ಮಹಿಳಾ ಮೀಸಲಾತಿ ಕಾನೂನನ್ನು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೂ ಮೊದಲೇ ಅನುಷ್ಠಾನಕ್ಕೆ ತರುವಂತೆ ಆದೇಶಿಸಬೇಕು ಎಂದು ಕೋರಿ ಕಾಂಗ್ರೆಸ್ಸಿನ ಜಯಾ ಠಾಕೂರ್ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರವಾಗಿ ನೋಟಿಸ್ ಜಾರಿಗೆ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್.ವಿ.ಎನ್. ಭಟ್ಟಿ ಅವರಿದ್ದ ವಿಭಾಗೀಯ ಪೀಠವು ನಿರಾಕರಿಸಿತು.