<p><strong>ನವದೆಹಲಿ</strong>: ವಕ್ಫ್ ಕಾಯ್ದೆ–1995ರಲ್ಲಿನ ಕೆಲ ಅವಕಾಶಗಳ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಸಂಬಂಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.</p>.<p>ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸೀಹ್ ಅವರು ಇದ್ದ ನ್ಯಾಯಪೀಠವು, ವಕ್ಫ್ ಕಾಯ್ದೆ–1995 ಪ್ರಶ್ನಿಸಿ ನಿಖಿಲ್ ಉಪಾಧ್ಯಾಯ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ನೋಟಿಸ್ ಜಾರಿ ಮಾಡಿದೆ.</p>.<p>ವಕ್ಫ್ ಕಾಯ್ದೆ–1995ರಲ್ಲಿನ ಕೆಲ ಅವಕಾಶಗಳ ಸಿಂಧುತ್ವ ಪ್ರಶ್ನಿಸಿ ವಕೀಲ ವಿಷ್ಣುಶಂಕರ್ ಜೈನ್ ಅವರು ಅರ್ಜಿ ಸಲ್ಲಿಸಿದ್ದಾರೆ. ಇದೇ ವಿಚಾರವಾಗಿ ಸಲ್ಲಿಕೆಯಾಗಿರುವ ಇತರ ಅರ್ಜಿಗಳೊಂದಿಗೆ ಜೈನ್ ಅವರ ಅರ್ಜಿಯನ್ನು ಒಟ್ಟುಗೂಡಿಸಿ, ನ್ಯಾಯಪೀಠ ವಿಚಾರಣೆ ನಡೆಸಲಿದೆ.</p>.<p>ವಕ್ಫ್ ಕಾಯ್ದೆ–1995ಕ್ಕೆ ಪ್ರಸಕ್ತ ವರ್ಷ ತಿದ್ದುಪಡಿ ತರಲಾಗಿದೆ.</p>.<p>ಇದಕ್ಕೂ ಮುನ್ನ, ಕೇಂದ್ರ ಸರ್ಕಾರ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ, ‘ವಕ್ಫ್ ಕಾಯ್ದೆಗೆ ಪ್ರಸಕ್ತ ವರ್ಷ ತಿದ್ದುಪಡಿ ತರುವುದಕ್ಕೂ ಮೊದಲೇ, ಈ ಕಾಯ್ದೆಯಲ್ಲಿನ ಅವಕಾಶಗಳ ಸಿಂಧುತ್ವ ಪ್ರಶ್ನಿಸಿ ಅರ್ಜಿದಾರರು ಮೇಲ್ಮನವಿ ಸಲ್ಲಿಸಿದ್ದಾರೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.</p>.<p>ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಮಧ್ಯಂತರ ತಡೆಯಾಜ್ಞೆ ನೀಡುವುದಕ್ಕೆ ಸಂಬಂಧಿಸಿದ ತನ್ನ ಆದೇಶವನ್ನು ಮೇ 22ರಂದು ಕಾಯ್ದಿರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಕ್ಫ್ ಕಾಯ್ದೆ–1995ರಲ್ಲಿನ ಕೆಲ ಅವಕಾಶಗಳ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಸಂಬಂಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.</p>.<p>ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸೀಹ್ ಅವರು ಇದ್ದ ನ್ಯಾಯಪೀಠವು, ವಕ್ಫ್ ಕಾಯ್ದೆ–1995 ಪ್ರಶ್ನಿಸಿ ನಿಖಿಲ್ ಉಪಾಧ್ಯಾಯ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ನೋಟಿಸ್ ಜಾರಿ ಮಾಡಿದೆ.</p>.<p>ವಕ್ಫ್ ಕಾಯ್ದೆ–1995ರಲ್ಲಿನ ಕೆಲ ಅವಕಾಶಗಳ ಸಿಂಧುತ್ವ ಪ್ರಶ್ನಿಸಿ ವಕೀಲ ವಿಷ್ಣುಶಂಕರ್ ಜೈನ್ ಅವರು ಅರ್ಜಿ ಸಲ್ಲಿಸಿದ್ದಾರೆ. ಇದೇ ವಿಚಾರವಾಗಿ ಸಲ್ಲಿಕೆಯಾಗಿರುವ ಇತರ ಅರ್ಜಿಗಳೊಂದಿಗೆ ಜೈನ್ ಅವರ ಅರ್ಜಿಯನ್ನು ಒಟ್ಟುಗೂಡಿಸಿ, ನ್ಯಾಯಪೀಠ ವಿಚಾರಣೆ ನಡೆಸಲಿದೆ.</p>.<p>ವಕ್ಫ್ ಕಾಯ್ದೆ–1995ಕ್ಕೆ ಪ್ರಸಕ್ತ ವರ್ಷ ತಿದ್ದುಪಡಿ ತರಲಾಗಿದೆ.</p>.<p>ಇದಕ್ಕೂ ಮುನ್ನ, ಕೇಂದ್ರ ಸರ್ಕಾರ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ, ‘ವಕ್ಫ್ ಕಾಯ್ದೆಗೆ ಪ್ರಸಕ್ತ ವರ್ಷ ತಿದ್ದುಪಡಿ ತರುವುದಕ್ಕೂ ಮೊದಲೇ, ಈ ಕಾಯ್ದೆಯಲ್ಲಿನ ಅವಕಾಶಗಳ ಸಿಂಧುತ್ವ ಪ್ರಶ್ನಿಸಿ ಅರ್ಜಿದಾರರು ಮೇಲ್ಮನವಿ ಸಲ್ಲಿಸಿದ್ದಾರೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.</p>.<p>ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಮಧ್ಯಂತರ ತಡೆಯಾಜ್ಞೆ ನೀಡುವುದಕ್ಕೆ ಸಂಬಂಧಿಸಿದ ತನ್ನ ಆದೇಶವನ್ನು ಮೇ 22ರಂದು ಕಾಯ್ದಿರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>