<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿಯಲ್ಲಿರುವ ಕೆಂಪು ಕೋಟೆ ಬಳಿ ಕಳೆದ ವರ್ಷ ನಡೆದ ಸ್ಫೋಟ ಪ್ರಕರಣದ ತನಿಖೆ ಪೂರ್ಣಗೊಳಿಸಲು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ದೆಹಲಿ ನ್ಯಾಯಾಲಯವು ಶುಕ್ರವಾರ ಹೆಚ್ಚುವರಿಯಾಗಿ 45 ದಿನಗಳ ಕಾಲಾವಕಾಶ ನೀಡಿದೆ. </p><p>ಆರೋಪಿಗಳಿಗೆ ಹಣಕಾಸು ನೆರವು ಹಾಗೂ ಅವರು ಹೊಂದಿರುವ ಡಿಜಿಟಲ್ ಸಂಪರ್ಕದ ಕುರಿತು ವಿಸ್ತೃತ ತನಿಖೆ ಕೈಗೊಳ್ಳಲು ಕಾಲಾವಕಾಶವನ್ನು 90 ದಿನಗಳವರೆಗೆ ವಿಸ್ತರಿಸಬೇಕು ಎಂದು ಪಟಿಯಾಲ ನ್ಯಾಯಾಲಯಕ್ಕೆ ಎನ್ಐಎ ಮನವಿ ಮಾಡಿತ್ತು. ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶ ಪಿತಾಂಬರ್ ದತ್ ಅವರು ಹೆಚ್ಚುವರಿ ಸಮಯ ನೀಡಿದ್ದಾರೆ.</p><p>ಪ್ರಕರಣದ ಏಳು ಆರೋಪಿಗಳಾದ ಅಮಿರ್ ರಶೀದ್ ಮಿರ್, ಜಸೀರ್ ಬಿಲಾಲ್ ವಾನಿ, ಮುಫ್ತಿ ಇರ್ಫಾನ್ ಅಹ್ಮದ್ ವಾಘೇ, ಡಾ. ಮುಝಾಮಿಲ್ ಶಕೀಲ್ ಘನೀ, ಡಾ. ಆದೀಲ್ ಅಹ್ಮದ್ ರಾಥಾರ್, ಡಾ. ಶಾಹೀನ್ ಸಯೀದ್ ಮತ್ತು ಸೋಯಬ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನೂ ಮಾರ್ಚ್ 13ರ ವರೆಗೆ ವಿಸ್ತರಿಸಲಾಗಿದೆ.</p><p>ವಿಚಾರಣೆ ಸಂದರ್ಭದಲ್ಲಿ ಸೋಯಬ್ ಎಂಬಾತನನ್ನು ಮಾತ್ರವೇ ಕೋರ್ಟ್ಗೆ ಹಾಜರುಪಡಿಸಲಾಗಿದೆ. ಉಳಿದವರು, ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಿದ್ದರು.</p><p>ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) ನಿಯಮಗಳಿಗೆ ಅನುಸಾರವಾಗಿ, ಪ್ರಕರಣದ ತನಿಖೆಯ ಸಮಯವನ್ನು 90 ದಿನಗಳ ಶಾಸನಬದ್ಧ ಅವಧಿಯ ಜೊತೆಗೆ ಮತ್ತೆ 90 ದಿನಗಳ ವರೆಗೆ (ಒಟ್ಟು 180 ದಿನಕ್ಕೆ) ವಿಸ್ತರಿಸಬೇಕು ಎಂದು ತನಿಖಾ ಸಂಸ್ಥೆ ಮನವಿ ಮಾಡಿತ್ತು.</p><p>ಉಮರ್ ಮೊಹಮ್ಮದ್ ಅಲಿಯಾಸ್ ಉಮರ್ ನಬಿ ಎಂಬಾತ 2025ರ ನವೆಂಬರ್ 10ರಂದು ಚಲಾಯಿಸುತ್ತಿದ್ದ ಹುಂಡೈ ಐ20 ಕಾರು, ಕೆಂಪು ಕೋಟೆ ಬಳಿ ಸ್ಫೋಟಗೊಂಡು 15 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.</p>.ದೆಹಲಿ ಸ್ಫೋಟ: ಕಾರು ಓಡಿಸಿದ್ದ ವ್ಯಕ್ತಿಗೆ ಅಕ್ರಮವಾಗಿ ₹20 ಲಕ್ಷ ಸಂದಾಯ; ವರದಿ.ದೆಹಲಿ ಸ್ಫೋಟ: ಪ್ರಮುಖ ಸಂಚುಕೋರನ ಬಂಧಿಸಿದ ಎನ್ಐಎ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿಯಲ್ಲಿರುವ ಕೆಂಪು ಕೋಟೆ ಬಳಿ ಕಳೆದ ವರ್ಷ ನಡೆದ ಸ್ಫೋಟ ಪ್ರಕರಣದ ತನಿಖೆ ಪೂರ್ಣಗೊಳಿಸಲು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ದೆಹಲಿ ನ್ಯಾಯಾಲಯವು ಶುಕ್ರವಾರ ಹೆಚ್ಚುವರಿಯಾಗಿ 45 ದಿನಗಳ ಕಾಲಾವಕಾಶ ನೀಡಿದೆ. </p><p>ಆರೋಪಿಗಳಿಗೆ ಹಣಕಾಸು ನೆರವು ಹಾಗೂ ಅವರು ಹೊಂದಿರುವ ಡಿಜಿಟಲ್ ಸಂಪರ್ಕದ ಕುರಿತು ವಿಸ್ತೃತ ತನಿಖೆ ಕೈಗೊಳ್ಳಲು ಕಾಲಾವಕಾಶವನ್ನು 90 ದಿನಗಳವರೆಗೆ ವಿಸ್ತರಿಸಬೇಕು ಎಂದು ಪಟಿಯಾಲ ನ್ಯಾಯಾಲಯಕ್ಕೆ ಎನ್ಐಎ ಮನವಿ ಮಾಡಿತ್ತು. ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶ ಪಿತಾಂಬರ್ ದತ್ ಅವರು ಹೆಚ್ಚುವರಿ ಸಮಯ ನೀಡಿದ್ದಾರೆ.</p><p>ಪ್ರಕರಣದ ಏಳು ಆರೋಪಿಗಳಾದ ಅಮಿರ್ ರಶೀದ್ ಮಿರ್, ಜಸೀರ್ ಬಿಲಾಲ್ ವಾನಿ, ಮುಫ್ತಿ ಇರ್ಫಾನ್ ಅಹ್ಮದ್ ವಾಘೇ, ಡಾ. ಮುಝಾಮಿಲ್ ಶಕೀಲ್ ಘನೀ, ಡಾ. ಆದೀಲ್ ಅಹ್ಮದ್ ರಾಥಾರ್, ಡಾ. ಶಾಹೀನ್ ಸಯೀದ್ ಮತ್ತು ಸೋಯಬ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನೂ ಮಾರ್ಚ್ 13ರ ವರೆಗೆ ವಿಸ್ತರಿಸಲಾಗಿದೆ.</p><p>ವಿಚಾರಣೆ ಸಂದರ್ಭದಲ್ಲಿ ಸೋಯಬ್ ಎಂಬಾತನನ್ನು ಮಾತ್ರವೇ ಕೋರ್ಟ್ಗೆ ಹಾಜರುಪಡಿಸಲಾಗಿದೆ. ಉಳಿದವರು, ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಿದ್ದರು.</p><p>ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) ನಿಯಮಗಳಿಗೆ ಅನುಸಾರವಾಗಿ, ಪ್ರಕರಣದ ತನಿಖೆಯ ಸಮಯವನ್ನು 90 ದಿನಗಳ ಶಾಸನಬದ್ಧ ಅವಧಿಯ ಜೊತೆಗೆ ಮತ್ತೆ 90 ದಿನಗಳ ವರೆಗೆ (ಒಟ್ಟು 180 ದಿನಕ್ಕೆ) ವಿಸ್ತರಿಸಬೇಕು ಎಂದು ತನಿಖಾ ಸಂಸ್ಥೆ ಮನವಿ ಮಾಡಿತ್ತು.</p><p>ಉಮರ್ ಮೊಹಮ್ಮದ್ ಅಲಿಯಾಸ್ ಉಮರ್ ನಬಿ ಎಂಬಾತ 2025ರ ನವೆಂಬರ್ 10ರಂದು ಚಲಾಯಿಸುತ್ತಿದ್ದ ಹುಂಡೈ ಐ20 ಕಾರು, ಕೆಂಪು ಕೋಟೆ ಬಳಿ ಸ್ಫೋಟಗೊಂಡು 15 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.</p>.ದೆಹಲಿ ಸ್ಫೋಟ: ಕಾರು ಓಡಿಸಿದ್ದ ವ್ಯಕ್ತಿಗೆ ಅಕ್ರಮವಾಗಿ ₹20 ಲಕ್ಷ ಸಂದಾಯ; ವರದಿ.ದೆಹಲಿ ಸ್ಫೋಟ: ಪ್ರಮುಖ ಸಂಚುಕೋರನ ಬಂಧಿಸಿದ ಎನ್ಐಎ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>