<p><strong>ಮುಂಬೈ:</strong> ಚಾಕು ಇರಿತದಿಂದ ಚೇತರಿಸಿಕೊಂಡು ಐದು ದಿನಗಳ ಬಳಿಕ ಆಸ್ಪತ್ರೆಯಿಂದ ಮನೆಗೆ ವಾಪಾಸ್ಸಾಗಿರುವ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರನ್ನು ‘ಕಸ’ಕ್ಕೆ ಹೋಲಿಕೆ ಮಾಡಿದ್ದ ಮಹಾರಾಷ್ಟ್ರ ಸಚಿವ ನಿತೇಶ್ ರಾಣೆಗೆ ಬಿಜೆಪಿ ವಕ್ತಾರೆ ಶೈನಾ ಎನ್.ಸಿ ತಿರುಗೇಟು ನೀಡಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಚಾಕು ಇರಿತಕ್ಕೊಳಗಾಗಿದ್ದ ಸೈಫ್ ಅವರು ಆಸ್ಪತ್ರೆಯೊಳಗೆ ‘ಸಿಂಹ’ದಂತೆ ಹೋಗಿ ‘ಹುಲಿ’ಯಂತೆ ಹೊರ ಬಂದಿದ್ದಾರೆ. ದುಷ್ಕರ್ಮಿಯೊಂದಿಗೆ ಹೋರಾಟ ನಡೆಸಿದ ಅವರ (ಸೈಫ್) ಧೈರ್ಯವನ್ನು ಮೆಚ್ಚಲೇಬೇಕು’ ಎಂದು ಹೇಳಿದ್ದಾರೆ. </p><p>‘ಸುರಕ್ಷತಾ ಕ್ರಮಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ಅನಗತ್ಯ ವಿಚಾರಗಳ ಬಗ್ಗೆ ಚರ್ಚೆ ಬೇಡ’ ಎಂದು ಶೈನಾ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.</p><p>‘ಬಹುಶಃ ಚಾಕು ಇರಿದ ಆರೋಪಿ, ಸೈಫ್ ಅವರನ್ನು ಕರೆದುಕೊಂಡು ಹೋಗಲು ಬಂದಿರಬಹುದು. ಇದು ಒಳ್ಳೆಯದೇ.. ಕಸವನ್ನು ಎಸೆಯಬೇಕು’ ಎಂದು ರಾಣೆ ಹೇಳಿದ್ದರು. ಈ ಕುರಿತ ವಿಡಿಯೊವನ್ನು ಸುದ್ದಿಸಂಸ್ಥೆ ಎಎನ್ಐ ಹಂಚಿಕೊಂಡಿದೆ. </p><p>‘ಮುಂಬೈನಲ್ಲಿ ಬಾಂಗ್ಲಾದೇಶಿಗಳು ಏನು ಮಾಡುತ್ತಿದ್ದಾರೆ ನೋಡಿ. ಅವರು ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ್ದಾರೆ. ಮೊದಲು ರಸ್ತೆಯ ಕ್ರಾಸಿಂಗ್ಗಳಲ್ಲಿ ನಿಲ್ಲುತ್ತಿದ್ದ ಅವರು ಈಗ ಮನೆಗಳಿಗೆ ಪ್ರವೇಶಿಸಲು ಪ್ರಾರಂಭಿಸಿದ್ದಾರೆ’ ಎಂದು ರಾಣೆ ಹೇಳಿದ್ದರು. </p><p>‘ಸೈಫ್ ಅವರು ಆಸ್ಪತ್ರೆಯಿಂದ ಹೊರಗೆ ಬರುವುದನ್ನು ನೋಡಿದರೆ ಅವರಿಗೆ ನಿಜವಾಗಿಯೂ ಚಾಕುವಿನಿಂದ ಗಾಯವಾಗಿದೆಯಾ? ಅಥವಾ ನಟಿಸುತ್ತಿದ್ದಾರಾ? ಎಂಬ ಅನುಮಾನ ಬಂತು. ನಡೆಯುವಾಗ ಅವರು ನೃತ್ಯ ಮಾಡುತ್ತಿದ್ದರು’ ಎಂದು ರಾಣೆ ಅನುಮಾನ ವ್ಯಕ್ತಪಡಿಸಿದ್ದರು. </p><p>ಜ.16ರಂದು ಮುಂಬೈನ ಬಾಂದ್ರಾದಲ್ಲಿರುವ ‘ಸದ್ಗುರು ಶರಣ್’ ಅಪಾರ್ಟ್ಮೆಂಟ್ನ 12ನೇ ಮಹಡಿಯಲ್ಲಿರುವ ನಿವಾಸದಲ್ಲಿ 54 ವರ್ಷದ ಸೈಫ್ ಅಲಿ ಖಾನ್ ದುಷ್ಕರ್ಮಿಯೊಬ್ಬರಿಂದ ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. </p><p>‘ಸೈಫ್ ಅವರ ಬೆನ್ನೆಲುಬಿಗೆ ಗಂಭೀರ ಗಾಯವಾಗಿದ್ದು, ಅಲ್ಲಿ ಹೊಕ್ಕಿದ್ದ ಚಾಕು ಹೊರತೆಗೆಯಲು ಮತ್ತು ಬೆನ್ನುಮೂಳೆಯ ಮಜ್ಜೆಯನ್ನು ಸರಿಪಡಿಸಲು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು. ಇದೀಗ ಸೈಫ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. </p><p>ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಾಂಗ್ಲಾ ಮೂಲದ ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ನನ್ನು ಪೊಲೀಸರು ಬಂಧಿಸಿದ್ದಾರೆ. </p><p>ಸೈಫ್ ಅವರ ನಿವಾಸಕ್ಕೆ ಶೆಹಜಾದ್ ಕಳ್ಳತನದ ಉದ್ದೇಶದಿಂದ ಪ್ರವೇಶಿಸಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.ಸೈಫ್ ಅಲಿ ಖಾನ್ ‘ಕಸ’, ಅದನ್ನು ಎಸೆಯಬೇಕು: ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ.ಚಾಕು ಇರಿತ ಪ್ರಕರಣ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಬಿಡುಗಡೆ.ಸೈಫ್ ಅಲಿ ಖಾನ್ಗೆ ಚಾಕು ಇರಿತ ಪ್ರಕರಣ: ತಪ್ಪೊಪ್ಪಿಕೊಂಡ ಆರೋಪಿ.ನಟ ಸೈಫ್ ಅಲಿ ಖಾನ್ಮೇಲಿನ ದಾಳಿಯಲ್ಲಿ ಭೂಗತ ಗ್ಯಾಂಗ್ ನಂಟಿಲ್ಲ: ಗೃಹ ಸಚಿವ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಚಾಕು ಇರಿತದಿಂದ ಚೇತರಿಸಿಕೊಂಡು ಐದು ದಿನಗಳ ಬಳಿಕ ಆಸ್ಪತ್ರೆಯಿಂದ ಮನೆಗೆ ವಾಪಾಸ್ಸಾಗಿರುವ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರನ್ನು ‘ಕಸ’ಕ್ಕೆ ಹೋಲಿಕೆ ಮಾಡಿದ್ದ ಮಹಾರಾಷ್ಟ್ರ ಸಚಿವ ನಿತೇಶ್ ರಾಣೆಗೆ ಬಿಜೆಪಿ ವಕ್ತಾರೆ ಶೈನಾ ಎನ್.ಸಿ ತಿರುಗೇಟು ನೀಡಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಚಾಕು ಇರಿತಕ್ಕೊಳಗಾಗಿದ್ದ ಸೈಫ್ ಅವರು ಆಸ್ಪತ್ರೆಯೊಳಗೆ ‘ಸಿಂಹ’ದಂತೆ ಹೋಗಿ ‘ಹುಲಿ’ಯಂತೆ ಹೊರ ಬಂದಿದ್ದಾರೆ. ದುಷ್ಕರ್ಮಿಯೊಂದಿಗೆ ಹೋರಾಟ ನಡೆಸಿದ ಅವರ (ಸೈಫ್) ಧೈರ್ಯವನ್ನು ಮೆಚ್ಚಲೇಬೇಕು’ ಎಂದು ಹೇಳಿದ್ದಾರೆ. </p><p>‘ಸುರಕ್ಷತಾ ಕ್ರಮಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ಅನಗತ್ಯ ವಿಚಾರಗಳ ಬಗ್ಗೆ ಚರ್ಚೆ ಬೇಡ’ ಎಂದು ಶೈನಾ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.</p><p>‘ಬಹುಶಃ ಚಾಕು ಇರಿದ ಆರೋಪಿ, ಸೈಫ್ ಅವರನ್ನು ಕರೆದುಕೊಂಡು ಹೋಗಲು ಬಂದಿರಬಹುದು. ಇದು ಒಳ್ಳೆಯದೇ.. ಕಸವನ್ನು ಎಸೆಯಬೇಕು’ ಎಂದು ರಾಣೆ ಹೇಳಿದ್ದರು. ಈ ಕುರಿತ ವಿಡಿಯೊವನ್ನು ಸುದ್ದಿಸಂಸ್ಥೆ ಎಎನ್ಐ ಹಂಚಿಕೊಂಡಿದೆ. </p><p>‘ಮುಂಬೈನಲ್ಲಿ ಬಾಂಗ್ಲಾದೇಶಿಗಳು ಏನು ಮಾಡುತ್ತಿದ್ದಾರೆ ನೋಡಿ. ಅವರು ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ್ದಾರೆ. ಮೊದಲು ರಸ್ತೆಯ ಕ್ರಾಸಿಂಗ್ಗಳಲ್ಲಿ ನಿಲ್ಲುತ್ತಿದ್ದ ಅವರು ಈಗ ಮನೆಗಳಿಗೆ ಪ್ರವೇಶಿಸಲು ಪ್ರಾರಂಭಿಸಿದ್ದಾರೆ’ ಎಂದು ರಾಣೆ ಹೇಳಿದ್ದರು. </p><p>‘ಸೈಫ್ ಅವರು ಆಸ್ಪತ್ರೆಯಿಂದ ಹೊರಗೆ ಬರುವುದನ್ನು ನೋಡಿದರೆ ಅವರಿಗೆ ನಿಜವಾಗಿಯೂ ಚಾಕುವಿನಿಂದ ಗಾಯವಾಗಿದೆಯಾ? ಅಥವಾ ನಟಿಸುತ್ತಿದ್ದಾರಾ? ಎಂಬ ಅನುಮಾನ ಬಂತು. ನಡೆಯುವಾಗ ಅವರು ನೃತ್ಯ ಮಾಡುತ್ತಿದ್ದರು’ ಎಂದು ರಾಣೆ ಅನುಮಾನ ವ್ಯಕ್ತಪಡಿಸಿದ್ದರು. </p><p>ಜ.16ರಂದು ಮುಂಬೈನ ಬಾಂದ್ರಾದಲ್ಲಿರುವ ‘ಸದ್ಗುರು ಶರಣ್’ ಅಪಾರ್ಟ್ಮೆಂಟ್ನ 12ನೇ ಮಹಡಿಯಲ್ಲಿರುವ ನಿವಾಸದಲ್ಲಿ 54 ವರ್ಷದ ಸೈಫ್ ಅಲಿ ಖಾನ್ ದುಷ್ಕರ್ಮಿಯೊಬ್ಬರಿಂದ ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. </p><p>‘ಸೈಫ್ ಅವರ ಬೆನ್ನೆಲುಬಿಗೆ ಗಂಭೀರ ಗಾಯವಾಗಿದ್ದು, ಅಲ್ಲಿ ಹೊಕ್ಕಿದ್ದ ಚಾಕು ಹೊರತೆಗೆಯಲು ಮತ್ತು ಬೆನ್ನುಮೂಳೆಯ ಮಜ್ಜೆಯನ್ನು ಸರಿಪಡಿಸಲು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು. ಇದೀಗ ಸೈಫ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. </p><p>ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಾಂಗ್ಲಾ ಮೂಲದ ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ನನ್ನು ಪೊಲೀಸರು ಬಂಧಿಸಿದ್ದಾರೆ. </p><p>ಸೈಫ್ ಅವರ ನಿವಾಸಕ್ಕೆ ಶೆಹಜಾದ್ ಕಳ್ಳತನದ ಉದ್ದೇಶದಿಂದ ಪ್ರವೇಶಿಸಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.ಸೈಫ್ ಅಲಿ ಖಾನ್ ‘ಕಸ’, ಅದನ್ನು ಎಸೆಯಬೇಕು: ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ.ಚಾಕು ಇರಿತ ಪ್ರಕರಣ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಬಿಡುಗಡೆ.ಸೈಫ್ ಅಲಿ ಖಾನ್ಗೆ ಚಾಕು ಇರಿತ ಪ್ರಕರಣ: ತಪ್ಪೊಪ್ಪಿಕೊಂಡ ಆರೋಪಿ.ನಟ ಸೈಫ್ ಅಲಿ ಖಾನ್ಮೇಲಿನ ದಾಳಿಯಲ್ಲಿ ಭೂಗತ ಗ್ಯಾಂಗ್ ನಂಟಿಲ್ಲ: ಗೃಹ ಸಚಿವ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>