<p><strong>ನವದೆಹಲಿ:</strong> ಸಿವಿಲ್ ಪ್ರಕರಣವನ್ನು ಕ್ರಿಮಿನಲ್ ಪ್ರಕರಣವಾಗಿ ಪರಿವರ್ತಿಸಿದ ವಿಚಾರವಾಗಿ ಉತ್ತರ ಪ್ರದೇಶದ ಪೊಲೀಸರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಕಿಡಿಕಾರಿತು.</p>.<p>ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್, ಕೆ.ವಿ.ವಿಶ್ವನಾಥನ್ ಅವರನ್ನು ಒಳಗೊಂಡ ನ್ಯಾಯಪೀಠವು, ನಾಗರಿಕ ವಿಚಾರವನ್ನು ಕ್ರಿಮಿನಲ್ ಪ್ರಕರಣವಾಗಿ ಪರಿವರ್ತಿಸುವುದು ಸ್ವೀಕಾರಾರ್ಹವಲ್ಲ ಎಂದು ಸ್ಪಷ್ಟಪಡಿಸಿತು.</p>.<p>ಸಿವಿಲ್ ಪ್ರಕರಣಗಳ ಇತ್ಯರ್ಥಕ್ಕೆ ದೀರ್ಘಕಾಲ ಹಿಡಿಯುತ್ತದೆ ಎಂಬ ಏಕಮಾತ್ರ ಕಾರಣಕ್ಕಾಗಿ ಎಫ್ಐಆರ್ ದಾಖಲಿಸಿ ಅವುಗಳನ್ನು ಕ್ರಿಮಿನಲ್ ಕಾನೂನು ವ್ಯಾಪ್ತಿಯಲ್ಲಿ ತರುವಿರಾ ಎಂದು ಪ್ರಶ್ನಿಸಿತು.</p>.<p>ಅಧಿಕಾರಿಗಳ ನಡೆಯನ್ನು ಟೀಕಿಸಿದ ಪೀಠ, ‘ಉತ್ತರ ಪ್ರದೇಶದಲ್ಲಿ ಏನಾಗುತ್ತಿದೆಯೋ ಅದು ತಪ್ಪು. ಪ್ರತಿದಿನವೂ ಸಿವಿಲ್ ಅರ್ಜಿಗಳನ್ನು ಕ್ರಿಮಿನಲ್ ಪ್ರಕರಣಗಳಾಗಿ ಪರಿವರ್ತಿಸಲಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿತು.</p>.<p>ತನಿಖಾಧಿಕಾರಿಯನ್ನು ಸಾಕ್ಷಿ ಕಟಕಟೆಗೆ ಕರೆಯುತ್ತೇವೆ. ಅಲ್ಲಿ ನಿಂತು ಅವರು ಕ್ರಿಮಿನಲ್ ಪ್ರಕರಣ ಎಂದು ಸಾಬೀತು ಮಾಡಲಿ. ತನಿಖಾಧಿಕಾರಿ ಪಾಠ ಕಲಿಯಬೇಕು ಎಂದು ಕಿಡಿಕಾರಿತು.</p>.<p>ಸಿವಿಲ್ ವ್ಯಾಜ್ಯವನ್ನು ಕ್ರಿಮಿನಲ್ ಕಾನೂನು ವ್ಯಾಪ್ತಿಯಲ್ಲಿ ಏಕೆ ತರಲಾಗುತ್ತಿದೆ ಎಂಬುದನ್ನು ವಿವರಿಸಿ, ಪ್ರಮಾಣಪತ್ರ ಸಲ್ಲಿಸಿ ಎಂದು ಪೊಲೀಸ್ ಮಹಾ ನಿರ್ದೇಶಕ ಮತ್ತು ಗೌತಮ ಬುದ್ಧ ನಗರ ಜಿಲ್ಲೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಅವರಿಗೆ ಸೂಚಿಸಿತು.</p>.<p>ನೊಯಿಡಾದ ಸೆಕ್ಟರ್–39 ಪೊಲೀಸ್ ಠಾಣೆಯ ತನಿಖಾಧಿಕಾರಿ ಸಾಕ್ಷಿ ಕಟಕಟೆಗೆ ಬಂದು, ಈ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸುವ ಅಗತ್ಯವೇನಿತ್ತು ಎಂಬುದಾಗಿ ಉತ್ತರಿಸಬೇಕು ಎಂದು ಸೂಚಿಸಿತು.</p>.<p>ದೇಬು ಸಿಂಗ್ ಮತ್ತು ದೀಪಕ್ ಸಿಂಗ್ ಎಂಬುವವರ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಮಾಡಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಇಬ್ಬರೂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. </p>.<p>ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನೊಯಿಡಾದ ವಿಚಾರಣಾ ನ್ಯಾಯಾಲಯದಲ್ಲಿ ಇವರ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಚಾರಣೆ ನಡೆಸಲು ತಡೆ ನೀಡಿತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಿವಿಲ್ ಪ್ರಕರಣವನ್ನು ಕ್ರಿಮಿನಲ್ ಪ್ರಕರಣವಾಗಿ ಪರಿವರ್ತಿಸಿದ ವಿಚಾರವಾಗಿ ಉತ್ತರ ಪ್ರದೇಶದ ಪೊಲೀಸರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಕಿಡಿಕಾರಿತು.</p>.<p>ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್, ಕೆ.ವಿ.ವಿಶ್ವನಾಥನ್ ಅವರನ್ನು ಒಳಗೊಂಡ ನ್ಯಾಯಪೀಠವು, ನಾಗರಿಕ ವಿಚಾರವನ್ನು ಕ್ರಿಮಿನಲ್ ಪ್ರಕರಣವಾಗಿ ಪರಿವರ್ತಿಸುವುದು ಸ್ವೀಕಾರಾರ್ಹವಲ್ಲ ಎಂದು ಸ್ಪಷ್ಟಪಡಿಸಿತು.</p>.<p>ಸಿವಿಲ್ ಪ್ರಕರಣಗಳ ಇತ್ಯರ್ಥಕ್ಕೆ ದೀರ್ಘಕಾಲ ಹಿಡಿಯುತ್ತದೆ ಎಂಬ ಏಕಮಾತ್ರ ಕಾರಣಕ್ಕಾಗಿ ಎಫ್ಐಆರ್ ದಾಖಲಿಸಿ ಅವುಗಳನ್ನು ಕ್ರಿಮಿನಲ್ ಕಾನೂನು ವ್ಯಾಪ್ತಿಯಲ್ಲಿ ತರುವಿರಾ ಎಂದು ಪ್ರಶ್ನಿಸಿತು.</p>.<p>ಅಧಿಕಾರಿಗಳ ನಡೆಯನ್ನು ಟೀಕಿಸಿದ ಪೀಠ, ‘ಉತ್ತರ ಪ್ರದೇಶದಲ್ಲಿ ಏನಾಗುತ್ತಿದೆಯೋ ಅದು ತಪ್ಪು. ಪ್ರತಿದಿನವೂ ಸಿವಿಲ್ ಅರ್ಜಿಗಳನ್ನು ಕ್ರಿಮಿನಲ್ ಪ್ರಕರಣಗಳಾಗಿ ಪರಿವರ್ತಿಸಲಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿತು.</p>.<p>ತನಿಖಾಧಿಕಾರಿಯನ್ನು ಸಾಕ್ಷಿ ಕಟಕಟೆಗೆ ಕರೆಯುತ್ತೇವೆ. ಅಲ್ಲಿ ನಿಂತು ಅವರು ಕ್ರಿಮಿನಲ್ ಪ್ರಕರಣ ಎಂದು ಸಾಬೀತು ಮಾಡಲಿ. ತನಿಖಾಧಿಕಾರಿ ಪಾಠ ಕಲಿಯಬೇಕು ಎಂದು ಕಿಡಿಕಾರಿತು.</p>.<p>ಸಿವಿಲ್ ವ್ಯಾಜ್ಯವನ್ನು ಕ್ರಿಮಿನಲ್ ಕಾನೂನು ವ್ಯಾಪ್ತಿಯಲ್ಲಿ ಏಕೆ ತರಲಾಗುತ್ತಿದೆ ಎಂಬುದನ್ನು ವಿವರಿಸಿ, ಪ್ರಮಾಣಪತ್ರ ಸಲ್ಲಿಸಿ ಎಂದು ಪೊಲೀಸ್ ಮಹಾ ನಿರ್ದೇಶಕ ಮತ್ತು ಗೌತಮ ಬುದ್ಧ ನಗರ ಜಿಲ್ಲೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಅವರಿಗೆ ಸೂಚಿಸಿತು.</p>.<p>ನೊಯಿಡಾದ ಸೆಕ್ಟರ್–39 ಪೊಲೀಸ್ ಠಾಣೆಯ ತನಿಖಾಧಿಕಾರಿ ಸಾಕ್ಷಿ ಕಟಕಟೆಗೆ ಬಂದು, ಈ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸುವ ಅಗತ್ಯವೇನಿತ್ತು ಎಂಬುದಾಗಿ ಉತ್ತರಿಸಬೇಕು ಎಂದು ಸೂಚಿಸಿತು.</p>.<p>ದೇಬು ಸಿಂಗ್ ಮತ್ತು ದೀಪಕ್ ಸಿಂಗ್ ಎಂಬುವವರ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಮಾಡಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಇಬ್ಬರೂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. </p>.<p>ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನೊಯಿಡಾದ ವಿಚಾರಣಾ ನ್ಯಾಯಾಲಯದಲ್ಲಿ ಇವರ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಚಾರಣೆ ನಡೆಸಲು ತಡೆ ನೀಡಿತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>