<p><strong>ಅಮರಾವತಿ (ಮಹಾರಾಷ್ಟ್ರ):</strong> ಅಮರಾವತಿಯಲ್ಲಿ ಅಕ್ಟೋಬರ್ 5ರಂದು ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ( ಆರ್ಎಸ್ಎಸ್ ) ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ತಾಯಿ ಕಮಲಾತೈ ಬುಧವಾರ ಸ್ಪಷ್ಟಪಡಿಸಿದ್ದಾರೆ.</p>.<p>ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಕಮಲಾತೈ ಅವರನ್ನು ಆರ್ಎಸ್ಎಸ್ ಆಹ್ವಾನಿಸಿತ್ತು. ಆದರೆ ಸುದ್ದಿ ಸೃಷ್ಟಿಸಿದ ವಿವಾದ ಮತ್ತು ಆರೋಪಗಳನ್ನು ಗಮನದಲ್ಲಿಟ್ಟುಕೊಂಡು ಮುಖ್ಯ ಅತಿಥಿಯಾಗಿ ಕಾರ್ಯಕ್ರಮಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾಗಿ ಅವರು ಬಹಿರಂಗ ಪತ್ರದ ಮೂಲಕ ತಿಳಿಸಿದ್ದಾರೆ.</p>.<p>ಅಕ್ಟೋಬರ್ 5ರ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದರು. ಈ ಸುದ್ದಿ ಪ್ರಕಟವಾಗುತ್ತಿದ್ದಂತೆ ಅನೇಕರು ನನ್ನನ್ನು ಟೀಕಿಸುವುದಲ್ಲದೇ, ನನ್ನ ಪತಿ, ದಾದಾಸಾಹೇಬ್ ಗವಾಯಿ ಎಂದೇ ಜನಪ್ರಿಯರಾಗಿರುವ ಆರ್.ಎಸ್. ಗವಾಯಿ (ಬಿಹಾರದ ಮಾಜಿ ರಾಜ್ಯಪಾಲ) ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಹೊರಿಸಲು ಆರಂಭಿಸಿದರು.</p>.<p>ನಾವು ಅಂಬೇಡ್ಕರ್ ಅವರ ಸಿದ್ಧಾಂತದ ಪ್ರಕಾರ ಜೀವನ ನಡೆಸಿದ್ದೇವೆ. ದಾದಾಸಾಹೇಬ್ ಗವಾಯಿ ಅವರು ಅಂಬೇಡ್ಕರ್ ಚಳವಳಿಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ವಿಭಿನ್ನ ಸಿದ್ಧಾಂತಗಳ ವೇದಿಕೆಯಲ್ಲಿ ನಮ್ಮ ಸಿದ್ಧಾಂತವನ್ನು ಹಂಚಿಕೊಳ್ಳುವುದು ಸಹ ಮುಖ್ಯವಾಗಿದೆ. ಅದಕ್ಕೆ ಧೈರ್ಯ ಬೇಕು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.</p>.<p>ಅಂಬೇಡ್ಕರ್ ಅವರ ಅಭಿಪ್ರಾಯಗಳನ್ನು ಹರಡಲು ವಿವಿಧ ಸಂಸ್ಥೆಗಳು ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಅವರು (ಆರ್.ಎಸ್. ಗವಾಯಿ) ಭಾಗವಹಿಸುತ್ತಿದ್ದರು. ಅಲ್ಲಿ ವಂಚಿತ ವರ್ಗಗಳ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದರು. ಆರ್ಎಸ್ಎಸ್ ಕಾರ್ಯಕ್ರಮಗಳಲ್ಲಿಯೂ ಅವರು ಭಾಗವಹಿಸಿದ್ದರು. ಆದರೆ ಎಂದಿಗೂ ಹಿಂದುತ್ವವನ್ನು ಸ್ವೀಕರಿಸಲಿಲ್ಲ ಎಂದು ಹೇಳಿದ್ದಾರೆ.</p>.<p>ನಾನು ಅಕ್ಟೋಬರ್ 5ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೆ, ಅಂಬೇಡ್ಕರ್ ಅವರ ವಿಚಾರಗಳನ್ನು ಮಂಡಿಸುತ್ತಿದ್ದೆ ಎಂದೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>ಆದರೆ ದಿ.ಪತಿಯ ವಿರುದ್ಧ ಆರೋಪಗಳ ಸುರಿಮಳೆ ಬಂದಾಗ ಹಾಗೂ ಒಂದು ಕಾರ್ಯಕ್ರಮದ ಕಾರಣದಿಂದಾಗಿ ಅವರ ವಿರುದ್ಧ ಅಪಪ್ರಚಾರ ಮಾಡಲು ಯತ್ನಗಳು ನಡೆದಾಗ ಬೇಸರದಿಂದ ಕಾರ್ಯಕ್ರಮಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾಗಿ ಅವರು ತಿಳಿಸಿದ್ದಾರೆ.</p>.<p>1925ರಲ್ಲಿ ವಿಜಯದಶಮಿಯಂದು ಸ್ಥಾಪನೆಯಾದ ಆರ್ಎಸ್ಎಸ್, ತನ್ನ ಶತಮಾನೋತ್ಸವ ವರ್ಷವನ್ನು ಗುರುತಿಸಲು ದೇಶದಾದ್ಯಂತ ಒಂದು ಲಕ್ಷ ಹಿಂದೂ ಸಮ್ಮೇಳನಗಳು ಹಾಗೂ ಸಾವಿರಾರು ಚರ್ಚೆ, ಸಭೆಗಳು ಸೇರಿದಂತೆ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಿದೆ.</p> .ಆರ್ಎಸ್ಎಸ್ ವಿಜಯದಶಮಿ ಕಾರ್ಯಕ್ರಮಕ್ಕೆ ಸಿಜೆಐ ಗವಾಯಿ ತಾಯಿಗೆ ಆಹ್ವಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ (ಮಹಾರಾಷ್ಟ್ರ):</strong> ಅಮರಾವತಿಯಲ್ಲಿ ಅಕ್ಟೋಬರ್ 5ರಂದು ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ( ಆರ್ಎಸ್ಎಸ್ ) ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ತಾಯಿ ಕಮಲಾತೈ ಬುಧವಾರ ಸ್ಪಷ್ಟಪಡಿಸಿದ್ದಾರೆ.</p>.<p>ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಕಮಲಾತೈ ಅವರನ್ನು ಆರ್ಎಸ್ಎಸ್ ಆಹ್ವಾನಿಸಿತ್ತು. ಆದರೆ ಸುದ್ದಿ ಸೃಷ್ಟಿಸಿದ ವಿವಾದ ಮತ್ತು ಆರೋಪಗಳನ್ನು ಗಮನದಲ್ಲಿಟ್ಟುಕೊಂಡು ಮುಖ್ಯ ಅತಿಥಿಯಾಗಿ ಕಾರ್ಯಕ್ರಮಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾಗಿ ಅವರು ಬಹಿರಂಗ ಪತ್ರದ ಮೂಲಕ ತಿಳಿಸಿದ್ದಾರೆ.</p>.<p>ಅಕ್ಟೋಬರ್ 5ರ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದರು. ಈ ಸುದ್ದಿ ಪ್ರಕಟವಾಗುತ್ತಿದ್ದಂತೆ ಅನೇಕರು ನನ್ನನ್ನು ಟೀಕಿಸುವುದಲ್ಲದೇ, ನನ್ನ ಪತಿ, ದಾದಾಸಾಹೇಬ್ ಗವಾಯಿ ಎಂದೇ ಜನಪ್ರಿಯರಾಗಿರುವ ಆರ್.ಎಸ್. ಗವಾಯಿ (ಬಿಹಾರದ ಮಾಜಿ ರಾಜ್ಯಪಾಲ) ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಹೊರಿಸಲು ಆರಂಭಿಸಿದರು.</p>.<p>ನಾವು ಅಂಬೇಡ್ಕರ್ ಅವರ ಸಿದ್ಧಾಂತದ ಪ್ರಕಾರ ಜೀವನ ನಡೆಸಿದ್ದೇವೆ. ದಾದಾಸಾಹೇಬ್ ಗವಾಯಿ ಅವರು ಅಂಬೇಡ್ಕರ್ ಚಳವಳಿಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ವಿಭಿನ್ನ ಸಿದ್ಧಾಂತಗಳ ವೇದಿಕೆಯಲ್ಲಿ ನಮ್ಮ ಸಿದ್ಧಾಂತವನ್ನು ಹಂಚಿಕೊಳ್ಳುವುದು ಸಹ ಮುಖ್ಯವಾಗಿದೆ. ಅದಕ್ಕೆ ಧೈರ್ಯ ಬೇಕು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.</p>.<p>ಅಂಬೇಡ್ಕರ್ ಅವರ ಅಭಿಪ್ರಾಯಗಳನ್ನು ಹರಡಲು ವಿವಿಧ ಸಂಸ್ಥೆಗಳು ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಅವರು (ಆರ್.ಎಸ್. ಗವಾಯಿ) ಭಾಗವಹಿಸುತ್ತಿದ್ದರು. ಅಲ್ಲಿ ವಂಚಿತ ವರ್ಗಗಳ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದರು. ಆರ್ಎಸ್ಎಸ್ ಕಾರ್ಯಕ್ರಮಗಳಲ್ಲಿಯೂ ಅವರು ಭಾಗವಹಿಸಿದ್ದರು. ಆದರೆ ಎಂದಿಗೂ ಹಿಂದುತ್ವವನ್ನು ಸ್ವೀಕರಿಸಲಿಲ್ಲ ಎಂದು ಹೇಳಿದ್ದಾರೆ.</p>.<p>ನಾನು ಅಕ್ಟೋಬರ್ 5ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೆ, ಅಂಬೇಡ್ಕರ್ ಅವರ ವಿಚಾರಗಳನ್ನು ಮಂಡಿಸುತ್ತಿದ್ದೆ ಎಂದೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>ಆದರೆ ದಿ.ಪತಿಯ ವಿರುದ್ಧ ಆರೋಪಗಳ ಸುರಿಮಳೆ ಬಂದಾಗ ಹಾಗೂ ಒಂದು ಕಾರ್ಯಕ್ರಮದ ಕಾರಣದಿಂದಾಗಿ ಅವರ ವಿರುದ್ಧ ಅಪಪ್ರಚಾರ ಮಾಡಲು ಯತ್ನಗಳು ನಡೆದಾಗ ಬೇಸರದಿಂದ ಕಾರ್ಯಕ್ರಮಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾಗಿ ಅವರು ತಿಳಿಸಿದ್ದಾರೆ.</p>.<p>1925ರಲ್ಲಿ ವಿಜಯದಶಮಿಯಂದು ಸ್ಥಾಪನೆಯಾದ ಆರ್ಎಸ್ಎಸ್, ತನ್ನ ಶತಮಾನೋತ್ಸವ ವರ್ಷವನ್ನು ಗುರುತಿಸಲು ದೇಶದಾದ್ಯಂತ ಒಂದು ಲಕ್ಷ ಹಿಂದೂ ಸಮ್ಮೇಳನಗಳು ಹಾಗೂ ಸಾವಿರಾರು ಚರ್ಚೆ, ಸಭೆಗಳು ಸೇರಿದಂತೆ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಿದೆ.</p> .ಆರ್ಎಸ್ಎಸ್ ವಿಜಯದಶಮಿ ಕಾರ್ಯಕ್ರಮಕ್ಕೆ ಸಿಜೆಐ ಗವಾಯಿ ತಾಯಿಗೆ ಆಹ್ವಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>