ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

ಚಂಡೀಗಢ ಮೇಯರ್ ಚುನಾವಣೆ | ಮರು ಮತ ಎಣಿಕೆ: ಬಿಜೆಪಿಗೆ ಮುಖಭಂಗ

Published : 20 ಫೆಬ್ರುವರಿ 2024, 16:43 IST
Last Updated : 20 ಫೆಬ್ರುವರಿ 2024, 16:43 IST
ಫಾಲೋ ಮಾಡಿ
Comments
ಪ್ರಜಾಸತ್ತಾತ್ಮಕ ತತ್ವಗಳನ್ನು ಸಂರಕ್ಷಿಸುವುದು ಮತ್ತು ಚುನಾವಣಾ ಪ್ರಜಾತಂತ್ರವನ್ನು ಹಿಮ್ಮೆಟ್ಟಿಸುವ ಪ್ರಯತ್ನ ನಡೆದಾಗ ಅದನ್ನು ತಡೆಯುವುದು ನ್ಯಾಯಾಲಯದ ಕರ್ತವ್ಯವಾಗಿದೆ
ಸುಪ್ರೀಂ ಕೋರ್ಟ್‌ ನ್ಯಾಯಪೀಠ
ಪ್ರಜಾಪ್ರಭುತ್ವವನ್ನು ರಕ್ಷಿಸಿದೆ
ಸುಪ್ರೀಂ ಕೋರ್ಟ್‌ನ ಈ ತೀರ್ಪು ಚುನಾವಣಾ ಅಕ್ರಮದಲ್ಲಿ ತೊಡಗಿರುವ ‘ನಿರಂಕುಶ ಪ್ರಭುತ್ವ’ದ ಬಿಜೆಪಿಯಿಂದ ಪ್ರಜಾಪ್ರಭುತ್ವವನ್ನು ರಕ್ಷಿಸಿದೆ. ಚಂಡೀಗಢ ಮೇಯರ್‌ ಆಯ್ಕೆ ಚುನಾವಣೆಯು ಪ್ರಜಾಪ್ರಭುತ್ವವನ್ನು ನಾಶಪಡಿಸುವ ಮೋದಿ–ಶಾ ಅವರ ಸಂಚಿನ ತುಣುಕಷ್ಟೆ. ಪ್ರಜಾಪ್ರಭುತ್ವ ಕವಲುದಾರಿಯಲ್ಲಿದೆ. ಸಂವಿಧಾನವನ್ನು ರಕ್ಷಿಸಲು ಎಲ್ಲ ಭಾರತೀಯರು ಒಟ್ಟಾಗಿ ಹೋರಾಡಬೇಕಿದೆ  ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ ‘ಸಂಕಷ್ಟದ ಸಂದರ್ಭ’ದಲ್ಲಿ ಸುಪ್ರಿಂ ಕೋರ್ಟ್ ಪ್ರಜಾಪ್ರಭುತ್ವವನ್ನು ರಕ್ಷಿಸಿದೆ. ಇದೊಂದು ಐತಿಹಾಸಿಕ ತೀರ್ಪು. ವಿರೋಧಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ಗೆ ದೊರೆತ ಅತಿದೊಡ್ಡ ಗೆಲುವು. ‘ಇಂಡಿಯಾ’ ಮೈತ್ರಿಪಕ್ಷಗಳು ಒಟ್ಟಾಗಿದ್ದು ಚುನಾವಣೆ ಎದುರಿಸಿದರೆ ಬಿಜೆಪಿಯನ್ನು ಸೋಲಿಸಬಹುದು ಎಂಬ ಸಂದೇಶವನ್ನು ಈ ಚುನಾವಣೆಯು ಸಾರಿದೆ ಅರವಿಂದ ಕೇಜ್ರಿವಾಲ್ ಎಎಪಿ ಸಂಚಾಲಕ ದೆಹಲಿ ಮುಖ್ಯಮಂತ್ರಿ ಸತ್ಯಕ್ಕೆ ಕಡೆಗೂ ಗೆಲುವು ಲಭಿಸಿದೆ. ಈ ತೀರ್ಪು ಪ್ರಜಾಪ್ರಭುತ್ವ ಹಾಗೂ ಚಂಡೀಗಢ ನಿವಾಸಿಗಳಿಗೆ ದೊರೆತಿರುವ ಗೆಲುವಾಗಿದೆ. ಕುಲದೀಪ್‌ ಕುಮಾರ್ ಮೇಯರ್‌ ಆಗಿ ಘೋಷಿಸಲಾದ ಎಎಪಿ ಅಭ್ಯರ್ಥಿ
ಎರಡನೇ ಹಿನ್ನಡೆ
ಈ ಬೆಳವಣಿಗೆಯು ಕೇಂದ್ರದ ಆಡಳಿತಾರೂಢ ಎನ್‌ಡಿಎ ನೇತೃತ್ವ ವಹಿಸಿರುವ ಬಿಜೆಪಿಗೆ ಹಿನ್ನಡೆ ಎಂದು ಹೇಳಲಾಗಿದೆ. ಅಲ್ಲದೆ ವಿರೋಧಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ಕ್ಕೆ ಇದು ಮೊದಲ ಚುನಾವಣಾ ಗೆಲುವು ಆಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ಒಂದು ವಾರದಲ್ಲಿ ಬಿಜೆಪಿಗೆ ಆಗಿರುವ ಎರಡನೇ ಹಿನ್ನಡೆ ಇದು. ಕಳೆದ ವಾರ ಸುಪ್ರೀಂ ಕೋರ್ಟ್‌ನ ಐವರು ಸದಸ್ಯರ ಪೀಠವು ಪಕ್ಷಗಳು ದೇಣಿಗೆ ಪಡೆಯಲು ನೆರವಾಗುವ ಚುನಾವಣಾ ಬಾಂಡ್‌ಗಳನ್ನು ರದ್ದುಪಡಿಸಿ ತೀರ್ಪು ನೀಡಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT