<p><strong>ಕೋಲ್ಕತ್ತ:</strong> ಇಲ್ಲಿನ ಕೆ.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಸಿನಿಮಾ ನಿರ್ದೇಶಕರಾದ ಅಪರ್ಣಾ ಸೇನ್ ಸೇರಿದಂತೆ ಬಂಗಾಳಿ ಚಿತ್ರ ರಂಗದ ಹಲವು ಪ್ರಮುಖರು ಭಾನುವಾರ ಪ್ರತಿಭಟನೆಯಲ್ಲಿ ಪಾಲ್ಗೊಂಡರು.</p>.<p>ಸಂತ್ರಸ್ತೆ ಮತ್ತು ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಕಾರರರು ಆಗ್ರಹಿಸಿದರು.</p>.<p>ಘಟನೆ ಖಂಡಿಸಿ ನಗರದಲ್ಲಿ ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ಪ್ರತಿಭಟನೆ, ರ್ಯಾಲಿಗಳನ್ನು ನಡೆಸಿದವು. ಒಂದೆಡೆ ‘ಮಹಾಮಿಚಿಲ್’ ಪ್ರತಿಭಟನೆ ನಡೆದರೆ, ರಾಮಕೃಷ್ಣ ಮಿಷನ್ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳ ಹಳೆ ವಿದ್ಯಾರ್ಥಿಗಳು ಮತ್ತೊಂದೆಡೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಲೇಜಿನ ಚೌಕದಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಅಪರ್ಣಾ ಸೇನ್, ಕಲಾವಿದರಾದ ಸ್ವಸ್ತಿಕಾ ಮುಖರ್ಜಿ, ಸುದೀಪ್ತ ಚಕ್ರವರ್ತಿ, ಚೈತಿ ಘೋಸಲ್, ಸೋಹಿನಿ ಸರ್ಕಾರ್ ಸೇರಿದಂತೆ ಹಲವರು ಪಾಲ್ಗೊಂಡು, ಟ್ರೈನಿ ವೈದ್ಯಕೀಯ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು. </p>.<p>‘ನಾವು ನ್ಯಾಯಕ್ಕಾಗಿ ರಸ್ತೆಗೆ ಇಳಿದಿದ್ದೇವೆ. ಅಗತ್ಯವಿದ್ದರೆ ಮತ್ತೊಮ್ಮೆ ರಸ್ತೆಗೆ ಇಳಿಯುತ್ತೇವೆ’ ಎಂದು ಸೇನ್ ಹೇಳಿದರು.</p>.<p>‘ಆಗಸ್ಟ್ 9ರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಕೇವಲ ಒಬ್ಬರನ್ನು ಬಂಧಿಸಲಾಗಿದೆ. ತನಿಖೆಯ ಪ್ರಗತಿ ಕುರಿತು ಯಾವುದೇ ಮಾಹಿತಿ ಲಭ್ಯವಿಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕಿರಿಯ ವೈದ್ಯರ ವೇದಿಕೆಯ ಸದಸ್ಯರು ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು. ರಾಮಕೃಷ್ಣ ಮಿಷನ್ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳ ಹಳೆ ವಿದ್ಯಾರ್ಥಿಗಳು ಕಪ್ಪುಬಟ್ಟೆ ಧರಿಸಿ, ಶಂಖ ಊದಿ ಪ್ರತಿಭಟಿಸಿದರು. </p>.<p>ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರೂ ಪ್ರತಿಭಟಿಸಿದರು. ಆಗಸ್ಟ್ 29ರಿಂದ ಧರಣಿ ನಡೆಸುತ್ತಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರು ಭಾನುವಾರವೂ ಮುಂದುವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಇಲ್ಲಿನ ಕೆ.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಸಿನಿಮಾ ನಿರ್ದೇಶಕರಾದ ಅಪರ್ಣಾ ಸೇನ್ ಸೇರಿದಂತೆ ಬಂಗಾಳಿ ಚಿತ್ರ ರಂಗದ ಹಲವು ಪ್ರಮುಖರು ಭಾನುವಾರ ಪ್ರತಿಭಟನೆಯಲ್ಲಿ ಪಾಲ್ಗೊಂಡರು.</p>.<p>ಸಂತ್ರಸ್ತೆ ಮತ್ತು ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಕಾರರರು ಆಗ್ರಹಿಸಿದರು.</p>.<p>ಘಟನೆ ಖಂಡಿಸಿ ನಗರದಲ್ಲಿ ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ಪ್ರತಿಭಟನೆ, ರ್ಯಾಲಿಗಳನ್ನು ನಡೆಸಿದವು. ಒಂದೆಡೆ ‘ಮಹಾಮಿಚಿಲ್’ ಪ್ರತಿಭಟನೆ ನಡೆದರೆ, ರಾಮಕೃಷ್ಣ ಮಿಷನ್ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳ ಹಳೆ ವಿದ್ಯಾರ್ಥಿಗಳು ಮತ್ತೊಂದೆಡೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಲೇಜಿನ ಚೌಕದಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಅಪರ್ಣಾ ಸೇನ್, ಕಲಾವಿದರಾದ ಸ್ವಸ್ತಿಕಾ ಮುಖರ್ಜಿ, ಸುದೀಪ್ತ ಚಕ್ರವರ್ತಿ, ಚೈತಿ ಘೋಸಲ್, ಸೋಹಿನಿ ಸರ್ಕಾರ್ ಸೇರಿದಂತೆ ಹಲವರು ಪಾಲ್ಗೊಂಡು, ಟ್ರೈನಿ ವೈದ್ಯಕೀಯ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು. </p>.<p>‘ನಾವು ನ್ಯಾಯಕ್ಕಾಗಿ ರಸ್ತೆಗೆ ಇಳಿದಿದ್ದೇವೆ. ಅಗತ್ಯವಿದ್ದರೆ ಮತ್ತೊಮ್ಮೆ ರಸ್ತೆಗೆ ಇಳಿಯುತ್ತೇವೆ’ ಎಂದು ಸೇನ್ ಹೇಳಿದರು.</p>.<p>‘ಆಗಸ್ಟ್ 9ರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಕೇವಲ ಒಬ್ಬರನ್ನು ಬಂಧಿಸಲಾಗಿದೆ. ತನಿಖೆಯ ಪ್ರಗತಿ ಕುರಿತು ಯಾವುದೇ ಮಾಹಿತಿ ಲಭ್ಯವಿಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕಿರಿಯ ವೈದ್ಯರ ವೇದಿಕೆಯ ಸದಸ್ಯರು ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು. ರಾಮಕೃಷ್ಣ ಮಿಷನ್ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳ ಹಳೆ ವಿದ್ಯಾರ್ಥಿಗಳು ಕಪ್ಪುಬಟ್ಟೆ ಧರಿಸಿ, ಶಂಖ ಊದಿ ಪ್ರತಿಭಟಿಸಿದರು. </p>.<p>ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರೂ ಪ್ರತಿಭಟಿಸಿದರು. ಆಗಸ್ಟ್ 29ರಿಂದ ಧರಣಿ ನಡೆಸುತ್ತಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರು ಭಾನುವಾರವೂ ಮುಂದುವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>