<p><strong>ನವದೆಹಲಿ</strong>: ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಶಾಸಕ ಅಬ್ಬಾಸ್ ಅನ್ಸಾರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.</p><p>ಕೆಲ ತಿಂಗಳ ಹಿಂದೆ ಜೈಲಿನಲ್ಲೇ ಮೃತಪಟ್ಟ ಗ್ಯಾಂಗ್ಸ್ಟರ್–ರಾಜಕಾರಣಿ ಮುಖ್ತಾರ್ ಅಬ್ಬಾಸ್ ಅವರ ಮಗ ಅಬ್ಬಾಸ್ ಅನ್ಸಾರಿ. </p><p>ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಪಂಕಜ್ ಮಿತ್ತಲ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಜಾಮೀನು ನೀಡಿದೆ.</p><p>ಜಾಮೀನು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಅನ್ಸಾರಿ ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ಆಗಸ್ಟ್ 14ರಂದು ಇ.ಡಿಗೆ ನೋಟಿಸ್ ಜಾರಿ ಮಾಡಿದ್ದ ಸುಪ್ರೀಂ ಕೋರ್ಟ್, ಪ್ರತಿಕ್ರಿಯೆ ಕೇಳಿತ್ತು.</p><p>ಇದಕ್ಕೂ ಮೊದಲು, ಜೈಲಿನಲ್ಲಿ ಪತ್ನಿಯ ಮೊಬೈಲ್ ಮೂಲಕ ಕರೆ ಮಾಡಿ ಸಾಕ್ಷಿದಾರರು ಮತ್ತು ಅಧಿಕಾರಿಗಳನ್ನು ಬೆದರಿಸಿದ ಆರೋಪ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ಮತ್ತೊಂದು ಪೀಠ ಅನ್ಸಾರಿಗೆ ಜಾಮೀನು ನೀಡಿತ್ತು.</p><p> 'ತನಿಖೆ ಮುಕ್ತಾಯವಾಗಿದ್ದು, ಚಾರ್ಜ್ಶೀಟ್ ಸಲ್ಲಿಸಲಾಗಿದೆ. ತ್ವರಿತವಾಗಿ ಮುಗಿಯಬೇಕಿದ್ದ ಪ್ರಕರಣದಲ್ಲಿ ಅರ್ಜಿದಾರರು ಒಂದೂವರೆ ವರ್ಷದಿಂದ ಜೈಲಿನಲ್ಲಿದ್ದಾರೆ. ಪ್ರಕರಣದ ವಿಚಾರಣೆ ಮುಕ್ತಾಯಕ್ಕೆ ಮತ್ತಷ್ಟು ಸಮಯ ಹಿಡಿಯುವುದನ್ನು ಗಮನದಲ್ಲಿಟ್ಟುಕೊಂಡು ಜಾಮೀನಿನ ಬಾಂಡ್ ಮೇಲೆ ಬಿಡುಗಡೆಗೆ ಆದೇಶಿಸಲಾಗಿದೆ’ಎಂದು ಪೀಠ ಹೇಳಿದೆ.</p><p>ಅನ್ಸಾರಿ ಚಿತ್ರಕೂಟ ಜಿಲ್ಲಾ ಕಾರಾಗೃಹದಲ್ಲಿದ್ದಾಗ ಅವರ ಪತ್ನಿ, ಡ್ರೈವರ್ ಮತ್ತು ಸಹ ಆರೋಪಿ ನಿಜಾಜ್ ಭೇಟಿಗೆ ಬಂದಿದ್ದರು. ಈ ಸಂದರ್ಭ ಅನ್ಸಾರಿ, ಪತ್ನಿಯ ಮೊಬೈಲ್ ಬಳಸಿ ಸಾಕ್ಷಿಗಳಿಗೆ ಬೆದರಿಕೆ ಮತ್ತು ಹಣದ ಸುಲಿಗೆಯಲ್ಲಿ ತೊಡಗಿದ್ದರು ಎಂದು ಆರೋಪಿಸಲಾಗಿದೆ. ಮೇ 9ರಂದು ಹೈಕೋರ್ಟ್ ಜಾಮೀನು ತಿರಸ್ಕರಿಸಿ ಆದೇಶಿಸಿತ್ತು.</p><p>ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ ಮೌ ಕ್ಷೇತ್ರದ ಶಾಸಕ ಅಬ್ಬಾಸ್ ಅನ್ಸಾರಿ ವಿರುದ್ಧ 200</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಶಾಸಕ ಅಬ್ಬಾಸ್ ಅನ್ಸಾರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.</p><p>ಕೆಲ ತಿಂಗಳ ಹಿಂದೆ ಜೈಲಿನಲ್ಲೇ ಮೃತಪಟ್ಟ ಗ್ಯಾಂಗ್ಸ್ಟರ್–ರಾಜಕಾರಣಿ ಮುಖ್ತಾರ್ ಅಬ್ಬಾಸ್ ಅವರ ಮಗ ಅಬ್ಬಾಸ್ ಅನ್ಸಾರಿ. </p><p>ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಪಂಕಜ್ ಮಿತ್ತಲ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಜಾಮೀನು ನೀಡಿದೆ.</p><p>ಜಾಮೀನು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಅನ್ಸಾರಿ ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ಆಗಸ್ಟ್ 14ರಂದು ಇ.ಡಿಗೆ ನೋಟಿಸ್ ಜಾರಿ ಮಾಡಿದ್ದ ಸುಪ್ರೀಂ ಕೋರ್ಟ್, ಪ್ರತಿಕ್ರಿಯೆ ಕೇಳಿತ್ತು.</p><p>ಇದಕ್ಕೂ ಮೊದಲು, ಜೈಲಿನಲ್ಲಿ ಪತ್ನಿಯ ಮೊಬೈಲ್ ಮೂಲಕ ಕರೆ ಮಾಡಿ ಸಾಕ್ಷಿದಾರರು ಮತ್ತು ಅಧಿಕಾರಿಗಳನ್ನು ಬೆದರಿಸಿದ ಆರೋಪ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ಮತ್ತೊಂದು ಪೀಠ ಅನ್ಸಾರಿಗೆ ಜಾಮೀನು ನೀಡಿತ್ತು.</p><p> 'ತನಿಖೆ ಮುಕ್ತಾಯವಾಗಿದ್ದು, ಚಾರ್ಜ್ಶೀಟ್ ಸಲ್ಲಿಸಲಾಗಿದೆ. ತ್ವರಿತವಾಗಿ ಮುಗಿಯಬೇಕಿದ್ದ ಪ್ರಕರಣದಲ್ಲಿ ಅರ್ಜಿದಾರರು ಒಂದೂವರೆ ವರ್ಷದಿಂದ ಜೈಲಿನಲ್ಲಿದ್ದಾರೆ. ಪ್ರಕರಣದ ವಿಚಾರಣೆ ಮುಕ್ತಾಯಕ್ಕೆ ಮತ್ತಷ್ಟು ಸಮಯ ಹಿಡಿಯುವುದನ್ನು ಗಮನದಲ್ಲಿಟ್ಟುಕೊಂಡು ಜಾಮೀನಿನ ಬಾಂಡ್ ಮೇಲೆ ಬಿಡುಗಡೆಗೆ ಆದೇಶಿಸಲಾಗಿದೆ’ಎಂದು ಪೀಠ ಹೇಳಿದೆ.</p><p>ಅನ್ಸಾರಿ ಚಿತ್ರಕೂಟ ಜಿಲ್ಲಾ ಕಾರಾಗೃಹದಲ್ಲಿದ್ದಾಗ ಅವರ ಪತ್ನಿ, ಡ್ರೈವರ್ ಮತ್ತು ಸಹ ಆರೋಪಿ ನಿಜಾಜ್ ಭೇಟಿಗೆ ಬಂದಿದ್ದರು. ಈ ಸಂದರ್ಭ ಅನ್ಸಾರಿ, ಪತ್ನಿಯ ಮೊಬೈಲ್ ಬಳಸಿ ಸಾಕ್ಷಿಗಳಿಗೆ ಬೆದರಿಕೆ ಮತ್ತು ಹಣದ ಸುಲಿಗೆಯಲ್ಲಿ ತೊಡಗಿದ್ದರು ಎಂದು ಆರೋಪಿಸಲಾಗಿದೆ. ಮೇ 9ರಂದು ಹೈಕೋರ್ಟ್ ಜಾಮೀನು ತಿರಸ್ಕರಿಸಿ ಆದೇಶಿಸಿತ್ತು.</p><p>ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ ಮೌ ಕ್ಷೇತ್ರದ ಶಾಸಕ ಅಬ್ಬಾಸ್ ಅನ್ಸಾರಿ ವಿರುದ್ಧ 200</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>