<p><strong>ಅಹಮದಾಬಾದ್</strong>: ಏರ್ ಇಂಡಿಯಾ ವಿಮಾನ ಪತನಗೊಂಡು ಮೃತಪಟ್ಟಿರುವ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ ರೂಪಾನಿ ಅವರು ಶಾಂತ ಸ್ವಭಾವ ಹಾಗೂ ಸಮಾಧಾನದಿಂದ ಕೂಡಿದ ವರ್ತನೆಗೆ ಹೆಸರಾಗಿದ್ದರು.</p>.<p>2016ರ ಆಗಸ್ಟ್ನಿಂದ 2021ರ ಸೆಪ್ಟೆಂಬರ್ವರೆಗೆ ಮುಖ್ಯಮಂತ್ರಿಯಾಗಿದ್ದ ಅವರು, ಆಡಳಿತದ ಮೇಲೆ ಪ್ರಬಲ ಹಿಡಿತ ಹೊಂದಿದ್ದರು. ಕೋವಿಡ್–19 ಪಿಡುಗಿನಿಂದ ರಾಜ್ಯವು ಚೇತರಿಸಿಕೊಳ್ಳುತ್ತಿದ್ದ ಸಮಯದಲ್ಲಿ ಅವರು ಸರ್ಕಾರದ ನೇತೃತ್ವ ವಹಿಸಿದ್ದರು. ಆ ಕ್ಲಿಷ್ಟಕರ ಸಂದರ್ಭವನ್ನು ನಿಭಾಯಿಸುವ ಮೂಲಕ ರೂಪಾನಿ ಗಮನ ಸೆಳೆದಿದ್ದರು.</p>.<p>ಕಾಲೇಜು ದಿನಗಳಲ್ಲಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ(ಎಬಿವಿಪಿ) ಸಕ್ರಿಯ ಕಾರ್ಯಕರ್ತರಾಗಿದ್ದ ಅವರು, ಹಲವು ಹೋರಾಟಗಳನ್ನು ಸಂಘಟಿಸುವ ಮೂಲಕ ವಿದ್ಯಾರ್ಥಿ ನಾಯಕರಾಗಿ ಹೊರಹೊಮ್ಮಿದ್ದರು. ತುರ್ತು ಪರಿಸ್ಥಿತಿ ವಿರೋಧಿ ಚಳವಳಿಯಲ್ಲಿ ಪಾಲ್ಗೊಂಡಿದ್ದಕ್ಕಾಗಿ 1975ರಲ್ಲಿ ಅವರನ್ನು ಒಂದು ವರ್ಷ ಭಾವನಗರ ಜೈಲಿನಲ್ಲಿ ಇರಿಸಲಾಗಿತ್ತು.</p>.<p>1987ರಲ್ಲಿ ರಾಜಕೀಯಕ್ಕೆ ಪದಾರ್ಪಣೆ ಮಾಡಿದ್ದ ಅವರು, ರಾಜ್ ನಗರ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದರು. ನಂತರ, ಮೇಯರ್ ಆಗಿಯೂ ಕಾರ್ಯನಿರ್ವಹಿಸಿದ್ದರು. 2006 ಹಾಗೂ 2012 ನಡುವೆ ರಾಜ್ಯಸಭಾ ಸಂಸದರಾಗಿದ್ದರು. </p>.<p>ಗುಜರಾತ್ ಮುಖ್ಯಮಂತ್ರಿಯಾಗಿದ್ಧಾಗ, ರೂಪಾನಿ ಅವರು 2020ರಲ್ಲಿ ನೂತನ ಕೈಗಾರಿಕೆ ನೀತಿ ಜಾರಿಗೊಳಿಸಿದ್ದರು. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದ ವೇಳೆ, 2021ರ ಸೆಪ್ಟೆಂಬರ್ನಲ್ಲಿ ಅಧಿಕಾರ ತ್ಯಜಿಸಿದ್ದರು. ಆಗ, ಭೂಪೇಂದ್ರ ಪಟೇಲ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್</strong>: ಏರ್ ಇಂಡಿಯಾ ವಿಮಾನ ಪತನಗೊಂಡು ಮೃತಪಟ್ಟಿರುವ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ ರೂಪಾನಿ ಅವರು ಶಾಂತ ಸ್ವಭಾವ ಹಾಗೂ ಸಮಾಧಾನದಿಂದ ಕೂಡಿದ ವರ್ತನೆಗೆ ಹೆಸರಾಗಿದ್ದರು.</p>.<p>2016ರ ಆಗಸ್ಟ್ನಿಂದ 2021ರ ಸೆಪ್ಟೆಂಬರ್ವರೆಗೆ ಮುಖ್ಯಮಂತ್ರಿಯಾಗಿದ್ದ ಅವರು, ಆಡಳಿತದ ಮೇಲೆ ಪ್ರಬಲ ಹಿಡಿತ ಹೊಂದಿದ್ದರು. ಕೋವಿಡ್–19 ಪಿಡುಗಿನಿಂದ ರಾಜ್ಯವು ಚೇತರಿಸಿಕೊಳ್ಳುತ್ತಿದ್ದ ಸಮಯದಲ್ಲಿ ಅವರು ಸರ್ಕಾರದ ನೇತೃತ್ವ ವಹಿಸಿದ್ದರು. ಆ ಕ್ಲಿಷ್ಟಕರ ಸಂದರ್ಭವನ್ನು ನಿಭಾಯಿಸುವ ಮೂಲಕ ರೂಪಾನಿ ಗಮನ ಸೆಳೆದಿದ್ದರು.</p>.<p>ಕಾಲೇಜು ದಿನಗಳಲ್ಲಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ(ಎಬಿವಿಪಿ) ಸಕ್ರಿಯ ಕಾರ್ಯಕರ್ತರಾಗಿದ್ದ ಅವರು, ಹಲವು ಹೋರಾಟಗಳನ್ನು ಸಂಘಟಿಸುವ ಮೂಲಕ ವಿದ್ಯಾರ್ಥಿ ನಾಯಕರಾಗಿ ಹೊರಹೊಮ್ಮಿದ್ದರು. ತುರ್ತು ಪರಿಸ್ಥಿತಿ ವಿರೋಧಿ ಚಳವಳಿಯಲ್ಲಿ ಪಾಲ್ಗೊಂಡಿದ್ದಕ್ಕಾಗಿ 1975ರಲ್ಲಿ ಅವರನ್ನು ಒಂದು ವರ್ಷ ಭಾವನಗರ ಜೈಲಿನಲ್ಲಿ ಇರಿಸಲಾಗಿತ್ತು.</p>.<p>1987ರಲ್ಲಿ ರಾಜಕೀಯಕ್ಕೆ ಪದಾರ್ಪಣೆ ಮಾಡಿದ್ದ ಅವರು, ರಾಜ್ ನಗರ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದರು. ನಂತರ, ಮೇಯರ್ ಆಗಿಯೂ ಕಾರ್ಯನಿರ್ವಹಿಸಿದ್ದರು. 2006 ಹಾಗೂ 2012 ನಡುವೆ ರಾಜ್ಯಸಭಾ ಸಂಸದರಾಗಿದ್ದರು. </p>.<p>ಗುಜರಾತ್ ಮುಖ್ಯಮಂತ್ರಿಯಾಗಿದ್ಧಾಗ, ರೂಪಾನಿ ಅವರು 2020ರಲ್ಲಿ ನೂತನ ಕೈಗಾರಿಕೆ ನೀತಿ ಜಾರಿಗೊಳಿಸಿದ್ದರು. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದ ವೇಳೆ, 2021ರ ಸೆಪ್ಟೆಂಬರ್ನಲ್ಲಿ ಅಧಿಕಾರ ತ್ಯಜಿಸಿದ್ದರು. ಆಗ, ಭೂಪೇಂದ್ರ ಪಟೇಲ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>