಗಿ ವೃತ್ತಿ ಆರಂಭಿಸಿ ನಂತರ ರಾಜಕೀಯ ಪ್ರವೇಶಿಸಿರುವ ಸಿ.ಸದಾನಂದನ್ ಕೇರಳ ಬಿಜೆಪಿಯ ಪ್ರಮುಖ ನಾಯಕ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ನಾಯಕರು ಸ್ಥಾಪಿಸಿರುವ ‘ಭಾರತೀಯ ವಿಚಾರ ಕೇಂದ್ರಂ’ ನಡಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. 1994ರಲ್ಲಿ ಸಿಪಿಎಂ ಕಾರ್ಯಕರ್ತರು ನಡೆಸಿದ ಹಲ್ಲೆಯಲ್ಲಿ ಸದಾನಂದನ್ ಅವರು ಎರಡೂ ಕಾಲುಗಳನ್ನು ಕಳೆದುಕೊಂಡಿದ್ದಾರೆ.